ನಾಲ್ಕು ತಂಡಗಳಾಗಿ ಕಳ್ಳತನಕ್ಕೆ ಇಳಿಯುತ್ತಿದ್ದ ಇವರು ಹೆದ್ದಾರಿ ದರೋಡೆ, ಮನೆ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಕೃತ್ಯದಲ್ಲಿ ತೊಡಗಿದ್ದರು. ಇನ್ನು ಕಳ್ಳತನ ಮಾಡುವಾಗ ಯಾರಾದರೂ ಅಡ್ಡ ಬಂದರೆ ಅಮಾನವೀಯವಾಗಿ ಅವರ ಮೇಲೆ ಆಕ್ರಮಣ ಮಾಡುತ್ತಿದ್ದರು. ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ ಸೇರಿದಂತೆ ಮಂಗಳೂರಿನ 12 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನದ ಪ್ರಕರಣಗಳು ದಾಖಲಾಗಿದ್ದವು. ಆದರೆ ಸದ್ಯ ಮಂಗಳೂರು ಪೊಲೀಸರು ಒಟ್ಟು 28 ಪೊಲೀಸ್ ಠಾಣೆಗಳಿಗೆ ಬೇಕಾದ ಈ ಕಳ್ಳರ ಗುಂಪನ್ನು ಬಂಧಿಸಿದ್ದಾರೆ.
ಏಪ್ರಿಲ್ 2 ರಂದು 50 ಜನರ ಪೈಕಿ 9 ಜನ ಆರೋಪಿಗಳನ್ನು ಬಂಧಿಸಲಾಗಿತ್ತು. ಮುಂದುವರೆದಂತೆ ಈಗ ಮತ್ತೆ 6 ಜನರನ್ನು ಬಂಧಿಸಲಾಗಿದೆ. ಅದರಲ್ಲಿ ಅರೇಹಳ್ಳಿ ಮನೆಯಲ್ಲಿ ಪಿಸ್ತೂಲ್ ಕದ್ದಿದ್ದ ಬೋಳಿಯಾರ್ ಮನ್ಸೂರ್ನನ್ನು ಕೂಡ ಬಂಧಿಸಲಾಗಿದೆ. ಈ ತಂಡದ ಕಿಂಗ್ಪಿನ್ಗಳಾದ ಮೊಹಮ್ಮದ್ ಝುಬೈರ್, ಇಬ್ರಾಹಿಂ ಲತೀಫ್, ರಾಕೇಶ್, ಅರ್ಜುನ್ ಮತ್ತು ಮೋಹನ್ರನ್ನು ಕೂಡ ಬಂಧಿಸಲಾಗಿದೆ. ಬಂಧಿತರಿಂದ ಚಿನ್ನ, ಬೆಳ್ಳಿ, ಕಾರು, ಮೊಬೈಲ್ ಸೇರಿದಂತೆ 41.82 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನ ಜಪ್ತಿ ಮಾಡಲಾಗಿದೆ. ಇನ್ನು ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಮಾರಕಾಸ್ತ್ರಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ:
ಮಂಗಳೂರಿನಲ್ಲಿ ದರೋಡೆ ಕೇಸ್ಗಳು ಹೆಚ್ಚುತ್ತಿವೆ, ರಾತ್ರಿ ಮನೆಯಲ್ಲಿ ಮಲಗಲೂ ಭಯವಾಗುತ್ತದೆ: ಯು.ಟಿ.ಖಾದರ್
(Mangaluru police arrested highway robbery gang)