ಮಂಗಳೂರು: ಹೆಜಮಾಡಿ ಟೋಲ್‌ಗೇಟ್ ಜೊತೆ ಸುರತ್ಕಲ್ ಟೋಲ್‌ಗೇಟ್‌ ವಿಲೀನ; ವಾಹನ ಸವಾರರಿಗೆ ಹೆಚ್ಚಿದ ಹೊರೆ

ಮಂಗಳೂರಿನ ಸುರತ್ಕಲ್ ಟೋಲ್‌ಗೇಟ್‌ನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದರೂ ಇದನ್ನು ಹೆಜಮಾಡಿ ಟೋಲ್‌ಗೇಟ್ ಜೊತೆ ವಿಲೀನಗೊಳಿಸಿರುವುದು ಚರ್ಚೆಗೆ ಕಾರಣವಾಗಿದೆ. ಟೋಲ್‌ಗೇಟ್ ರದ್ದಾದರೂ ವಾಹನ ಸವಾರರಿಗೆ ಇನ್ನಷ್ಟು ಹೊರೆ ಹೆಚ್ಚಾಗಲಿದೆಯಾ ಎಂಬ ಗೊಂದಲ ಶುರುವಾಗಿದೆ.

ಮಂಗಳೂರು: ಹೆಜಮಾಡಿ ಟೋಲ್‌ಗೇಟ್ ಜೊತೆ ಸುರತ್ಕಲ್ ಟೋಲ್‌ಗೇಟ್‌ ವಿಲೀನ; ವಾಹನ ಸವಾರರಿಗೆ ಹೆಚ್ಚಿದ ಹೊರೆ
ಹೆಜಮಾಡಿ ಟೋಲ್‌ಗೇಟ್ ಜೊತೆ ಸುರತ್ಕಲ್ ಟೋಲ್‌ಗೇಟ್‌ ವಿಲೀನ ಆರೋಪ
Follow us
| Updated By: Rakesh Nayak Manchi

Updated on: Nov 17, 2022 | 3:42 PM

ಮಂಗಳೂರು: ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್‌ನಲ್ಲಿ 2015ರಲ್ಲಿ ಆರಂಭಗೊಂಡಿದ್ದ ಟೋಲ್ ಪ್ಲಾಜಾ (surathkal toll plaza)ವನ್ನು ಕೇಂದ್ರ ಸರ್ಕಾರ ಕೊನೆಗೂ ರದ್ದು ಮಾಡಿದೆ. ಟೋಲ್‌ಗೇಟ್ ವಿರುದ್ಧ ನಿರಂತರ ಹೋರಾಟಕ್ಕೆ ಮಣಿದ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿ ಟೋಲ್‌‌ಗೇಟನ್ನು ರದ್ದುಗೊಳಿಸಿದೆ. ಆದರೆ ರದ್ದುಗೊಳಿಸಿರುವ ಟೋಲ್‌ಗೇಟ್‌ ಅನ್ನು ಪಕ್ಕದ ಹೆಜಮಾಡಿ ಟೋಲ್‌ಗೇಟ್ ಜೊತೆ ವಿಲೀನ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಯಾಕಂದರೆ ಇನ್ನುಮುಂದೆ ಹೆಜಮಾಡಿ ಟೋಲ್‌ಗೇಟ್‌ (Hejamadi toll plaza)ನಲ್ಲಿ ವಾಹನ ಸವಾರರು ಸುರತ್ಕಲ್ ಟೋಲ್‌ಪ್ಲಾಜಾದ ಹಣವನ್ನು ಸೇರಿಸಿ ಕಟ್ಟಿ ಪ್ರಯಾಣಿಸಬೇಕಾಗಿದೆ. ಸದ್ಯ ವಿಲೀನ ಪ್ರಕ್ರಿಯೆ ಮುಗಿದಿದ್ದು ಹೆಜಮಾಡಿ ಟೋಲ್‌ಪ್ಲಾಜಾದಲ್ಲಿ ಹೆಚ್ಚಿನ ದರ ನಿಗದಿಯ ನೋಟಿಫೀಕೆಶನ್ ಇನ್ನಷ್ಟೇ ಆಗಬೇಕಾಗಿದೆ.

ಈಗಾಗಲೇ ಹೋರಾಟ ಮುಕ್ತಾಯವಾದ ಬೆನ್ನಲ್ಲೇ ಇದೀಗ ಟೋಲ್​ಗೇಟ್​ಗಳನ್ನು ಮತ್ತೊಂದು ಟೋಲ್​ ಗೇಟ್​ಗೆ ವಿಲೀನ ಮಾಡಿರುವ ಆರೋಪ ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಯಾವುದೇ ದಾಖಲೆಗಳು ಇಲ್ಲ. ಆದರೆ ಬಿಜೆಪಿ ಸರ್ಕಾರ ಜನರ ಪರವಾಗಿ ಇಲ್ಲದಿರುವುದರಿಂದ ಟೋಲ್​ ಗೇಟ್ ಅನ್ನು ವಿಲೀನಗೊಳಿಸುವ ಸಾಧ್ಯತೆ ಇದೆ. ಹೀಗೆ ವಿಲೀನ ಮಾಡಿದರೆ ತಕ್ಕ ಉತ್ತರವನ್ನು ನೀಡಲು ಸಿದ್ಧರಿದ್ದೇವೆ ಎಂದು ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಹೇಳಿದ್ದಾರೆ.

ಇದನ್ನೂ ಓದಿ: ಹರೇಕಳ ಗ್ರಾಮ ಪಂಚಾಯಿತಿ ನೂತನವಾಗಿ ನಿರ್ಮಿಸಿದ ಗೋಡೆ ಮೇಲೆ ಹಾಜಬ್ಬನವರ ಚಿತ್ರ ಬಿಡಿಸಿ ಗೌರವ

ಕಾಂಗ್ರೆಸ್ ಸರ್ಕಾರವೇ ಟೋಲ್​ಗೇಟ್ ಆರಂಭಿಸಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಪ್ರತಿಭಾ ಕುಳಾಯಿ, ಟೋಲ್​ಗೇಟ್ ವಿರುದ್ಧ ಹೋರಾಟ ಆರಂಭಿಸಿ ಏಳು ವರ್ಷಗಳು ಆಗಿವೆ. ಈ ಏಳು ವರ್ಷಗಳಲ್ಲಿ ನರೇಂದ್ರ ಮೋದಿ ಅವರೇ ಕೇಂದ್ರದಲ್ಲಿ ಇದ್ದಾರೆ. ಆಗ ನಾವು ಕಾರ್ಪೊರೇಟರ್​ ಆಗಿದ್ದೆವು. ಅಂದಿನಿಂದಲೂ ಇಂದಿನವರೆಗೆ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇವೆ ಎಂದರು.

ಸುರತ್ಕಲ್ ಟೋಲ್‌ಗೇಟ್‌ನಲ್ಲಿ ಕೆ.ಎ 19 ನೋಂದಣಿ ಹೊಂದಿರುವ ಖಾಸಗಿ ವಾಹನ ಸವಾರರಿಗೆ ಟೋಲ್‌ನಿಂದ ವಿನಾಯಿತಿ ನೀಡಲಾಗಿತ್ತು. ಆದರೆ ಇನ್ನುಮುಂದೆ ಮಂಗಳೂರಿನಿಂದ ಉಡುಪಿ ಕಡೆ ಪ್ರಯಾಣಿಸುವ ಎಲ್ಲಾ ವಾಹನಗಳು ಸುರತ್ಕಲ್ ಟೋಲ್‌ಪ್ಲಾಜಾದ ಹೆಚ್ಚುವರಿ ಹಣವನ್ನು ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಪಾವತಿ ಮಾಡಿಯೇ ಹೋಗಬೇಕಾಗಿದೆ. ಇದರಿಂದಾಗಿ ವಾಹನ ಸವಾರರಿಗೆ ಲಾಭಕ್ಕಿಂತ ನಷ್ಟವೇ ಉಂಟಾಗಲಿದೆ.

ಇದನ್ನೂ ಓದಿ: Dharmasthala Lakshadeepotsava: ಐದು ದಿನಗಳು ನಡೆಯುವ ಧರ್ಮಸ್ಥಳ ಲಕ್ಷದೀಪೋತ್ಸವಕ್ಕೆ ದಿನಾಂಕ ನಿಗದಿ, ಕಾರ್ಯಕ್ರಮ ವಿವರ ಇಲ್ಲಿದೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ಥಳೀಯ ಶಾಸಕ ಭರತ್ ಶೆಟ್ಟಿ, ಕಾಂಗ್ರೆಸ್‌ನವರು ಆರಂಭಿಸಿದ್ದ ಟೋಲ್‌ಗೇಟ್‌ನ್ನು ನಾವು ನಿಲ್ಲಿಸಿದ್ದೇವೆ. ಸುರತ್ಕಲ್ ಟೋಲ್‌ಗೇಟ್ ಹೆಜಮಾಡಿ ಟೋಲ್‌ಗೇಟ್‌ಗೆ ಮರ್ಜ್ ಆಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ನಾವು ಹಲವು ಸಮಯದಿಂದ ಟೋಲ್ ಗೇಟ್ ಮುಚ್ಚುವ ಪ್ರಯತ್ನದಲ್ಲಿದ್ದೆವು. ಈಗ ಟೋಲ್ ಬಂದ್ ಆದೇಶ ಬಂದಿದೆ. ಮುಂದೆ ಜಿಲ್ಲಾಧಿಕಾರಿಗಳಿಗೆ ಆರ್ಡರ್ ತಲುಪಿ ಅವರು ನೋಟಿಫಿಕೇಶನ್ ಹೊರಡಿಸುತ್ತಾರೆ. ಅವರ ನೋಟಿಫಿಕೇಶನ್ ಬಳಿಕ ಕೆಲವೇ ದಿನಗಳಲ್ಲಿ ಸುರತ್ಕಲ್ ಟೋಲ್ ಗೇಟ್ ಬಂದ್ ಆಗುತ್ತದೆ ಎಂದು ಹೇಳಿದ್ದಾರೆ.

ಟೋಲ್‌ಗೇಟ್ ರದ್ದು ಮಾಡಿರುವ ಬಗ್ಗೆ ಸ್ವತಃ ಸಂಸದರೆ ಟ್ವೀಟ್ ಮಾಡಿದ್ದಾರೆ. ಆದರೆ ಟೋಲ್ ವಿಲೀನ ಮಾಡಿರುವುದರಿಂದ ಪಕ್ಕದ ಹೆಜಮಾಡಿ ಟೋಲ್‌ ಪ್ಲಾಜಾದಲ್ಲಿ ಹೆಚ್ಚುವರಿಯಾಗಿ ಎಷ್ಟು ಹಣ ಪಾವತಿ ಮಾಡಬೇಕಾಗುತ್ತದೆಯೇ ಎಂಬ ಆತಂಕ ವಾಹನ ಸವಾರರಲ್ಲಿದೆ. ಒಟ್ಟಿನಲ್ಲಿ ಊದುವುದನ್ನು ಕೊಟ್ಟು ಬಾರಿಸುವದನ್ನು ಖರೀದಿ ಮಾಡಿದಂತಹ ಸ್ಥಿತಿ ನಿರ್ಮಾಣವಾಗುತ್ತ ಎಂಬ ಸಂಶಯ ಮೂಡಿದೆ.

ವರದಿ: ಅಶೋಕ್, ಟಿವಿ 9 ಮಂಗಳೂರು

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ