AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ವಿಜಯೋತ್ಸವ ವೇಳೆ ಇಬ್ಬರಿಗೆ ಚೂರಿ ಇರಿತ ಕೇಸ್​: ಮತ್ತೆ 7 ಆರೋಪಿಗಳ ಬಂಧನ

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುತ್ತಿದ್ದ ಹಿನ್ನಲೆಯಲ್ಲಿ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರ ಸಂತೋಷ ಮುಗಿಲುಮುಟ್ಟಿತ್ತು. ಆದರೆ ಇದೇ ಸಂತೋಷ ಕಡಲನಗರಿ ಮಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆಗೆ ಸಾಕ್ಷಿಯಾಗಿತ್ತು. ಮೆರವಣಿಗೆಯಲ್ಲಿ ಭಾಗವಹಿಸಿದ ಇಬ್ಬರು ಬಿಜೆಪಿ ಕಾರ್ಯಕರ್ತರು ಚೂರಿ ಇರಿತಕ್ಕೆ ಒಳಗಾಗಿದ್ದರು. ಸದ್ಯ ಈ ಕೇಸ್​ಗೆ ಸಂಬಂಧ ಇದೀಗ ಮತ್ತೆ 7 ಆರೋಪಿಗಳನ್ನು ಬಂಧಿಸಲಾಗಿದೆ.

ಬಿಜೆಪಿ ವಿಜಯೋತ್ಸವ ವೇಳೆ ಇಬ್ಬರಿಗೆ ಚೂರಿ ಇರಿತ ಕೇಸ್​: ಮತ್ತೆ 7 ಆರೋಪಿಗಳ ಬಂಧನ
ಬಿಜೆಪಿ ವಿಜಯೋತ್ಸವ ವೇಳೆ ಇಬ್ಬರಿಗೆ ಚೂರಿ ಇರಿತ ಕೇಸ್​: ಮತ್ತೆ 7 ಆರೋಪಿಗಳ ಬಂಧನ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Jun 12, 2024 | 10:10 PM

Share

ಮಂಗಳೂರು, ಜೂನ್​ 12: ಬಿಜೆಪಿ (BJP) ವಿಜಯೋತ್ಸವ ವೇಳೆ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ (stabbing case) ಸಂಬಂಧಿಸಿದಂತೆ ಮತ್ತೆ 7 ಆರೋಪಿಗಳನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್, ಇರ್ಷಾದ್, ಶರ್ವಾನ್, ತಾಜುದ್ದೀನ್, ಮುಬಾರಕ್, ಅಶ್ರಫ್, ತಲ್ಲತ್ ಬಂಧಿತರು. ಆ ಮೂಲಕ ಚೂರಿ ಇರಿತ ಪ್ರಕರಣದಲ್ಲಿ ಇದುವರೆಗೆ 13 ಆರೋಪಿಗಳನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರ್ ಪ್ರದೇಶದಲ್ಲಿ ಜೂನ್ 9ರಂದು ಘೋಷಣೆ ವಿಚಾರವಾಗಿ ಇಬ್ಬರಿಗೆ ಚೂರಿ ಇರಿತವಾಗಿತ್ತು.

ಮೊನ್ನೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮ ಜೋರಾಗಿತ್ತು. ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಸಂಭ್ರಮಾಚರಣೆ ನಡೆದಿತ್ತು. ಅದೇ ರೀತಿ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರ್‌ನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದ ಮೆರವಣಿಗೆ ನಡೆಸಿದ್ದರು. ಆದ್ರೆ ಇದೇ ಮೆರವಣಿಗೆಯಲ್ಲಿ ಭಾಗವಹಿಸಿದ ಇಬ್ಬರು ಬಿಜೆಪಿ ಕಾರ್ಯಕರ್ತರು ಚೂರಿ ಇರಿತಕ್ಕೆ ಒಳಗಾಗಿದ್ರು.

ಇದನ್ನೂ ಓದಿ: ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ ಪ್ರಕರಣ; ಆರು ಮಂದಿ ಬಂಧನ, 20 ಜನ ವಶಕ್ಕೆ

ಅಷ್ಟಕ್ಕೂ ಆಗಿದ್ದೇನೆಂದ್ರೆ, ಬಿಜೆಪಿ ಮೆರವಣಿಗೆ ಬೋಳಿಯಾರ್ ಮಸೀದಿ ಮುಂದೆ ಸಾಗಿ ಬರುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಸಾಗಿದ್ದರು. ಇದೇ ಸಂದರ್ಭ ಮಸೀದಿ ಮುಂದೆ ಇದ್ದ ಯುವಕರ ಗುಂಪೊಂದು ಘೋಷಣೆ ಕೂಗುವುದಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಬಳಿಕ ಮೆರವಣಿಗೆ ಮುಂದೆ ಸಾಗಿತ್ತು. ವಿಜಯೋತ್ಸವ ಮುಗಿಸಿ ಮಸೀದಿ ಬಳಿ ಹೋಂಡಾ ಆ್ಯಕ್ಟೀವಾದಲ್ಲಿ ಬಂದ ಮೂವರು ಬಿಜೆಪಿ ಕಾರ್ಯಕರ್ತರಾದ ಹರೀಶ್, ನಂದಕುಮಾರ್, ಕೃಷ್ಣಕುಮಾರ್ ಬೋಲೋ ಭಾರತ್ ಮಾತಾ ಕೀ ಜೈ ಎಂಬ ಘೋಷಣೆ ಕೂಗಿದ್ದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಚೂರಿ ಇರಿತ ಕೇಸ್​: ಐವರ ಬಂಧನ

ಈ ಸಂದರ್ಭ ಮಸೀದಿ ಮುಂದೆ ಮೊದಲೇ ಗುಂಪು ಸೇರಿದ್ದ ಸುಮಾರು 25ಕ್ಕೂ ಹೆಚ್ಚು ಯುವಕರ ಗುಂಪು ಈ ಮೂವರನ್ನು ಅಟ್ಟಾಡಿಸಿಕೊಂಡು ಹೋಗಿದ್ದರು. ಬೋಳಿಯಾರ್‌ನ ಬಾರ್ ಮುಂಭಾಗ ತಲುಪುತ್ತಿದ್ದಂತೆ ಯುವಕರ ಗುಂಪು ಹಾಗೂ ಈ ಮೂವರ ನಡುವೆ ವಾಗ್ವಾದ ನಡೆದು ಹರೀಶ್ ಹಾಗೂ ನಂದಕುಮಾರ್‌ಗೆ ಚೂರಿಯಿಂದ ಇರಿಯಲಾಗಿತ್ತು. ಕೃಷ್ಣಕುಮಾರ್‌ಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಲಾಗಿದ್ದು ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿತ್ತು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶೋಕ್​ ಪೂಜಾರಿ, ಮಂಗಳೂರು
ಅಶೋಕ್​ ಪೂಜಾರಿ, ಮಂಗಳೂರು

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!