AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ದ್ವೇಷಕ್ಕೆ ನಡು ರಸ್ತೆಯಲ್ಲಿ ಹರಿದಿದ್ದ ನೆತ್ತರು: ರೌಡಿಶೀಟರ್​​ ಮರ್ಡರ್​​ ಕೇಸ್​​ನಲ್ಲಿ 8 ಮಂದಿ ಅಂದರ್​​

ಬೆಂಗಳೂರಿನ ಮಂಗಮ್ಮನಪಾಳ್ಯದಲ್ಲಿ ನಡೆದ ರೌಡಿಶೀಟರ್ ಮೊಹಮ್ಮದ್ ಶಬ್ಬೀರ್ ಕೊಲೆ ಪ್ರಕರಣದಲ್ಲಿ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಶಬ್ಬೀರ್ ತನ್ನ ಹಾವಳಿ ಹಾಗೂ ಹಫ್ತಾ ವಸೂಲಿಯಿಂದ ಸ್ಥಳೀಯರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ. ಅವನಿಂದ ಹಲ್ಲೆಗೊಳಗಾದವರು ಮತ್ತು ಆತನ ರೌಡಿಸಂನಿಂದ ಬೇಸತ್ತವರು ಸೇರಿ ಅವನನ್ನು ಕೊಲೆ ಮಾಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಹಳೆಯ ದ್ವೇಷವೇ ಈ ಕೃತ್ಯಕ್ಕೆ ಕಾರಣವಾಗಿದ್ದು, ತನಿಖೆ ಮುಂದುವರಿದಿದೆ.

ಹಳೇ ದ್ವೇಷಕ್ಕೆ ನಡು ರಸ್ತೆಯಲ್ಲಿ ಹರಿದಿದ್ದ ನೆತ್ತರು: ರೌಡಿಶೀಟರ್​​ ಮರ್ಡರ್​​ ಕೇಸ್​​ನಲ್ಲಿ 8 ಮಂದಿ ಅಂದರ್​​
ಕೊಲೆಯಾಗಿರುವ ರೌಡಿ ಶೀಟರ್​​
ಪ್ರಸನ್ನ ಹೆಗಡೆ
|

Updated on:Jan 21, 2026 | 7:46 PM

Share

ಬೆಂಗಳೂರು, ಜನವರಿ 21: ಬಂಡೆಪಾಳ್ಯ ಠಾಣಾ ವ್ಯಾಪ್ತಿಯ ಮಂಗಮ್ಮನಪಾಳ್ಯದಲ್ಲಿ ಹಳೇ ದ್ವೇಷದ ಹಿನ್ನೆಲೆ ನಟೋರಿಯಸ್ ರೌಡಿಶೀಟರ್ ಮೊಹಮ್ಮದ್ ಶಬ್ಬೀರ್​​ನ ವೈರಿಗಳು ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಬರೋಬ್ಬರಿ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿರುವ ಮಂಗಮ್ಮನಪಾಳ್ಯ ನಿವಾಸಿ ಮೊಹಮ್ಮದ್ ಶಬ್ಬೀರ್ ಮತ್ತು ಐವರು ರಾತ್ರಿ ತಮ್ಮ ಸ್ನೇಹಿತನ್ನ ಮಾತಾಡಿಸಿ ಆಟೋದಲ್ಲಿ ವಾಪಸ್ ಆಗುತ್ತಿದ್ದ ಸಂದರ್ಭ ದಾಳಿ ನಡೆಸಿದ್ದ ಆರೋಪಿಗಳು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು.

ಶಬ್ಬೀರ್​​ ಕಾಟ ತಾಳಲಾರದೆ ಮರ್ಡರ್​

ನೂರುಲ್ಲ, ನದೀಮ್, ಸಲ್ಮಾನ್ ಖಾನ್, ಮೊಹಮ್ಮದ್ ಅಲಿ, ಸೖಯದ್ ಇಸ್ಮಾಯಿಲ್, ಮೊಹಮ್ಮದ್ ಸಿದ್ದಿಕ್, ಸೖಯದ್ ಕಲೀಂ, ಉಮ್ರೇಜ್ ಬಂಧಿತ ಆರೋಪಿಗಳಾಗಿದ್ದು, ಹಳೆ ವೈಷ್ಯಮ್ಯ ಮತ್ತು ಹವಾ ಮಾಡೋ ವಿಚಾರಕ್ಕೆ ಶಬ್ಬೀರನನ್ನ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಮೊದಲೇ ರೌಡಿ ಶೀಟರ್ ಆಗಿದ್ದ ಶಬ್ಬೀರ್​​ ಹಾವಳಿ ಏರಿಯಾದಲ್ಲಿ ಹೆಚ್ಚಾಗಿತ್ತು. ಇಡೀ ಏರಿಯಾದಲ್ಲಿ ಯಾರೂ ಶಬ್ಬೀರ್​​ನ ಮಾತು ಮೀರುವಂತಿರಲಿಲ್ಲ. ಯಾರೇ ರೌಡಿಸಂ ಮಾಡಿದ್ರೂ ಮೊದಲು ಶಬ್ಬೀರ್​​ಗೆ ವಿಚಾರ ಹೇಳಬೇಕಿತ್ತು. ಆತನ ಬಿಟ್ಟು ಯಾವುದೇ ವ್ಯವಹಾರ ಮಾಡುವಂತಿರಲಿಲ್ಲ. ಯಾರಾದ್ರೂ ತಾನು ಮಾಡ್ತಿದ್ದ ಬ್ಯುಸಿನೆಸ್ ಮಾಡಿದ್ರೆ, ಹಫ್ತಾ ವಸೂಲಿ, ಸೆಟ್ಲಮೆಂಟ್ ಮಾಡಿದ್ರೆ ಗರಂ ಆಗ್ತಿದ್ದ. ಕೂಡಲೇ ಅವರನ್ನು ಕರೆಸಿ ಬೆದರಿಕೆ ಹಾಕಿ ಹಲ್ಲೆ ಮಾಡ್ತಿದ್ದ. ಇಂತಹುದ್ದೇ ಕಾರಣದಿಂದ ಸುಮಾರು 10-15 ಜನ ಶಬ್ಬೀರ್​​ನಿಂದ ಹಲ್ಲೆಗೊಳಗಾಗಿದ್ರು. ಹೀಗಾಗಿ ಶಬ್ಬೀರ್ ಇದ್ರೆ ನಮ್ಮ ವ್ಯವಹಾರಗಳು ನಡೆಯಲ್ಲ, ನಮ್ಮ ಜೀವಕ್ಕೆ ಅಪಾಯ ಎಂದು ಎಲ್ಲ ಸೇರಿ ಆತನ ಕತೆಯನ್ನೇ ಮುಗಿಸಿದ್ದಾರೆ ಎಂಬುದು ತನಿಖೆ ವೇಳೆ ಗೊತ್ತಾಗಿದೆ.

ಇದನ್ನೂ ಓದಿ: ರಾತ್ರಿ ವೇಳೆ ನಡುರಸ್ತೆಯಲ್ಲೇ ಝಳಪಿಸಿದ ಲಾಂಗ್​​; ಖಾರದ ಪುಡಿ ಎರಚಿ ರೌಡಿ ಶೀಟರ್​​ನ ಭೀಕರ ಹತ್ಯೆ

ಎರಡು ಬಾರಿ ಫೇಲ್​ ಆಗಿತ್ತು ಆರೋಪಿಗಳ ಪ್ಲ್ಯಾನ್​​!

ಇನ್ನು ಆರೋಪಿಗಳು ಈ ಹಿಂದೆಯೂ ಎರಡೆರಡು ಬಾರಿ ಶಬ್ಬೀರ್​​ನ ಮುಗಿಸಲೇ ಬೇಕು ಎಂದು ಹೊಂಚು ಹಾಕಿದ್ದರು. ಆದರೆ ಆತನ ಮೇಲಿನ ಭಯ ಇವರನ್ನು ಕೃತ್ಯದಿಂದ ಹಿಂದೆ ಸರಿಯುವಂತೆ ಮಾಡಿತ್ತು. ಅದಾದ ಬಳಿಕ ಮತ್ತೆ ಮೂರನೇ ಬಾರಿಗೆ ಸ್ಕೆಚ್​​ ಹಾಕಿದ್ದ ಗ್ಯಾಂಗ್​​, ಜ.12ರಂದು ಪಕ್ಕಾ ಪ್ಲ್ಯಾನ್​​ ಮಾಡಿ ಆಟೋದಲ್ಲಿ ಬರ್ತಿದ್ದ ಶಬ್ಬೀರ್ ಅಡ್ಡಗಟ್ಟಿ ಮನಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿತ್ತು. ಪ್ರಕರಣ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಿರುವ ಪೊಲೀಸರು, ಇನ್ನೂ ಕೆಲವರಿಗೆ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ವರದಿ: ಪ್ರದೀಪ್ ಚಿಕ್ಕಾಟಿ, Tv9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:10 pm, Wed, 21 January 26

Follow Us
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ