AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊನ್ನಾವರದ ಕಾಂಡ್ಲಾ ವಾಕ್ ಬೋರ್ಡ್​ಗೆ ಫಿದಾ.. ಸುಂದರ ಪರಿಸರದ ಮಧ್ಯೆ ಜನರ ವಾಕಿಂಗ್

ಉತ್ತರಕನ್ನಡ ಜಿಲ್ಲೆ ಅಂದ್ರೆ ಸಾಕು ಅದು ಪ್ರವಾಸಿಗರ ಹಾಟ್ ಸ್ಪಾಟ್ ಅನ್ನೋದ್ರಲ್ಲಿ ಎರಡು ಮಾತೇ ಇಲ್ಲ. ಅಂತಾ ಪ್ರವಾಸಿಗರ ಸ್ವರ್ಗದಲ್ಲೊಂದು ಕಾಂಡ್ಲಾ ವಾಕ್ ಶುರುವಾಗಿದ್ದು ಪ್ರವಾಸಿಗರನ್ನ ತನ್ನತ್ತ ಕೈಬೀಸಿ ಕರೆಯುತ್ತಿದೆ.

ಹೊನ್ನಾವರದ ಕಾಂಡ್ಲಾ ವಾಕ್ ಬೋರ್ಡ್​ಗೆ ಫಿದಾ.. ಸುಂದರ ಪರಿಸರದ ಮಧ್ಯೆ ಜನರ ವಾಕಿಂಗ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jan 01, 2021 | 9:53 AM

Share

ಕಾರವಾರ: ನದಿ ಮತ್ತು ಸಮುದ್ರ ಸೇರೋ ಸಂಗಮ ತೀರದಲ್ಲಿ ಎತ್ತ ನೋಡಿದರತ್ತ ಸಮೃದ್ಧವಾಗಿ ಬೆಳೆದಿರುವ ಕಾಂಡ್ಲಾ ಜಾತಿಯ ಸಸ್ಯವನ. ಕಾಂಡ್ಲಾ ಗಿಡಗಳ ನಡುವೆ ನೀರಿನ ಮೇಲೆ ಸುಸಜ್ಜಿತವಾಗಿ ನಿರ್ಮಿಸಲ್ಪಟ್ಟ ವಾಕಿಂಗ್ ಪಾತ್. ಪ್ರಕೃತಿಯ ಸೌಂದರ್ಯ ವಿಯುತ್ತಾ ವಿಹರಿಸ್ತಿರೋ ಜನ. ಪಾತ್ ನಲ್ಲೇ ಸೆಲ್ಪಿ, ಫೋಟೋ ಕ್ರೇಜ್.

ಈ ದೃಶ್ಯಗಳು ಕಂಡುಬರೋದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಇಕೋ ಬೀಚ್ ಪ್ರದೇಶದಲ್ಲಿ ಇತ್ತೀಚೆಗೆ ನಿರ್ಮಾಣವಾಗಿರುವ ಮ್ಯಾಂಗ್ರೋ ಬೋರ್ಡ್ ವಾಕ್ ಪಾರ್ಕ್ ನಲ್ಲಿ. ಈ ಕಾಂಡ್ಲಾ ವಾಕ್ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ.

ಸಮುದ್ರ ತಟದಲ್ಲಿ ಹುಲುಸಾಗಿ ಬೆಳೆಯುವ ಕಾಂಡ್ಲಾ ವನದ ನಡುವೆ ಮರದ ಹಾಸಿಗೆಯಿಂದ ವಾಕಿಂಗ್ ಪಾತ್ ಅನ್ನ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆಯ ಸಹಯೋಗದಲ್ಲಿ ನಿರ್ಮಿಸಲಾಗಿದೆ. ಇನ್ನು ಪಾತ್ ಅನ್ನ ಕಾಡು ಜಂಬೆ ಮರದ ಮೂಲಕ ನಿರ್ಮಿಸಲಾಗಿದ್ದು, ಇದು ಫೋಟೋ ಶೂಟ್ ಮತ್ತು ಸೆಲ್ಪಿ ಪ್ರಿಯರ ಹಾಟ್ ಸ್ಪಾಟ್ ಆಗಿದೆ.

ಒಟ್ನಲ್ಲಿ ವಿಶ್ವ ಮಾನ್ಯತೆ ಪಡೆದ ಇಕೋ ಬೀಚ್‌ನ ಕೂಗಳತೆ ದೂರದಲ್ಲೇ ಕಾಂಡ್ಲಾ ವಾಕ್ ಸಿದ್ದವಾಗಿದ್ದು, ಇಕೋ ಬೀಚ್​ಗೆ ಬರುವ ಪ್ರವಾಸಿಗರಂತೂ ಇಲ್ಲಿ ನಡೆಯದೇ ಮುಂದೆ ಸಾಗಲಾರರು.

ಮುರುಡೇಶ್ವರದಲ್ಲಿ ಸ್ಕೂಬಾ ಡೈವಿಂಗ್​: ಸಮುದ್ರದಾಳದ ಜಲಸಾಹಸಕ್ಕೆ ಪ್ರವಾಸಿಗರು ಫಿದಾ!

Published On - 8:55 am, Fri, 1 January 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್