AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊನ್ನಾವರದ ಕಾಂಡ್ಲಾ ವಾಕ್ ಬೋರ್ಡ್​ಗೆ ಫಿದಾ.. ಸುಂದರ ಪರಿಸರದ ಮಧ್ಯೆ ಜನರ ವಾಕಿಂಗ್

ಉತ್ತರಕನ್ನಡ ಜಿಲ್ಲೆ ಅಂದ್ರೆ ಸಾಕು ಅದು ಪ್ರವಾಸಿಗರ ಹಾಟ್ ಸ್ಪಾಟ್ ಅನ್ನೋದ್ರಲ್ಲಿ ಎರಡು ಮಾತೇ ಇಲ್ಲ. ಅಂತಾ ಪ್ರವಾಸಿಗರ ಸ್ವರ್ಗದಲ್ಲೊಂದು ಕಾಂಡ್ಲಾ ವಾಕ್ ಶುರುವಾಗಿದ್ದು ಪ್ರವಾಸಿಗರನ್ನ ತನ್ನತ್ತ ಕೈಬೀಸಿ ಕರೆಯುತ್ತಿದೆ.

ಹೊನ್ನಾವರದ ಕಾಂಡ್ಲಾ ವಾಕ್ ಬೋರ್ಡ್​ಗೆ ಫಿದಾ.. ಸುಂದರ ಪರಿಸರದ ಮಧ್ಯೆ ಜನರ ವಾಕಿಂಗ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jan 01, 2021 | 9:53 AM

Share

ಕಾರವಾರ: ನದಿ ಮತ್ತು ಸಮುದ್ರ ಸೇರೋ ಸಂಗಮ ತೀರದಲ್ಲಿ ಎತ್ತ ನೋಡಿದರತ್ತ ಸಮೃದ್ಧವಾಗಿ ಬೆಳೆದಿರುವ ಕಾಂಡ್ಲಾ ಜಾತಿಯ ಸಸ್ಯವನ. ಕಾಂಡ್ಲಾ ಗಿಡಗಳ ನಡುವೆ ನೀರಿನ ಮೇಲೆ ಸುಸಜ್ಜಿತವಾಗಿ ನಿರ್ಮಿಸಲ್ಪಟ್ಟ ವಾಕಿಂಗ್ ಪಾತ್. ಪ್ರಕೃತಿಯ ಸೌಂದರ್ಯ ವಿಯುತ್ತಾ ವಿಹರಿಸ್ತಿರೋ ಜನ. ಪಾತ್ ನಲ್ಲೇ ಸೆಲ್ಪಿ, ಫೋಟೋ ಕ್ರೇಜ್.

ಈ ದೃಶ್ಯಗಳು ಕಂಡುಬರೋದು ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಇಕೋ ಬೀಚ್ ಪ್ರದೇಶದಲ್ಲಿ ಇತ್ತೀಚೆಗೆ ನಿರ್ಮಾಣವಾಗಿರುವ ಮ್ಯಾಂಗ್ರೋ ಬೋರ್ಡ್ ವಾಕ್ ಪಾರ್ಕ್ ನಲ್ಲಿ. ಈ ಕಾಂಡ್ಲಾ ವಾಕ್ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ.

ಸಮುದ್ರ ತಟದಲ್ಲಿ ಹುಲುಸಾಗಿ ಬೆಳೆಯುವ ಕಾಂಡ್ಲಾ ವನದ ನಡುವೆ ಮರದ ಹಾಸಿಗೆಯಿಂದ ವಾಕಿಂಗ್ ಪಾತ್ ಅನ್ನ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆಯ ಸಹಯೋಗದಲ್ಲಿ ನಿರ್ಮಿಸಲಾಗಿದೆ. ಇನ್ನು ಪಾತ್ ಅನ್ನ ಕಾಡು ಜಂಬೆ ಮರದ ಮೂಲಕ ನಿರ್ಮಿಸಲಾಗಿದ್ದು, ಇದು ಫೋಟೋ ಶೂಟ್ ಮತ್ತು ಸೆಲ್ಪಿ ಪ್ರಿಯರ ಹಾಟ್ ಸ್ಪಾಟ್ ಆಗಿದೆ.

ಒಟ್ನಲ್ಲಿ ವಿಶ್ವ ಮಾನ್ಯತೆ ಪಡೆದ ಇಕೋ ಬೀಚ್‌ನ ಕೂಗಳತೆ ದೂರದಲ್ಲೇ ಕಾಂಡ್ಲಾ ವಾಕ್ ಸಿದ್ದವಾಗಿದ್ದು, ಇಕೋ ಬೀಚ್​ಗೆ ಬರುವ ಪ್ರವಾಸಿಗರಂತೂ ಇಲ್ಲಿ ನಡೆಯದೇ ಮುಂದೆ ಸಾಗಲಾರರು.

ಮುರುಡೇಶ್ವರದಲ್ಲಿ ಸ್ಕೂಬಾ ಡೈವಿಂಗ್​: ಸಮುದ್ರದಾಳದ ಜಲಸಾಹಸಕ್ಕೆ ಪ್ರವಾಸಿಗರು ಫಿದಾ!

Published On - 8:55 am, Fri, 1 January 21

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!