Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ವಿವಿಧೆಡೆ ಕೊರೊನಾ ಆತಂಕ: ಮಣಿಪಾಲದಲ್ಲಿ 72 ಮಂದಿಗೆ ಸೋಂಕು ದೃಢ, ತಮಿಳುನಾಡಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಕೊರೊನಾ ಪ್ರಕರಣಗಳ ಪ್ರಮಾಣ ಮತ್ತೆ ಏರಿಕೆಯಾಗುತ್ತಿದೆ. ಮಹಾರಾಷ್ಟ್ರ, ಕೇರಳ, ಪಂಜಾಬ್, ಚಂಡೀಗಢ, ರಾಜಸ್ಥಾನ್, ಗುಜರಾತ್ ಸಹಿತ ಕರ್ನಾಟಕದಲ್ಲೂ ಕೊವಿಡ್19 ಆತಂಕ ಹೆಚ್ಚಾಗಿದೆ. ಈ ನಡುವೆ, ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ ಎಲ್ಲಾ‌ ಕಾಲೇಜುಗಳಿಗೆ ಇಂದು (ಮಾರ್ಚ್ 22) ರಜೆ ಘೋಷಣೆ ಮಾಡಲಾಗಿದೆ.

ದೇಶದ ವಿವಿಧೆಡೆ ಕೊರೊನಾ ಆತಂಕ: ಮಣಿಪಾಲದಲ್ಲಿ 72 ಮಂದಿಗೆ ಸೋಂಕು ದೃಢ, ತಮಿಳುನಾಡಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಮಣಿಪಾಲ್​ ಇನ್​ಸ್ಟಿಟ್ಯೂಟ್ ಆಫ್​ ಟೆಕ್ನಾಲಜಿ
Follow us
TV9 Web
| Updated By: ganapathi bhat

Updated on:Apr 06, 2022 | 6:51 PM

ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಇಂದು 113 ಜನರಿಗೆ ಕೊರೊನಾ ದೃಢವಾಗಿದೆ. ಮಣಿಪಾಲದ MIT ಕ್ಯಾಂಪಸ್ ಒಂದರಲ್ಲೇ 72 ಜನರಿಗೆ ಕೊರೊನಾ ಪತ್ತೆಯಾಗಿದೆ. ಈ ಮೂಲಕ, ಎಂಐಟಿ ಕ್ಯಾಂಪಸ್​ನಲ್ಲಿ ಸೋಂಕಿತರ ಸಂಖ್ಯೆ 372ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ 190 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ‌ ಸಕ್ರಿಯ ಪ್ರಕರಣಗಳ ಸಂಖ್ಯೆ 439ಕ್ಕೆ ಏರಿಕೆಯಾಗಿದ್ದು, ಈವರೆಗೆ ಒಟ್ಟು 24,328 ಕೋವಿಡ್ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಉಡುಪಿ DHO ಡಾ. ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.

ಕೊರೊನಾ ಪ್ರಕರಣಗಳ ಪ್ರಮಾಣ ಮತ್ತೆ ಏರಿಕೆಯಾಗುತ್ತಿದೆ. ಮಹಾರಾಷ್ಟ್ರ, ಕೇರಳ, ಪಂಜಾಬ್, ಚಂಡೀಗಡ, ರಾಜಸ್ಥಾನ, ಗುಜರಾತ್ ಸಹಿತ ಕರ್ನಾಟಕದಲ್ಲೂ ಕೊವಿಡ್-19 ಆತಂಕ ಹೆಚ್ಚಾಗಿದೆ. ಈ ನಡುವೆ, ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ ಎಲ್ಲಾ‌ ಕಾಲೇಜುಗಳಿಗೆ ಇಂದು (ಮಾರ್ಚ್ 22) ರಜೆ ಘೋಷಣೆ ಮಾಡಲಾಗಿದೆ. ಆನ್‌ಲೈನ್‌ ತರಗತಿಗಳನ್ನು ಮಾತ್ರ ನಡೆಸುವಂತೆ ಸೂಚನೆ ನೀಡಲಾಗಿದೆ. ನಿನ್ನೆಯಷ್ಟೇ 9, 10, 11ನೇ ತರಗತಿ ಶಾಲೆಗಳಿಗೆ ರಜೆ ನೀಡಲಾಗಿತ್ತು.

ಕರ್ನಾಟಕ ರಾಜ್ಯದಲ್ಲಿ ಇಂದು ಹೊಸದಾಗಿ 1,445 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,71,647ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾಗೆ 12,444 ಜನರು ಬಲಿಯಾಗಿದ್ದು, ಇಂದು ಸೋಂಕಿನಿಂದ 10 ಜನರ ಸಾವನ್ನಪ್ಪಿದ್ದಾರೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 886 ಜನರಿಗೆ ಸೋಂಕು ಪತ್ತೆಯಾಗಿದೆ. ತನ್ಮೂಲಕ ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,18,558ಕ್ಕೆ ಏರಿಕೆಯಾಗಿದೆ. ಹಾಗೂ ನಗರದಲ್ಲಿ ಸೋಂಕಿನಿಂದ ಇಂದು ನಾಲ್ವರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೊವಿಡ್​ನಿಂದ ತೀರಿಕೊಂಡವರ ಸಂಖ್ಯೆ 4,553 ಆಗಿದೆ.

ರಾಜ್ಯದ ಒಟ್ಟು ಸೋಂಕಿತರ ಪೈಕಿ 9,44,917 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 14,267 ಮಂದಿ ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಮಾಹಿತಿ ನೀಡಿದೆ.

ಇದನ್ನೂ ಓದಿ: ಕೊವಿಡ್​-19 ಸೋಂಕಿತ ಪತ್ನಿಯನ್ನು ದೂರ ಮಾಡಿದ ಪತಿ; ಮತ್ತೆ ಒಂದಾಗಲು 10 ಲಕ್ಷ ರೂ.ಕೇಳುತ್ತಿದ್ದಾನೆಂದು ಠಾಣೆ ಮೆಟ್ಟಿಲೇರಿದ ನರ್ಸ್​

ಕೊರೊನಾ ಲಸಿಕೆ ಪಡೆದ ಎಐಎಂಐಎಂ ಪಕ್ಷದ ವರಿಷ್ಠ, ಸಂಸದ ಅಸಾದುದ್ದೀನ್ ಒವೈಸಿ

Published On - 10:43 pm, Mon, 22 March 21

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!