AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್ಮುಲ್​ನಲ್ಲಿ ಹಾಲಿಗೆ ನೀರು ಬೆರೆಸಿದ್ದ ಪ್ರಕರಣ; ತನಿಖೆಯನ್ನು ಸಿಐಡಿಗೆ ಒಪ್ಪಿಸಿ ಕರ್ನಾಟಕ ಸರ್ಕಾರ ಆದೇಶ

ಕಳೆದ ತಿಂಗಳ ಕೊನೆಯ ವಾರದಲ್ಲಿ ಮನ್ಮುಲ್​ನಲ್ಲಿ ಬೆಳಕಿಗೆ ಬಂದಿದ್ದ ಹಗರಣಕ್ಕೆ ಕೊನೆಗೂ ಸಿಐಡಿ ತನಿಖೆ ಖಚಿತವಾಗಿದೆ. ಇದೀಗ, ಸರ್ಕಾರದ ಉಪ‌ಕಾರ್ಯದರ್ಶಿ ನಾಗರತ್ನಮ್ಮರಿಂದ ಈ ಅಧಿಕೃತ ಆದೇಶ ಹೊರಬಿದ್ದಿದೆ.

ಮನ್ಮುಲ್​ನಲ್ಲಿ ಹಾಲಿಗೆ ನೀರು ಬೆರೆಸಿದ್ದ ಪ್ರಕರಣ; ತನಿಖೆಯನ್ನು ಸಿಐಡಿಗೆ ಒಪ್ಪಿಸಿ ಕರ್ನಾಟಕ ಸರ್ಕಾರ ಆದೇಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 30, 2021 | 7:33 PM

Share

ಮಂಡ್ಯ: ಮನ್ಮುಲ್​ನಲ್ಲಿ ಹಾಲಿಗೆ ನೀರು ಬೆರೆಸಿದ್ದ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ಆದೇಶ ಹೊರಡಿಸಲಾಗಿದೆ. ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ ಉಪ‌ಕಾರ್ಯದರ್ಶಿ ನಾಗರತ್ನಮ್ಮರಿಂದ ಆದೇಶ ನೀಡಲಾಗಿದೆ. ಪ್ರಕರಣ ಬೆಳಕಿಗೆ ಬಂದು 1 ತಿಂಗಳ ಬಳಿಕ ಸಿಐಡಿ ತನಿಖೆಗೆ ಹಸ್ತಾಂತರ ಮಾಡಲಾಗಿದೆ.

ಮೇ ತಿಂಗಳಲ್ಲಿ ಬೆಳಕಿಗೆ ಬಂದಿದ್ದ ಹಾಲಿಗೆ ನೀರು ಬೆರಕೆ ಪ್ರಕರಣವನ್ನು ಸಿಐಡಿ ತನಿಖೆ ನಡೆಸುವುದಾಗಿ ಜೂನ್ 14ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಬಳಿ ಇರುವ ಮಂಡ್ಯ ಹಾಲು ಒಕ್ಕೂಟದಲ್ಲಿ ಪ್ರಕರಣ ನಡೆದಿತ್ತು.

ಕಳೆದ ತಿಂಗಳ ಕೊನೆಯ ವಾರದಲ್ಲಿ ಮನ್ಮುಲ್​ನಲ್ಲಿ ಬೆಳಕಿಗೆ ಬಂದಿದ್ದ ಹಗರಣಕ್ಕೆ ಕೊನೆಗೂ ಸಿಐಡಿ ತನಿಖೆ ಖಚಿತವಾಗಿದೆ. ಇದೀಗ, ಸರ್ಕಾರದ ಉಪ‌ಕಾರ್ಯದರ್ಶಿ ನಾಗರತ್ನಮ್ಮರಿಂದ ಈ ಅಧಿಕೃತ ಆದೇಶ ಹೊರಬಿದ್ದಿದೆ.

ಮನ್ಮುಲ್ನಲ್ಲಿ ನೀರು ಮಿಶ್ರಿತ ಹಾಲು ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿ 6 ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಎಸ್.ಟಿ.ಸೋಮಶೇಖರ್ ಅವರು ಮದ್ದೂರಿನ ಗೆಜ್ಜಲಗೆರೆ ಡೈರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈಗಾಗಲೇ ಈ ವಿಚಾರದಲ್ಲಿ ತುಷಾರ್ ಪ್ರಾಥಮಿಕವಾಗಿ ಮತ್ತು ಪ್ರತ್ಯಕ್ಷವಾಗಿ ಭಾಗಿಯಾಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ ಎಂದು ತಿಳಿಸಿದ್ದರು.

ಕಾರ್ಯದರ್ಶಿಗಳು ಮುಖ್ಯಮಂತ್ರಿಗಳಿಗೆ ಪ್ರಾಥಮಿಕ ಟಿಪ್ಪಣಿಯನ್ನು ನೀಡಿದ್ದಾರೆ ಇದರ ಕುರಿತು ವಿಚಾರಣೆ ಮಾಡುವುದನ್ನು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು. ಈಗಾಗಲೇ ಆರು ಜನರನ್ನು ಅಮಾನತುಗೊಳಿಸಲಾಗಿದೆ. ಮ್ಯಾನೇಜರ್ ರವರನ್ನು ಸಹ ವರ್ಗಾವಣೆ ಮಾಡಿ ಬೇರೆ ಎಂ.ಡಿ ಯವರನ್ನು ನಿಯೋಜಿಸುವುದಾಗಿದೆ ಎಂದು ತಿಳಿಸಿದ್ದರು.

ಸಹಕಾರ ಇಲಾಖೆಯ 64ರ ತನಿಖೆ ನಡೆಯುತ್ತಿದೆ. 2-3 ದಿನದಲ್ಲಿ ಪ್ರಕರಣದ ಸಂಪೂರ್ಣ ವರದಿ ಬರಲಿದೆ. ಎಷ್ಟು ವರ್ಷದಿಂದ ಹಗರಣ ನಡೆದಿದೆ ಎಂದು ತಿಳಿಯಬೇಕು. ಬಳಿಕ ಯಾವ ಸಂಸ್ಥೆಯಿಂದ ತನಿಖೆ ಎಂದು ಸಿಎಂ ನಿರ್ಧರಿಸ್ತಾರೆ. ಎಷ್ಟೇ ಪ್ರಭಾವಿತರಿದ್ದರೂ ತಪ್ಪು ಯಾರೇ ಮಾಡಿದ್ರೂ ಕಠಿಣ ಕ್ರಮಕ್ಕೆ ಸಿಎಂ ಸೂಚಿಸಿದ್ದಾರೆ. ರೈತರ ಸಂಸ್ಥೆಗೆ ಅನ್ಯಾಯವಾಗಬಾರದು. 14 ಒಕ್ಕೂಟಗಳಲ್ಲೂ ಟ್ಯಾಂಕರ್‌ ಪರಿಶೀಲನೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಮನ್ಮುಲ್ನಲ್ಲಿ ಹಾಲಿಗೆ ನೀರು ಬೆರೆಸಿದ ಕೇಸ್ಗೆ ಮೆಗಾ ಟ್ವಿಸ್ಟ್.. ಹಗರಣ ಕೈಬಿಡುವಂತೆ ಒತ್ತಡ ಹಾಕಿದ್ರಾ H.D.ದೇವೇಗೌಡ?

ಮನ್ಮುಲ್​ನಲ್ಲಿ ನೀರು ಮಿಶ್ರಿತ ಹಾಲು ಪೂರೈಕೆ; 6 ಅಧಿಕಾರಿಗಳು ಅಮಾನತು

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು