AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಮಂತ್ರಾಲಯ ಮಠ ಓಪನ್.. ರಾಯರ ದರ್ಶನಕ್ಕೆ ಮುಗಿಬಿದ್ದ ಭಕ್ತರು

ಕಳೆದ 50 ದಿನಗಳಿಂದ ಶ್ರೀಮಠ ಬಂದ್ ಮಾಡಲಾಗಿತ್ತು. ರಾಯರ ಬೃಂದಾವನದ ದರ್ಶನಕ್ಕೆ ಅವಕಾಶ ಇರಲಿಲ್ಲ. ಇಂದಿನಿಂದ ಕೊವಿಡ್ ನಿಯಮಗಳನ್ನ ಪಾಲಿಸಿ ಅವಕಾಶ ನೀಡಲಾಗಿದೆ. ಹೀಗಾಗಿ ರಾಯಚೂರಿನ ಹಳ್ಳಿ ಹಳ್ಳಿಯ ಜನ ಇಂದು ರಾಯರ ದರ್ಶನ ಪಡೆದಿದ್ದಾರೆ. ಆದರೆ ಕೊವಿಡ್ ನಿಯಮ‌ ಕಡ್ಡಾಯಗೊಳಿಸಿ ಅಂತಾರಾಜ್ಯ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ...

ಇಂದಿನಿಂದ ಮಂತ್ರಾಲಯ ಮಠ ಓಪನ್.. ರಾಯರ ದರ್ಶನಕ್ಕೆ ಮುಗಿಬಿದ್ದ ಭಕ್ತರು
ಮಂತ್ರಾಲಯ
TV9 Web
| Edited By: |

Updated on: Jun 22, 2021 | 12:14 PM

Share

ರಾಯಚೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಮಂತ್ರಾಲಯ ಮಠಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಭಕ್ತಾದಿಗಳಿಗೆ ಕೇವಲ ಆನ್ಲೈನ್ ಸೇವೆಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಈಗ ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದ್ದು ಇಂದಿನಿಂದ ಮಂತ್ರಾಲಯ ಶ್ರೀಮಠಕ್ಕೆ ಭಕ್ತರಿಗೆ ಅವಕಾಶ ನೀಡಲಾಗುತ್ತಿದೆ. ಇಂದಿನಿಂದ ರಾಯರ ಮೂಲ ಬೃಂದಾವನದ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಕಳೆದ 50 ದಿನಗಳಿಂದ ಶ್ರೀಮಠ ಬಂದ್ ಮಾಡಲಾಗಿತ್ತು. ರಾಯರ ಬೃಂದಾವನದ ದರ್ಶನಕ್ಕೆ ಅವಕಾಶ ಇರಲಿಲ್ಲ. ಇಂದಿನಿಂದ ಕೊವಿಡ್ ನಿಯಮಗಳನ್ನ ಪಾಲಿಸಿ ಅವಕಾಶ ನೀಡಲಾಗಿದೆ. ಹೀಗಾಗಿ ರಾಯಚೂರಿನ ಹಳ್ಳಿ ಹಳ್ಳಿಯ ಜನ ಇಂದು ರಾಯರ ದರ್ಶನ ಪಡೆದಿದ್ದಾರೆ. ಆದರೆ ಕೊವಿಡ್ ನಿಯಮ‌ ಕಡ್ಡಾಯಗೊಳಿಸಿ ಅಂತಾರಾಜ್ಯ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಕರ್ನಾಟಕದಿಂದ ಮಂತ್ರಾಲಯಕ್ಕೆ ತೆರಳಿದ್ರೆ ಒಂದು ವಾರ ಕಾಲ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಇತರೆ ಜಿಲ್ಲೆಗಳಿಂದ ತೆರಳಲು ಭಕ್ತರು ಹಿಂದೇಟು ಹಾಕುತ್ತಿದ್ದಾರೆ.

ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಮತ್ತು ಸಂಜೆ 4 ರಿಂದ ರಾತ್ರಿ 9 ರವರೆಗೆ ಭಕ್ತರು ರಾಯರ ಬೃಂದಾವನದ ದರ್ಶನ ಮಾಡಬಹುದು. ಮಠದ ಅತಿಥಿ ಗೃಹಗಳನ್ನು ಸಹ ತೆರೆಯಲಾಗುವುದು ಆದರೆ ಸಾಮೂಹಿಕ ಆಹಾರ ಸೇವೆ ಲಭ್ಯವಿರುವುದಿಲ್ಲ ಎಂದು ಮಠದ ಅಧಿಕಾರಿಗಳು ತಿಳಿಸಿದ್ದಾರೆ. ಕೊವಿಡ್ -19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಭಕ್ತರಿಗೆ ತಿಳಿಸಲಾಗಿದೆ. ಆನ್‌ಲೈನ್ ದರ್ಶನ ಮತ್ತು ಪೂಜಾ ಸೇವೆಗಳು ಎಂದಿನಂತೆ ಮುಂದುವರಿಯಲಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಂತ್ರಾಲಯ ಮೂಲ ವೃಂದಾವನ ದರ್ಶನಕ್ಕೆ ನಾಳೆಯಿಂದ ಭಕ್ತರಿಗೆ ನಿರ್ಬಂಧ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ