AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಎ ವಿರೋಧಿಸಿ ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಱಲಿ

ಬೆಂಗಳೂರು: ಸಿಎಎ ವಿರೋಧಿಸಿ ಭಾನುವಾರ ನಡೆಯಬೇಕಿದ್ದ ಪ್ರತಿಭಟನೆಯನ್ನು ನಾಳೆಗೆ ಮುಂದೂಡಲಾಗಿದೆ. ಪೊಲೀಸರು ಅನುಮತಿ ನೀಡದ ಹಿನ್ನಲೆ ಸೋಮವಾರ ನಗರದಲ್ಲಿ ಪ್ರಗತಿಪರ ಸಂಘಟನೆಗಳು, ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನಾ ಱಲಿ ನಡೆಯಲಿದೆ. ಜೆ.ಸಿ.ನಗರದಿಂದ ಕಂಟೋನ್ಮೆಂಟ್‌ ಬಳಿಯ ಖುದೂಸ್​ಸಾಬ್​ ಈದ್ಗಾ ಮೈದಾನದ ವರೆಗೆ ಱಲಿ ನಡೆಸಿ ನಂತರ ಈದ್ಗಾ ಮೈದಾನದಲ್ಲಿ ಧರಣಿ ನಡೆಸಲಿದ್ದಾರೆ. ಕ್ವೀನ್ಸ್ ರಸ್ತೆಯ ದಾರೂಸ್ ಸಲೇಂ ಕಟ್ಟಡದಲ್ಲಿ ಬಿತ್ತಿ ಪತ್ರ, ಕರಪತ್ರ ತಯಾರಿಸಲಾಗುತ್ತಿದೆ. ಕಾಲೇಜು ವಿದ್ಯಾರ್ಥಿಗಳು, ಪ್ರಗತಿಪರರು, ವಿವಿಧ ಮುಸ್ಲಿಂ ಸಂಘಟನೆಗಳಿಂದ ಸಭೆಗಳು ನಡೆಯಲಿವೆ. ನಾಳೆ ನಡೆಯಲಿರುವ ಪ್ರತಿಭಟನೆಗೆ […]

ಸಿಎಎ ವಿರೋಧಿಸಿ ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಱಲಿ
ಸಾಧು ಶ್ರೀನಾಥ್​
|

Updated on:Dec 23, 2019 | 7:47 AM

Share

ಬೆಂಗಳೂರು: ಸಿಎಎ ವಿರೋಧಿಸಿ ಭಾನುವಾರ ನಡೆಯಬೇಕಿದ್ದ ಪ್ರತಿಭಟನೆಯನ್ನು ನಾಳೆಗೆ ಮುಂದೂಡಲಾಗಿದೆ. ಪೊಲೀಸರು ಅನುಮತಿ ನೀಡದ ಹಿನ್ನಲೆ ಸೋಮವಾರ ನಗರದಲ್ಲಿ ಪ್ರಗತಿಪರ ಸಂಘಟನೆಗಳು, ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನಾ ಱಲಿ ನಡೆಯಲಿದೆ.

ಜೆ.ಸಿ.ನಗರದಿಂದ ಕಂಟೋನ್ಮೆಂಟ್‌ ಬಳಿಯ ಖುದೂಸ್​ಸಾಬ್​ ಈದ್ಗಾ ಮೈದಾನದ ವರೆಗೆ ಱಲಿ ನಡೆಸಿ ನಂತರ ಈದ್ಗಾ ಮೈದಾನದಲ್ಲಿ ಧರಣಿ ನಡೆಸಲಿದ್ದಾರೆ. ಕ್ವೀನ್ಸ್ ರಸ್ತೆಯ ದಾರೂಸ್ ಸಲೇಂ ಕಟ್ಟಡದಲ್ಲಿ ಬಿತ್ತಿ ಪತ್ರ, ಕರಪತ್ರ ತಯಾರಿಸಲಾಗುತ್ತಿದೆ. ಕಾಲೇಜು ವಿದ್ಯಾರ್ಥಿಗಳು, ಪ್ರಗತಿಪರರು, ವಿವಿಧ ಮುಸ್ಲಿಂ ಸಂಘಟನೆಗಳಿಂದ ಸಭೆಗಳು ನಡೆಯಲಿವೆ.

ನಾಳೆ ನಡೆಯಲಿರುವ ಪ್ರತಿಭಟನೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಪಕ್ಷಿಮ ಬಂಗಾಳ, ಆಂಧ್ರ ಪ್ರದೇಶದಿಂದ ಬಂದಿರುವ ಹೋರಾಟಗಾರರಿಂದ ಬೆಂಗಾಲಿ ಹಾಗೂ ತೆಲುಗು ಹಾಡುಗಳನ್ನು ಹಾಡುವ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಲು ಪ್ರತಿಭಟನಾಕಾರರು ಹಾಡುಗಳನ್ನು ರಚಿಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಬರುವ ಸಾಧ್ಯತೆ ಇದೆ.

Published On - 6:13 pm, Sun, 22 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More