AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ: ರಸ್ತೆಗೆ ಅಡ್ಡಲಾಗಿ ಬಿದ್ದ ಮರಗಳು; ಹಲವು ರಸ್ತೆಗಳ ಸಂಪರ್ಕ ಕಡಿತ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು , ಭಾರೀ ಮಳೆಗೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪ, ಆಗುಂಬೆಯಿಂದ ಮಲ್ಲಂದೂರು ಸಂಪರ್ಕಿಸುವ ರಸ್ತೆಗೆ ಮರಗಳು ಅಡ್ಡಲಾಗಿ ಬಿದ್ದಿವೆ.

Karnataka Rain: ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ: ರಸ್ತೆಗೆ ಅಡ್ಡಲಾಗಿ ಬಿದ್ದ ಮರಗಳು; ಹಲವು ರಸ್ತೆಗಳ ಸಂಪರ್ಕ ಕಡಿತ
ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಮರಗಳು
TV9 Web
| Edited By: ವಿವೇಕ ಬಿರಾದಾರ|

Updated on: Jul 13, 2022 | 3:43 PM

Share

ಶಿವಮೊಗ್ಗ: ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು , ಭಾರೀ ಮಳೆಗೆ ತೀರ್ಥಹಳ್ಳಿ (Thirthahalli) ತಾಲೂಕಿನ ಆಗುಂಬೆ (Agumbe) ಸಮೀಪ, ಆಗುಂಬೆಯಿಂದ ಮಲ್ಲಂದೂರು ಸಂಪರ್ಕಿಸುವ ರಸ್ತೆಗೆ ಮರಗಳು ಅಡ್ಡಲಾಗಿ ಬಿದ್ದಿವೆ. ಮರದ ಜೊತೆಗೆ ವಿದ್ಯುತ್ ಕಂಬಗಳು (Street lights)  ಸಹ ಧರೆಗುರುಳಿದ್ದು, ವಿದ್ಯುತ್ ತಂತಿಗಳು ಕಟ್ ಆಗಿವೆ. ಮರ ಬಿದ್ದಿದ್ದರಿಂದ ಸುಮಾರು 75 ಮನೆಗಳಿಗೆ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಬಿದರಗೋಡು ಗ್ರಾ.ಪಂ ವ್ಯಾಪ್ತಿಯ ಬಾಳೆಹಳ್ಳ ಗ್ರಾಮಕ್ಕೆ ಸಹ ಸಂಪರ್ಕ ಕಡಿತಗೊಂಡಿದೆ. ಗ್ರಾಮಸ್ಥರು ಮರಗಳ ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ.

ಜಿಲ್ಲೆಯ ಮಳೆಯ ಅವಾಂತರದಿಂದ ಸುಣ್ಣದಬಸ್ತಿ ಬಳಿ ಕೋಣಂದೂರುದಿಂದ ರಿಪ್ಪನ್‌ಪೇಟೆಗೆ ಸಂಪರ್ಕಿಸುವ  ಹೆದ್ದಾರಿಯಲ್ಲಿ ಮರ ಬಿದ್ದಿದೆ. ಪರಿಣಾಮ ರಸ್ತೆ ಸಂಪರ್ಕ ಬಂದಾಗಿದೆ. ಈ ಹಿನ್ನೆಲೆಯಲ್ಲಿ  ಬದಲಿ ಮಾರ್ಗವಾಗಿ ಹೆದ್ದಾರಿಪುರ – ಬಿದರಹಳ್ಳಿ ಮಾರ್ಗದಿಂದ ಗರ್ತಿಕೆರೆ ಮೂಲಕ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಮಾರ್ಗವು ಕಿರಿದಾಗಿರುವ ಕಾರಣ ವಾಹನ ಸವಾರರು ಪರದಾಡುತ್ತಿದ್ದಾರೆ. ಮರ ತೆರವುಗೊಳಿಸುವ ಕಾರ್ಯಾಚರಣೆ ಮುಂದುವರೆದಿದೆ. ಬೃಹತ್ ಮರವಾಗಿರುವ ಕಾರಣ ತೆರವು ಕಾರ್ಯಚರಣೆ ವಿಳಂಬವಾಗುತ್ತಿದೆ.

ಕಾಗಿನೆಲೆ ಕೆರೆ ಕೋಡಿ ಒಡೆದು ತೋಟಗಳಿಗೆ ನುಗ್ಗಿದ ನೀರು; ಬೆಳೆ ನಾಶ  

ಹಾವೇರಿ: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆ ಕೆರೆ ಕೋಡಿ ಹೊಡೆದು 200 ಎಕರೆ ಜಮೀನು ಜಲಾವೃತಗೊಂಡಿರುವ ಘಟನೆ ಹಾವೇರಿ ತಾಲೂಕಿನ ಬೆನಕನಹಳ್ಳಿ ಬಳಿ ನಡೆದಿದೆ. ಕೆರೆ ಕೋಡಿ ಒಡೆದು ಪದೇಪದೆ ಬೆಳೆಗಳು ಹಾಳಾಗುತ್ತಿವೆ. ಇದಕ್ಕೆ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಳ ಹಿನ್ನೆಲೆ ಕೆರೆಗಳು ಭರ್ತಿಯಾಗಿವೆ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ