AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ: ರಸ್ತೆಗೆ ಅಡ್ಡಲಾಗಿ ಬಿದ್ದ ಮರಗಳು; ಹಲವು ರಸ್ತೆಗಳ ಸಂಪರ್ಕ ಕಡಿತ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು , ಭಾರೀ ಮಳೆಗೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪ, ಆಗುಂಬೆಯಿಂದ ಮಲ್ಲಂದೂರು ಸಂಪರ್ಕಿಸುವ ರಸ್ತೆಗೆ ಮರಗಳು ಅಡ್ಡಲಾಗಿ ಬಿದ್ದಿವೆ.

Karnataka Rain: ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ: ರಸ್ತೆಗೆ ಅಡ್ಡಲಾಗಿ ಬಿದ್ದ ಮರಗಳು; ಹಲವು ರಸ್ತೆಗಳ ಸಂಪರ್ಕ ಕಡಿತ
ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಮರಗಳು
TV9 Web
| Edited By: |

Updated on: Jul 13, 2022 | 3:43 PM

Share

ಶಿವಮೊಗ್ಗ: ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು , ಭಾರೀ ಮಳೆಗೆ ತೀರ್ಥಹಳ್ಳಿ (Thirthahalli) ತಾಲೂಕಿನ ಆಗುಂಬೆ (Agumbe) ಸಮೀಪ, ಆಗುಂಬೆಯಿಂದ ಮಲ್ಲಂದೂರು ಸಂಪರ್ಕಿಸುವ ರಸ್ತೆಗೆ ಮರಗಳು ಅಡ್ಡಲಾಗಿ ಬಿದ್ದಿವೆ. ಮರದ ಜೊತೆಗೆ ವಿದ್ಯುತ್ ಕಂಬಗಳು (Street lights)  ಸಹ ಧರೆಗುರುಳಿದ್ದು, ವಿದ್ಯುತ್ ತಂತಿಗಳು ಕಟ್ ಆಗಿವೆ. ಮರ ಬಿದ್ದಿದ್ದರಿಂದ ಸುಮಾರು 75 ಮನೆಗಳಿಗೆ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಬಿದರಗೋಡು ಗ್ರಾ.ಪಂ ವ್ಯಾಪ್ತಿಯ ಬಾಳೆಹಳ್ಳ ಗ್ರಾಮಕ್ಕೆ ಸಹ ಸಂಪರ್ಕ ಕಡಿತಗೊಂಡಿದೆ. ಗ್ರಾಮಸ್ಥರು ಮರಗಳ ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ.

ಜಿಲ್ಲೆಯ ಮಳೆಯ ಅವಾಂತರದಿಂದ ಸುಣ್ಣದಬಸ್ತಿ ಬಳಿ ಕೋಣಂದೂರುದಿಂದ ರಿಪ್ಪನ್‌ಪೇಟೆಗೆ ಸಂಪರ್ಕಿಸುವ  ಹೆದ್ದಾರಿಯಲ್ಲಿ ಮರ ಬಿದ್ದಿದೆ. ಪರಿಣಾಮ ರಸ್ತೆ ಸಂಪರ್ಕ ಬಂದಾಗಿದೆ. ಈ ಹಿನ್ನೆಲೆಯಲ್ಲಿ  ಬದಲಿ ಮಾರ್ಗವಾಗಿ ಹೆದ್ದಾರಿಪುರ – ಬಿದರಹಳ್ಳಿ ಮಾರ್ಗದಿಂದ ಗರ್ತಿಕೆರೆ ಮೂಲಕ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಮಾರ್ಗವು ಕಿರಿದಾಗಿರುವ ಕಾರಣ ವಾಹನ ಸವಾರರು ಪರದಾಡುತ್ತಿದ್ದಾರೆ. ಮರ ತೆರವುಗೊಳಿಸುವ ಕಾರ್ಯಾಚರಣೆ ಮುಂದುವರೆದಿದೆ. ಬೃಹತ್ ಮರವಾಗಿರುವ ಕಾರಣ ತೆರವು ಕಾರ್ಯಚರಣೆ ವಿಳಂಬವಾಗುತ್ತಿದೆ.

ಕಾಗಿನೆಲೆ ಕೆರೆ ಕೋಡಿ ಒಡೆದು ತೋಟಗಳಿಗೆ ನುಗ್ಗಿದ ನೀರು; ಬೆಳೆ ನಾಶ  

ಹಾವೇರಿ: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆ ಕೆರೆ ಕೋಡಿ ಹೊಡೆದು 200 ಎಕರೆ ಜಮೀನು ಜಲಾವೃತಗೊಂಡಿರುವ ಘಟನೆ ಹಾವೇರಿ ತಾಲೂಕಿನ ಬೆನಕನಹಳ್ಳಿ ಬಳಿ ನಡೆದಿದೆ. ಕೆರೆ ಕೋಡಿ ಒಡೆದು ಪದೇಪದೆ ಬೆಳೆಗಳು ಹಾಳಾಗುತ್ತಿವೆ. ಇದಕ್ಕೆ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಳ ಹಿನ್ನೆಲೆ ಕೆರೆಗಳು ಭರ್ತಿಯಾಗಿವೆ.

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು