AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗಮ ಮಂಡಳಿ ನೇಮಕ ವಿಚಾರವಾಗಿ ಹಲವು ಸುತ್ತಿನ ಚರ್ಚೆ: ರಣದೀಪ್ ಸಿಂಗ್ ಸುರ್ಜೇವಾಲ

ಕರ್ನಾಟಕದಲ್ಲಿ ನಿಗಮ ಮಂಡಳಿ ನೇಮಕ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸಭೆಗಳನ್ನು ನಡೆಸುತ್ತಿದ್ದು, ಇದೀಗ ಮತ್ತೆ ಬೆಂಗಳೂರಿಗೆ ಆಗಮಿಸಿದ್ದಾರೆ.

ನಿಗಮ ಮಂಡಳಿ ನೇಮಕ ವಿಚಾರವಾಗಿ ಹಲವು ಸುತ್ತಿನ ಚರ್ಚೆ: ರಣದೀಪ್ ಸಿಂಗ್ ಸುರ್ಜೇವಾಲ
ರಣದೀಪ್ ಸಿಂಗ್ ಸುರ್ಜೇವಾಲImage Credit source: FILE
ಪ್ರಸನ್ನ ಗಾಂವ್ಕರ್​
| Edited By: |

Updated on:Nov 28, 2023 | 2:45 PM

Share

ಬೆಂಗಳೂರು, ನ.28: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ಅವರು ನಿಗಮ ಮಂಡಳಿ ನೇಮಕ ಸಂಬಂಧ ಸಭೆ ನಡೆಸಲು ಬೆಂಗಳೂರಿನ ತಾಜ್​ ವೆಸ್ಟ್​ ಎಂಡ್​ ಹೋಟೆಲ್​ಗೆ ಆಗಮಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿ ನೇಮಕ ಬಗ್ಗೆ ಹಲವು ಸುತ್ತಿನ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ಎಲ್ಲಾ ಅಂಶಗಳನ್ನು ಪರಿಗಣಿಸಿ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾನು ಕೂಡ ಇದೇ ಕಾರಣಕ್ಕೆ ಹಲವು ಬಾರಿ ರಾಜ್ಯಕ್ಕೆ ಬಂದಿದ್ದೇನೆ. ಎಲ್ಲಾ ಅಂಶಗಳು ಗಮನದಲ್ಲಿವೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ರಾಜಸ್ಥಾನ, ಛತ್ತೀಸ್​ಗಢದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ

ಪಂಚ ರಾಜ್ಯ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತೇವೆ ಎಂದು ಹೇಳಿದ ಸುರ್ಜೇವಾಲ, ರಾಜಸ್ಥಾನ, ಛತ್ತೀಸ್​ಗಢದಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಮಧ್ಯಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇದೆ. ಹೀಗಾಗಿ ಬಿಜೆಪಿಗೆ ಕರ್ನಾಟಕದಲ್ಲಿ ಆದ ಸ್ಥಿತಿಯೇ ಮಧ್ಯಪ್ರದೇಶದಲ್ಲೂ ಆಗುತ್ತದೆ. 2024ರ ಲೋಕಸಭೆ ಚುನಾವಣೆಗೆ ಈ ಚುನಾವಣೆ ಟ್ರೇಲರ್ ಇದ್ದಂತೆ. ಹೊಸ ಅಧ್ಯಾಯ ಇಲ್ಲಿಂದ ಶುರು ಆಗುತ್ತದೆ ಎಂದರು.

ಇದನ್ನೂ ಓದಿ: ಸುರ್ಜೇವಾಲಾ ಇಂದು ಬೆಂಗಳೂರಿಗೆ: ನಿಗಮ ಮಂಡಳಿ ನೇಮಕಾತಿ ಫೈನಲ್, ಯಾರಿಗೆ ನಿಗಮಾಧ್ಯಕ್ಷ ಭಾಗ್ಯ?

ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಜಾಹೀರಾತು ಪ್ರಕಟಿಸದಂತೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಸುರ್ಜೇವಾಲ, ಕಾನೂನಿನ ಚೌಕಟ್ಟಿನಲ್ಲೇ ಜಾಹೀರಾತು ನೀಡಿದೆ. ಆದರೆ ಆಯೋಗವು ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿರುವುದು ಸರಿಯಲ್ಲ. ಚುನಾವಣೆ ಆಯೋಗ ಸಂಪೂರ್ಣ ತಪ್ಪು ಮಾಡಿದೆ. ಬಿಜೆಪಿ ಕೂಡ ಇದೇ ರೀತಿ ಜಾಹೀರಾತು ನೀಡಿತ್ತು. ಇದಕ್ಕೆ ಸೂಕ್ತ ಉತ್ತರ ಕರ್ನಾಟಕ ಸರ್ಕಾರ ನೀಡುತ್ತದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Tue, 28 November 23

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?