AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗಮ ಮಂಡಳಿ ನೇಮಕ ವಿಚಾರವಾಗಿ ಹಲವು ಸುತ್ತಿನ ಚರ್ಚೆ: ರಣದೀಪ್ ಸಿಂಗ್ ಸುರ್ಜೇವಾಲ

ಕರ್ನಾಟಕದಲ್ಲಿ ನಿಗಮ ಮಂಡಳಿ ನೇಮಕ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸಭೆಗಳನ್ನು ನಡೆಸುತ್ತಿದ್ದು, ಇದೀಗ ಮತ್ತೆ ಬೆಂಗಳೂರಿಗೆ ಆಗಮಿಸಿದ್ದಾರೆ.

ನಿಗಮ ಮಂಡಳಿ ನೇಮಕ ವಿಚಾರವಾಗಿ ಹಲವು ಸುತ್ತಿನ ಚರ್ಚೆ: ರಣದೀಪ್ ಸಿಂಗ್ ಸುರ್ಜೇವಾಲ
ರಣದೀಪ್ ಸಿಂಗ್ ಸುರ್ಜೇವಾಲImage Credit source: FILE
ಪ್ರಸನ್ನ ಗಾಂವ್ಕರ್​
| Edited By: Rakesh Nayak Manchi|

Updated on:Nov 28, 2023 | 2:45 PM

Share

ಬೆಂಗಳೂರು, ನ.28: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ಅವರು ನಿಗಮ ಮಂಡಳಿ ನೇಮಕ ಸಂಬಂಧ ಸಭೆ ನಡೆಸಲು ಬೆಂಗಳೂರಿನ ತಾಜ್​ ವೆಸ್ಟ್​ ಎಂಡ್​ ಹೋಟೆಲ್​ಗೆ ಆಗಮಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿ ನೇಮಕ ಬಗ್ಗೆ ಹಲವು ಸುತ್ತಿನ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ಎಲ್ಲಾ ಅಂಶಗಳನ್ನು ಪರಿಗಣಿಸಿ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾನು ಕೂಡ ಇದೇ ಕಾರಣಕ್ಕೆ ಹಲವು ಬಾರಿ ರಾಜ್ಯಕ್ಕೆ ಬಂದಿದ್ದೇನೆ. ಎಲ್ಲಾ ಅಂಶಗಳು ಗಮನದಲ್ಲಿವೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ರಾಜಸ್ಥಾನ, ಛತ್ತೀಸ್​ಗಢದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ

ಪಂಚ ರಾಜ್ಯ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತೇವೆ ಎಂದು ಹೇಳಿದ ಸುರ್ಜೇವಾಲ, ರಾಜಸ್ಥಾನ, ಛತ್ತೀಸ್​ಗಢದಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಮಧ್ಯಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇದೆ. ಹೀಗಾಗಿ ಬಿಜೆಪಿಗೆ ಕರ್ನಾಟಕದಲ್ಲಿ ಆದ ಸ್ಥಿತಿಯೇ ಮಧ್ಯಪ್ರದೇಶದಲ್ಲೂ ಆಗುತ್ತದೆ. 2024ರ ಲೋಕಸಭೆ ಚುನಾವಣೆಗೆ ಈ ಚುನಾವಣೆ ಟ್ರೇಲರ್ ಇದ್ದಂತೆ. ಹೊಸ ಅಧ್ಯಾಯ ಇಲ್ಲಿಂದ ಶುರು ಆಗುತ್ತದೆ ಎಂದರು.

ಇದನ್ನೂ ಓದಿ: ಸುರ್ಜೇವಾಲಾ ಇಂದು ಬೆಂಗಳೂರಿಗೆ: ನಿಗಮ ಮಂಡಳಿ ನೇಮಕಾತಿ ಫೈನಲ್, ಯಾರಿಗೆ ನಿಗಮಾಧ್ಯಕ್ಷ ಭಾಗ್ಯ?

ತೆಲಂಗಾಣದಲ್ಲಿ ಕರ್ನಾಟಕ ಸರ್ಕಾರದ ಜಾಹೀರಾತು ಪ್ರಕಟಿಸದಂತೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಸುರ್ಜೇವಾಲ, ಕಾನೂನಿನ ಚೌಕಟ್ಟಿನಲ್ಲೇ ಜಾಹೀರಾತು ನೀಡಿದೆ. ಆದರೆ ಆಯೋಗವು ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿರುವುದು ಸರಿಯಲ್ಲ. ಚುನಾವಣೆ ಆಯೋಗ ಸಂಪೂರ್ಣ ತಪ್ಪು ಮಾಡಿದೆ. ಬಿಜೆಪಿ ಕೂಡ ಇದೇ ರೀತಿ ಜಾಹೀರಾತು ನೀಡಿತ್ತು. ಇದಕ್ಕೆ ಸೂಕ್ತ ಉತ್ತರ ಕರ್ನಾಟಕ ಸರ್ಕಾರ ನೀಡುತ್ತದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Tue, 28 November 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ