AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಚೂಡಾಮಣಿ ಸೂರ್ಯ ಗ್ರಹಣ, ಬಹುತೇಕ ದೇವಾಲಯಗಳು ಬಂದ್

ಬೆಂಗಳೂರು: ಇಂದು ಕಂಕಣ ಚೂಡಾಮಣಿ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಬಹುತೇಕ ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಹೋಮಗಳನ್ನು ಮಾಡಿ ಬಾಗಿಲುಗಳ ಬಳಿ ದರ್ಬೆ ಇಟ್ಟು ಬಂದ್ ಮಾಡಲಾಗಿದೆ. ಬಾಗಲಕೋಟೆ ‌ಜಿಲ್ಲೆ ಬಾದಾಮಿ ‌ಸಮೀಪದ ಬನಶಂಕರಿದೇವಿ ದೇವಸ್ಥಾನದಲ್ಲಿ ಗ್ರಹಣದ ವೇಳೆ ಅರ್ಚಕರಿಂದ ಜಲಾಭಿಷೇಕ ನೆರವೇರಿದೆ. ಬೆಳಿಗ್ಗೆ 7 ರಿಂದ 9 ರವರೆಗೆ ಸರ್ವಾಂಗ ಅಭಿಷೇಕ ಪೂಜೆ ನಡೆದಿದೆ. ಗ್ರಹಣ ಮುಗಿದ ಬಳಿಕ ಅಭಿಷೇಕ ಅಲಂಕಾರ ಪೂಜೆ ನಡೆಸಿ ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ ಎಂದು ಬನಶಂಕರಿ ದೇವಸ್ಥಾನದ ಟ್ರಸ್ಟ್ […]

ಇಂದು ಚೂಡಾಮಣಿ ಸೂರ್ಯ ಗ್ರಹಣ, ಬಹುತೇಕ ದೇವಾಲಯಗಳು ಬಂದ್
ಆಯೇಷಾ ಬಾನು
|

Updated on:Jun 21, 2020 | 11:23 AM

Share

ಬೆಂಗಳೂರು: ಇಂದು ಕಂಕಣ ಚೂಡಾಮಣಿ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಬಹುತೇಕ ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಹೋಮಗಳನ್ನು ಮಾಡಿ ಬಾಗಿಲುಗಳ ಬಳಿ ದರ್ಬೆ ಇಟ್ಟು ಬಂದ್ ಮಾಡಲಾಗಿದೆ. ಬಾಗಲಕೋಟೆ ‌ಜಿಲ್ಲೆ ಬಾದಾಮಿ ‌ಸಮೀಪದ ಬನಶಂಕರಿದೇವಿ ದೇವಸ್ಥಾನದಲ್ಲಿ ಗ್ರಹಣದ ವೇಳೆ ಅರ್ಚಕರಿಂದ ಜಲಾಭಿಷೇಕ ನೆರವೇರಿದೆ. ಬೆಳಿಗ್ಗೆ 7 ರಿಂದ 9 ರವರೆಗೆ ಸರ್ವಾಂಗ ಅಭಿಷೇಕ ಪೂಜೆ ನಡೆದಿದೆ.

ಗ್ರಹಣ ಮುಗಿದ ಬಳಿಕ ಅಭಿಷೇಕ ಅಲಂಕಾರ ಪೂಜೆ ನಡೆಸಿ ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ ಎಂದು ಬನಶಂಕರಿ ದೇವಸ್ಥಾನದ ಟ್ರಸ್ಟ್ ಮಂಡಳಿ ಸದಸ್ಯ ಮಹೇಶ್ ಪೂಜಾರಿ ತಿಳಿಸಿದ್ರು. ಇನ್ನು ಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಲ್ಲಿ ಬೆಳಗ್ಗೆ 7ರಿಂದ 8ಗಂಟೆ ತನಕ ನವಗ್ರಹ ಹೋಮ ನಡೆದಿದೆ. ನಂತರ ದೇವಸ್ಥಾನದ ಬಾಗಿಲು ಮುಚ್ಚಲಾಗಿದೆ. ಗ್ರಹಣ ಹಿನ್ನೆಲೆಯಲ್ಲಿ ನಗರದ ಬಹುತೇಕ ದೇವಾಲಯಗಳ ಬಾಗಿಲು ಮುಚ್ಚಾಗಿದೆ.

ಗ್ರಹಣ ಮೋಕ್ಷವಾದ ಬಳಿಕ ಮಧ್ಯಾಹ್ನ 1:35ರ ನಂತರ ದೇವಾಲಯದಲ್ಲಿ ಶುದ್ಧಿ ಕಾರ್ಯ ಮಾಡಲಾಗುತ್ತೆ. ನಂತರ ದೇವಾಲಯ ಸ್ವಚ್ಛಗೊಳಿಸಿ ಅಭಿಷೇಕ ಮಾಡಲಾಗುತ್ತೆ. ಸಂಜೆ 4 ಗಂಟೆಯ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಕೊರೊನಾ ನಿಯಮಗಳ ಅನುಸಾರ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತೆ. ಸಾಮಾಜಿಕ ಅಂತರ, ಮಾಸ್ಕ್, ಮತ್ತು ಸೈನಿಟೈಸರ್ ಬಳಕೆ ಕಡ್ಡಾಯ.

ಇಂದು ವರ್ಷದ ಮೊದಲ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಉಡುಪಿ ಕೃಷ್ಣಮಠದಲ್ಲಿ ಸ್ವಾಮೀಜಿಗಳ ಜಪ ಆರಂಭವಾಗಿದೆ. ಕೃಷ್ಣಮಠದ ಗರ್ಭಗುಡಿ ಹೊರಭಾಗದಲ್ಲಿ ಸ್ವಾಮೀಜಿಗಳು ಸೂರ್ಯಗ್ರಹಣ ಮೋಕ್ಷದವರೆಗೆ ನಿರಂತರ ಜಪ ಮಾಡಲಿದ್ದಾರೆ.

Published On - 11:10 am, Sun, 21 June 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್