AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಚೂಡಾಮಣಿ ಸೂರ್ಯ ಗ್ರಹಣ, ಬಹುತೇಕ ದೇವಾಲಯಗಳು ಬಂದ್

ಬೆಂಗಳೂರು: ಇಂದು ಕಂಕಣ ಚೂಡಾಮಣಿ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಬಹುತೇಕ ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಹೋಮಗಳನ್ನು ಮಾಡಿ ಬಾಗಿಲುಗಳ ಬಳಿ ದರ್ಬೆ ಇಟ್ಟು ಬಂದ್ ಮಾಡಲಾಗಿದೆ. ಬಾಗಲಕೋಟೆ ‌ಜಿಲ್ಲೆ ಬಾದಾಮಿ ‌ಸಮೀಪದ ಬನಶಂಕರಿದೇವಿ ದೇವಸ್ಥಾನದಲ್ಲಿ ಗ್ರಹಣದ ವೇಳೆ ಅರ್ಚಕರಿಂದ ಜಲಾಭಿಷೇಕ ನೆರವೇರಿದೆ. ಬೆಳಿಗ್ಗೆ 7 ರಿಂದ 9 ರವರೆಗೆ ಸರ್ವಾಂಗ ಅಭಿಷೇಕ ಪೂಜೆ ನಡೆದಿದೆ. ಗ್ರಹಣ ಮುಗಿದ ಬಳಿಕ ಅಭಿಷೇಕ ಅಲಂಕಾರ ಪೂಜೆ ನಡೆಸಿ ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ ಎಂದು ಬನಶಂಕರಿ ದೇವಸ್ಥಾನದ ಟ್ರಸ್ಟ್ […]

ಇಂದು ಚೂಡಾಮಣಿ ಸೂರ್ಯ ಗ್ರಹಣ, ಬಹುತೇಕ ದೇವಾಲಯಗಳು ಬಂದ್
ಆಯೇಷಾ ಬಾನು
ಆಯೇಷಾ ಬಾನು|

Updated on:Jun 21, 2020 | 11:23 AM

Share

ಬೆಂಗಳೂರು: ಇಂದು ಕಂಕಣ ಚೂಡಾಮಣಿ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಬಹುತೇಕ ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಹೋಮಗಳನ್ನು ಮಾಡಿ ಬಾಗಿಲುಗಳ ಬಳಿ ದರ್ಬೆ ಇಟ್ಟು ಬಂದ್ ಮಾಡಲಾಗಿದೆ. ಬಾಗಲಕೋಟೆ ‌ಜಿಲ್ಲೆ ಬಾದಾಮಿ ‌ಸಮೀಪದ ಬನಶಂಕರಿದೇವಿ ದೇವಸ್ಥಾನದಲ್ಲಿ ಗ್ರಹಣದ ವೇಳೆ ಅರ್ಚಕರಿಂದ ಜಲಾಭಿಷೇಕ ನೆರವೇರಿದೆ. ಬೆಳಿಗ್ಗೆ 7 ರಿಂದ 9 ರವರೆಗೆ ಸರ್ವಾಂಗ ಅಭಿಷೇಕ ಪೂಜೆ ನಡೆದಿದೆ.

ಗ್ರಹಣ ಮುಗಿದ ಬಳಿಕ ಅಭಿಷೇಕ ಅಲಂಕಾರ ಪೂಜೆ ನಡೆಸಿ ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ ಎಂದು ಬನಶಂಕರಿ ದೇವಸ್ಥಾನದ ಟ್ರಸ್ಟ್ ಮಂಡಳಿ ಸದಸ್ಯ ಮಹೇಶ್ ಪೂಜಾರಿ ತಿಳಿಸಿದ್ರು. ಇನ್ನು ಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಲ್ಲಿ ಬೆಳಗ್ಗೆ 7ರಿಂದ 8ಗಂಟೆ ತನಕ ನವಗ್ರಹ ಹೋಮ ನಡೆದಿದೆ. ನಂತರ ದೇವಸ್ಥಾನದ ಬಾಗಿಲು ಮುಚ್ಚಲಾಗಿದೆ. ಗ್ರಹಣ ಹಿನ್ನೆಲೆಯಲ್ಲಿ ನಗರದ ಬಹುತೇಕ ದೇವಾಲಯಗಳ ಬಾಗಿಲು ಮುಚ್ಚಾಗಿದೆ.

ಗ್ರಹಣ ಮೋಕ್ಷವಾದ ಬಳಿಕ ಮಧ್ಯಾಹ್ನ 1:35ರ ನಂತರ ದೇವಾಲಯದಲ್ಲಿ ಶುದ್ಧಿ ಕಾರ್ಯ ಮಾಡಲಾಗುತ್ತೆ. ನಂತರ ದೇವಾಲಯ ಸ್ವಚ್ಛಗೊಳಿಸಿ ಅಭಿಷೇಕ ಮಾಡಲಾಗುತ್ತೆ. ಸಂಜೆ 4 ಗಂಟೆಯ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಕೊರೊನಾ ನಿಯಮಗಳ ಅನುಸಾರ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತೆ. ಸಾಮಾಜಿಕ ಅಂತರ, ಮಾಸ್ಕ್, ಮತ್ತು ಸೈನಿಟೈಸರ್ ಬಳಕೆ ಕಡ್ಡಾಯ.

ಇಂದು ವರ್ಷದ ಮೊದಲ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಉಡುಪಿ ಕೃಷ್ಣಮಠದಲ್ಲಿ ಸ್ವಾಮೀಜಿಗಳ ಜಪ ಆರಂಭವಾಗಿದೆ. ಕೃಷ್ಣಮಠದ ಗರ್ಭಗುಡಿ ಹೊರಭಾಗದಲ್ಲಿ ಸ್ವಾಮೀಜಿಗಳು ಸೂರ್ಯಗ್ರಹಣ ಮೋಕ್ಷದವರೆಗೆ ನಿರಂತರ ಜಪ ಮಾಡಲಿದ್ದಾರೆ.

Published On - 11:10 am, Sun, 21 June 20

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ