ಕಂಕಣ ಸೂರ್ಯ ಗ್ರಹಣ, ತುಮಕೂರಿನ ಬಹುತೇಕ ದೇಗುಲಗಳು ಬಂದ್

ತುಮಕೂರು: ನಾಳೆ ಕಂಕಣ ಸೂರ್ಯ ಗ್ರಹಣ ಇರುವ ಹಿನ್ನೆಲೆ ತುಮಕೂರು ಜಿಲ್ಲೆಯ ಬಹುತೇಕ ದೇಗುಲಗಳ ಬಾಗಿಲು ಬಂದ್ ಆಗಲಿವೆ. ಇಂದು ಸಂಜೆಯಿಂದಲೇ ದೇವಾಲಯಗಳಲ್ಲಿ ಗ್ರಹಣ ಶಾಂತಿ ಪೂಜೆ ಆಚರಣೆ ಮಾಡಲಾಗುತ್ತದೆ. ರಾತ್ರಿ ಪೂಜೆ ಸಲ್ಲಿಸಿ ನಂತರ ದೇವಾಲಯಗಳನ್ನು ಬಂದ್ ಮಾಡಲಾಗುತ್ತದೆ. ಗ್ರಹಣ ಹಿನ್ನಲೆ ಯಡಿಯೂರು ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಗ್ರಹಣದ ನಂತರ ರುದ್ರಾಭಿಷೇಕ ಆಯೋಜಿಸಲಾಗಿದೆ. ದಸರೀಘಟ್ಟ ಚೌಡೇಶ್ವರಿ ದೇವಸ್ಥಾನ, ಗೊರವನಹಳ್ಳಿ ಲಕ್ಷ್ಮಿದೇವಸ್ಥಾನ, ಗುಬ್ಬಿ ಚನ್ನಬಸವೇಶ್ವರ ದೇವಾಸ್ಥಾನ, ದೇವರಾಯನದುರ್ಗದ ಯೋಗ ನರಸಿಂಹ […]

ಕಂಕಣ ಸೂರ್ಯ ಗ್ರಹಣ, ತುಮಕೂರಿನ ಬಹುತೇಕ ದೇಗುಲಗಳು ಬಂದ್
ಸಾಧು ಶ್ರೀನಾಥ್​

Updated on: Dec 25, 2019 | 9:07 AM

ತುಮಕೂರು: ನಾಳೆ ಕಂಕಣ ಸೂರ್ಯ ಗ್ರಹಣ ಇರುವ ಹಿನ್ನೆಲೆ ತುಮಕೂರು ಜಿಲ್ಲೆಯ ಬಹುತೇಕ ದೇಗುಲಗಳ ಬಾಗಿಲು ಬಂದ್ ಆಗಲಿವೆ. ಇಂದು ಸಂಜೆಯಿಂದಲೇ ದೇವಾಲಯಗಳಲ್ಲಿ ಗ್ರಹಣ ಶಾಂತಿ ಪೂಜೆ ಆಚರಣೆ ಮಾಡಲಾಗುತ್ತದೆ. ರಾತ್ರಿ ಪೂಜೆ ಸಲ್ಲಿಸಿ ನಂತರ ದೇವಾಲಯಗಳನ್ನು ಬಂದ್ ಮಾಡಲಾಗುತ್ತದೆ.

ಗ್ರಹಣ ಹಿನ್ನಲೆ ಯಡಿಯೂರು ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಗ್ರಹಣದ ನಂತರ ರುದ್ರಾಭಿಷೇಕ ಆಯೋಜಿಸಲಾಗಿದೆ. ದಸರೀಘಟ್ಟ ಚೌಡೇಶ್ವರಿ ದೇವಸ್ಥಾನ, ಗೊರವನಹಳ್ಳಿ ಲಕ್ಷ್ಮಿದೇವಸ್ಥಾನ, ಗುಬ್ಬಿ ಚನ್ನಬಸವೇಶ್ವರ ದೇವಾಸ್ಥಾನ, ದೇವರಾಯನದುರ್ಗದ ಯೋಗ ನರಸಿಂಹ ದೇವಸ್ಥಾನ ಸೇರಿದ್ದಂತೆ ಹಲವು ದೇವಾಲಯಗಳು ಗ್ರಹಣ ಕಾಲದಲ್ಲಿ ಮುಚ್ಚಿರಲಿವೆ. ಗ್ರಹಣ ಪ್ರಯುಕ್ತ ನೋಣವಿನಕೆರೆ ಕಾಡುಸಿದ್ದೇಶ್ವರ ಮಠದಲ್ಲಿ ಕರಿವೃಷಭ ದೇಶಿ ಕೇಂದ್ರ ಸ್ವಾಮೀಜಿಯಿಂದ ವಿಶೇಷ ಕಳಸ ಪೂಜೆ ಮಾಡಲಾಗುತ್ತದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us