AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಪ್ರಸಾದವೆಂದು ವಿಷವುಣಿಸಿದ್ದ ಸ್ವಾಮಿ ಜೈಲಿನಲ್ಲಿದ್ದುಕೊಂಡೇ ಮಾಡಿದ್ದೇನು ಗೊತ್ತಾ?

ಮೈಸೂರು: ಕಿಚ್ ಗುತ್ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಜೈಲಲ್ಲಿದ್ದುಕೊಂಡೇ ತನ್ನ ಕರಾಮತ್ತು ತೋರಿಸಿದ್ದಾರೆ. ಸಾಲೂರು ಮಠದ ನಿರ್ವಹಣೆ ಹೊಣೆಗಾರಿಕೆಯ ವಿವರಗಳನ್ನೊಳಗೊಂಡ ವಿಲ್​ ಅನ್ನು ರದ್ದು ಮಾಡಿಸಿದ್ದಾರೆ. ತಮ್ಮ ಶಿಷ್ಯ ನಾಗೇಂದ್ರನಿಗೆ ಜವಾಬ್ದಾರಿ ನೀಡಿ ಸಾಲೂರು ಮಠದ ಗುರುಸ್ವಾಮಿ ವಿಲ್ ಮಾಡಿದ್ದರು. ಆದ್ರೆ ವಿಲ್ ಮಾಡಿದ ದಿನದಿಂದಲೂ ರದ್ದು ಮಾಡಿಸಲು ಇಮ್ಮಡಿ ಮಹದೇವಸ್ವಾಮಿ ಒತ್ತಡ ಹಾಕುತ್ತಿದ್ದರು. ಈ ಮಧ್ಯೆ, ಜೈಲಿನಲ್ಲಿದ್ದುಕೊಂಡೇ ತನ್ನ ಬೆಂಬಲಿಗರು, ಶಿಷ್ಯಂದಿರ ಮೂಲಕ ಒತ್ತಡ ಹಾಕಿಸುತ್ತಿದ್ದರು. ಹೀಗಾಗಿ […]

ದೇವರ ಪ್ರಸಾದವೆಂದು ವಿಷವುಣಿಸಿದ್ದ ಸ್ವಾಮಿ ಜೈಲಿನಲ್ಲಿದ್ದುಕೊಂಡೇ ಮಾಡಿದ್ದೇನು ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 19, 2019 | 2:54 PM

Share

ಮೈಸೂರು: ಕಿಚ್ ಗುತ್ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಜೈಲಲ್ಲಿದ್ದುಕೊಂಡೇ ತನ್ನ ಕರಾಮತ್ತು ತೋರಿಸಿದ್ದಾರೆ. ಸಾಲೂರು ಮಠದ ನಿರ್ವಹಣೆ ಹೊಣೆಗಾರಿಕೆಯ ವಿವರಗಳನ್ನೊಳಗೊಂಡ ವಿಲ್​ ಅನ್ನು ರದ್ದು ಮಾಡಿಸಿದ್ದಾರೆ.

ತಮ್ಮ ಶಿಷ್ಯ ನಾಗೇಂದ್ರನಿಗೆ ಜವಾಬ್ದಾರಿ ನೀಡಿ ಸಾಲೂರು ಮಠದ ಗುರುಸ್ವಾಮಿ ವಿಲ್ ಮಾಡಿದ್ದರು. ಆದ್ರೆ ವಿಲ್ ಮಾಡಿದ ದಿನದಿಂದಲೂ ರದ್ದು ಮಾಡಿಸಲು ಇಮ್ಮಡಿ ಮಹದೇವಸ್ವಾಮಿ ಒತ್ತಡ ಹಾಕುತ್ತಿದ್ದರು. ಈ ಮಧ್ಯೆ, ಜೈಲಿನಲ್ಲಿದ್ದುಕೊಂಡೇ ತನ್ನ ಬೆಂಬಲಿಗರು, ಶಿಷ್ಯಂದಿರ ಮೂಲಕ ಒತ್ತಡ ಹಾಕಿಸುತ್ತಿದ್ದರು. ಹೀಗಾಗಿ ಇಮ್ಮಡಿ ಮಹದೇವಸ್ವಾಮಿ ಒತ್ತಡಕ್ಕೆ ಮಣಿದು ತಾವೇ ಮಾಡಿದ ವಿಲ್ ಅನ್ನು ಮೈಸೂರಿನ ರಾಮಕೃಷ್ಣನಗರದ ಉಪನೋಂದಣಿ ಕಚೇರಿಯಲ್ಲಿ ನಿನ್ನೆ ಗುರುಸ್ವಾಮಿ ರದ್ದು ಮಾಡಿಸಿದ್ದಾರೆ.

ವಿಷ ಪ್ರಸಾದ ಸೇವಿಸಿ 17 ಮಂದಿ ಮೃತಪಟ್ಟಿದ್ದರು: 2018ರ ಡಿಸೆಂಬರ್ 14ರಂದು ಸುಳ್ವಾಡಿ ಕಿಚ್​ಗುತ್ತಿ ಮಾರಮ್ಮ ದೇವಸ್ಥಾನದ ಗೋಪುರ ಶಂಕು ಸ್ಥಾಪನೆ ಸಮಾರಂಭದಲ್ಲಿ ವಿಷ ಪ್ರಸಾದ ಸೇವಿಸಿ 17 ಮಂದಿ ಮೃತಪಟ್ಟಿದ್ದರು. ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಪ್ರಕರಣ ಸಂಬಂಧ ದೇವಾಲಯ ಸೇವಾ ಟ್ರಸ್ಟ್​​ನ ಅಧ್ಯಕ್ಷರಾಗಿದ್ದ ಇಮ್ಮಡಿ ಮಹದೇವಸ್ವಾಮಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿತ್ತು. ಗೋಪುರ ನಿರ್ಮಾಣ ಸಂಬಂಧ ಎರಡು ಗುಂಪುಗಳ ನಡುವೆ ವಿವಾದವಿತ್ತು. ಹೀಗಾಗಿ ತಿನ್ನುವ ಪ್ರಸಾದದಲ್ಲಿ ಕ್ರಿಮಿನಾಷಕ ಬೆರೆಸಿ 17 ಮಂದಿ ಸಾವಿಗೆ ಕಾರಣರಾಗಿದ್ದರು.

Published On - 12:33 pm, Sat, 19 October 19

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ