AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಪ್ರಸಾದವೆಂದು ವಿಷವುಣಿಸಿದ್ದ ಸ್ವಾಮಿ ಜೈಲಿನಲ್ಲಿದ್ದುಕೊಂಡೇ ಮಾಡಿದ್ದೇನು ಗೊತ್ತಾ?

ಮೈಸೂರು: ಕಿಚ್ ಗುತ್ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಜೈಲಲ್ಲಿದ್ದುಕೊಂಡೇ ತನ್ನ ಕರಾಮತ್ತು ತೋರಿಸಿದ್ದಾರೆ. ಸಾಲೂರು ಮಠದ ನಿರ್ವಹಣೆ ಹೊಣೆಗಾರಿಕೆಯ ವಿವರಗಳನ್ನೊಳಗೊಂಡ ವಿಲ್​ ಅನ್ನು ರದ್ದು ಮಾಡಿಸಿದ್ದಾರೆ. ತಮ್ಮ ಶಿಷ್ಯ ನಾಗೇಂದ್ರನಿಗೆ ಜವಾಬ್ದಾರಿ ನೀಡಿ ಸಾಲೂರು ಮಠದ ಗುರುಸ್ವಾಮಿ ವಿಲ್ ಮಾಡಿದ್ದರು. ಆದ್ರೆ ವಿಲ್ ಮಾಡಿದ ದಿನದಿಂದಲೂ ರದ್ದು ಮಾಡಿಸಲು ಇಮ್ಮಡಿ ಮಹದೇವಸ್ವಾಮಿ ಒತ್ತಡ ಹಾಕುತ್ತಿದ್ದರು. ಈ ಮಧ್ಯೆ, ಜೈಲಿನಲ್ಲಿದ್ದುಕೊಂಡೇ ತನ್ನ ಬೆಂಬಲಿಗರು, ಶಿಷ್ಯಂದಿರ ಮೂಲಕ ಒತ್ತಡ ಹಾಕಿಸುತ್ತಿದ್ದರು. ಹೀಗಾಗಿ […]

ದೇವರ ಪ್ರಸಾದವೆಂದು ವಿಷವುಣಿಸಿದ್ದ ಸ್ವಾಮಿ ಜೈಲಿನಲ್ಲಿದ್ದುಕೊಂಡೇ ಮಾಡಿದ್ದೇನು ಗೊತ್ತಾ?
ಸಾಧು ಶ್ರೀನಾಥ್​
|

Updated on:Oct 19, 2019 | 2:54 PM

Share

ಮೈಸೂರು: ಕಿಚ್ ಗುತ್ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಜೈಲಲ್ಲಿದ್ದುಕೊಂಡೇ ತನ್ನ ಕರಾಮತ್ತು ತೋರಿಸಿದ್ದಾರೆ. ಸಾಲೂರು ಮಠದ ನಿರ್ವಹಣೆ ಹೊಣೆಗಾರಿಕೆಯ ವಿವರಗಳನ್ನೊಳಗೊಂಡ ವಿಲ್​ ಅನ್ನು ರದ್ದು ಮಾಡಿಸಿದ್ದಾರೆ.

ತಮ್ಮ ಶಿಷ್ಯ ನಾಗೇಂದ್ರನಿಗೆ ಜವಾಬ್ದಾರಿ ನೀಡಿ ಸಾಲೂರು ಮಠದ ಗುರುಸ್ವಾಮಿ ವಿಲ್ ಮಾಡಿದ್ದರು. ಆದ್ರೆ ವಿಲ್ ಮಾಡಿದ ದಿನದಿಂದಲೂ ರದ್ದು ಮಾಡಿಸಲು ಇಮ್ಮಡಿ ಮಹದೇವಸ್ವಾಮಿ ಒತ್ತಡ ಹಾಕುತ್ತಿದ್ದರು. ಈ ಮಧ್ಯೆ, ಜೈಲಿನಲ್ಲಿದ್ದುಕೊಂಡೇ ತನ್ನ ಬೆಂಬಲಿಗರು, ಶಿಷ್ಯಂದಿರ ಮೂಲಕ ಒತ್ತಡ ಹಾಕಿಸುತ್ತಿದ್ದರು. ಹೀಗಾಗಿ ಇಮ್ಮಡಿ ಮಹದೇವಸ್ವಾಮಿ ಒತ್ತಡಕ್ಕೆ ಮಣಿದು ತಾವೇ ಮಾಡಿದ ವಿಲ್ ಅನ್ನು ಮೈಸೂರಿನ ರಾಮಕೃಷ್ಣನಗರದ ಉಪನೋಂದಣಿ ಕಚೇರಿಯಲ್ಲಿ ನಿನ್ನೆ ಗುರುಸ್ವಾಮಿ ರದ್ದು ಮಾಡಿಸಿದ್ದಾರೆ.

ವಿಷ ಪ್ರಸಾದ ಸೇವಿಸಿ 17 ಮಂದಿ ಮೃತಪಟ್ಟಿದ್ದರು: 2018ರ ಡಿಸೆಂಬರ್ 14ರಂದು ಸುಳ್ವಾಡಿ ಕಿಚ್​ಗುತ್ತಿ ಮಾರಮ್ಮ ದೇವಸ್ಥಾನದ ಗೋಪುರ ಶಂಕು ಸ್ಥಾಪನೆ ಸಮಾರಂಭದಲ್ಲಿ ವಿಷ ಪ್ರಸಾದ ಸೇವಿಸಿ 17 ಮಂದಿ ಮೃತಪಟ್ಟಿದ್ದರು. ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಪ್ರಕರಣ ಸಂಬಂಧ ದೇವಾಲಯ ಸೇವಾ ಟ್ರಸ್ಟ್​​ನ ಅಧ್ಯಕ್ಷರಾಗಿದ್ದ ಇಮ್ಮಡಿ ಮಹದೇವಸ್ವಾಮಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿತ್ತು. ಗೋಪುರ ನಿರ್ಮಾಣ ಸಂಬಂಧ ಎರಡು ಗುಂಪುಗಳ ನಡುವೆ ವಿವಾದವಿತ್ತು. ಹೀಗಾಗಿ ತಿನ್ನುವ ಪ್ರಸಾದದಲ್ಲಿ ಕ್ರಿಮಿನಾಷಕ ಬೆರೆಸಿ 17 ಮಂದಿ ಸಾವಿಗೆ ಕಾರಣರಾಗಿದ್ದರು.

Published On - 12:33 pm, Sat, 19 October 19

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!