ದೇವರ ಪ್ರಸಾದವೆಂದು ವಿಷವುಣಿಸಿದ್ದ ಸ್ವಾಮಿ ಜೈಲಿನಲ್ಲಿದ್ದುಕೊಂಡೇ ಮಾಡಿದ್ದೇನು ಗೊತ್ತಾ?

ಮೈಸೂರು: ಕಿಚ್ ಗುತ್ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಜೈಲಲ್ಲಿದ್ದುಕೊಂಡೇ ತನ್ನ ಕರಾಮತ್ತು ತೋರಿಸಿದ್ದಾರೆ. ಸಾಲೂರು ಮಠದ ನಿರ್ವಹಣೆ ಹೊಣೆಗಾರಿಕೆಯ ವಿವರಗಳನ್ನೊಳಗೊಂಡ ವಿಲ್​ ಅನ್ನು ರದ್ದು ಮಾಡಿಸಿದ್ದಾರೆ. ತಮ್ಮ ಶಿಷ್ಯ ನಾಗೇಂದ್ರನಿಗೆ ಜವಾಬ್ದಾರಿ ನೀಡಿ ಸಾಲೂರು ಮಠದ ಗುರುಸ್ವಾಮಿ ವಿಲ್ ಮಾಡಿದ್ದರು. ಆದ್ರೆ ವಿಲ್ ಮಾಡಿದ ದಿನದಿಂದಲೂ ರದ್ದು ಮಾಡಿಸಲು ಇಮ್ಮಡಿ ಮಹದೇವಸ್ವಾಮಿ ಒತ್ತಡ ಹಾಕುತ್ತಿದ್ದರು. ಈ ಮಧ್ಯೆ, ಜೈಲಿನಲ್ಲಿದ್ದುಕೊಂಡೇ ತನ್ನ ಬೆಂಬಲಿಗರು, ಶಿಷ್ಯಂದಿರ ಮೂಲಕ ಒತ್ತಡ ಹಾಕಿಸುತ್ತಿದ್ದರು. ಹೀಗಾಗಿ […]

ದೇವರ ಪ್ರಸಾದವೆಂದು ವಿಷವುಣಿಸಿದ್ದ ಸ್ವಾಮಿ ಜೈಲಿನಲ್ಲಿದ್ದುಕೊಂಡೇ ಮಾಡಿದ್ದೇನು ಗೊತ್ತಾ?
ಸಾಧು ಶ್ರೀನಾಥ್​

Updated on: Oct 19, 2019 | 2:54 PM

ಮೈಸೂರು: ಕಿಚ್ ಗುತ್ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಜೈಲಲ್ಲಿದ್ದುಕೊಂಡೇ ತನ್ನ ಕರಾಮತ್ತು ತೋರಿಸಿದ್ದಾರೆ. ಸಾಲೂರು ಮಠದ ನಿರ್ವಹಣೆ ಹೊಣೆಗಾರಿಕೆಯ ವಿವರಗಳನ್ನೊಳಗೊಂಡ ವಿಲ್​ ಅನ್ನು ರದ್ದು ಮಾಡಿಸಿದ್ದಾರೆ.

ತಮ್ಮ ಶಿಷ್ಯ ನಾಗೇಂದ್ರನಿಗೆ ಜವಾಬ್ದಾರಿ ನೀಡಿ ಸಾಲೂರು ಮಠದ ಗುರುಸ್ವಾಮಿ ವಿಲ್ ಮಾಡಿದ್ದರು. ಆದ್ರೆ ವಿಲ್ ಮಾಡಿದ ದಿನದಿಂದಲೂ ರದ್ದು ಮಾಡಿಸಲು ಇಮ್ಮಡಿ ಮಹದೇವಸ್ವಾಮಿ ಒತ್ತಡ ಹಾಕುತ್ತಿದ್ದರು. ಈ ಮಧ್ಯೆ, ಜೈಲಿನಲ್ಲಿದ್ದುಕೊಂಡೇ ತನ್ನ ಬೆಂಬಲಿಗರು, ಶಿಷ್ಯಂದಿರ ಮೂಲಕ ಒತ್ತಡ ಹಾಕಿಸುತ್ತಿದ್ದರು. ಹೀಗಾಗಿ ಇಮ್ಮಡಿ ಮಹದೇವಸ್ವಾಮಿ ಒತ್ತಡಕ್ಕೆ ಮಣಿದು ತಾವೇ ಮಾಡಿದ ವಿಲ್ ಅನ್ನು ಮೈಸೂರಿನ ರಾಮಕೃಷ್ಣನಗರದ ಉಪನೋಂದಣಿ ಕಚೇರಿಯಲ್ಲಿ ನಿನ್ನೆ ಗುರುಸ್ವಾಮಿ ರದ್ದು ಮಾಡಿಸಿದ್ದಾರೆ.

ವಿಷ ಪ್ರಸಾದ ಸೇವಿಸಿ 17 ಮಂದಿ ಮೃತಪಟ್ಟಿದ್ದರು:
2018ರ ಡಿಸೆಂಬರ್ 14ರಂದು ಸುಳ್ವಾಡಿ ಕಿಚ್​ಗುತ್ತಿ ಮಾರಮ್ಮ ದೇವಸ್ಥಾನದ ಗೋಪುರ ಶಂಕು ಸ್ಥಾಪನೆ ಸಮಾರಂಭದಲ್ಲಿ ವಿಷ ಪ್ರಸಾದ ಸೇವಿಸಿ 17 ಮಂದಿ ಮೃತಪಟ್ಟಿದ್ದರು. ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಪ್ರಕರಣ ಸಂಬಂಧ ದೇವಾಲಯ ಸೇವಾ ಟ್ರಸ್ಟ್​​ನ ಅಧ್ಯಕ್ಷರಾಗಿದ್ದ ಇಮ್ಮಡಿ ಮಹದೇವಸ್ವಾಮಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿತ್ತು. ಗೋಪುರ ನಿರ್ಮಾಣ ಸಂಬಂಧ ಎರಡು ಗುಂಪುಗಳ ನಡುವೆ ವಿವಾದವಿತ್ತು. ಹೀಗಾಗಿ ತಿನ್ನುವ ಪ್ರಸಾದದಲ್ಲಿ ಕ್ರಿಮಿನಾಷಕ ಬೆರೆಸಿ 17 ಮಂದಿ ಸಾವಿಗೆ ಕಾರಣರಾಗಿದ್ದರು.

Published On - 12:33 pm, Sat, 19 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us