AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸರ್ಕಾರದ ಕಾರ್ಯಕ್ರಮದಲ್ಲಿ ಮರಾಠಿ ಪ್ರೇಮ: ಕನ್ನಡಿಗರ ಆಕ್ರೋಶ

ಒಂದು ಕಡೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗಡಿ ವಿಚಾರದಲ್ಲಿ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ. ಮತ್ತೊಂದೆಡೆ, ರಾಜ್ಯದ ಸಚಿವರ ಮರಾಠಿ ಪ್ರೇಮಕ್ಕೆ ಕನ್ನಡಿಗರ ಆಕ್ರೋಶ ವ್ಯಕ್ತವಾಗಿದೆ.

ಕರ್ನಾಟಕ ಸರ್ಕಾರದ ಕಾರ್ಯಕ್ರಮದಲ್ಲಿ ಮರಾಠಿ ಪ್ರೇಮ: ಕನ್ನಡಿಗರ ಆಕ್ರೋಶ
ಕರ್ನಾಟಕ ಸರ್ಕಾರದ ಕಾರ್ಯಕ್ರಮದಲ್ಲಿ ಮರಾಠಿ ಹಾಡು
TV9 Web
| Edited By: |

Updated on:Apr 06, 2022 | 8:48 PM

Share

ಬೆಳಗಾವಿ: ನಿಪ್ಪಾಣಿಯ ತಾಯಿ-ಮಗು ಆಸ್ಪತ್ರೆ ಉದ್ಘಾಟನೆಯಲ್ಲಿ ಮರಾಠಿ ಗೀತೆ ಹಾಡಲಾಗಿದೆ. ಸ್ವಾಗತ ಸೇರಿದಂತೆ ಬಹುತೇಕ ಭಾಷಣಕ್ಕೆ ಮರಾಠಿ ಭಾಷೆ ಬಳಕೆ ಮಾಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಶಶಿಕಲಾ ಜೊಲ್ಲೆ, ಆರೋಗ್ಯ ಸಚಿವ ಡಾ. ಸುಧಾಕರ್ ಸಮ್ಮುಖದಲ್ಲೇ ಮರಾಠಿಗೆ ಮಣೆ ಹಾಕಲಾಗಿದೆ.

ಒಂದು ಕಡೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗಡಿ ವಿಚಾರದಲ್ಲಿ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ. ಮತ್ತೊಂದೆಡೆ, ರಾಜ್ಯದ ಸಚಿವರ ಮರಾಠಿ ಪ್ರೇಮಕ್ಕೆ ಕನ್ನಡಿಗರ ಆಕ್ರೋಶ ವ್ಯಕ್ತವಾಗಿದೆ. ಸಮಾರಂಭದಲ್ಲಿ ಆಯೋಜಕರು ಮರಾಠಿ ಭಾಷೆಯ ಸ್ವಾಗತ ಗೀತೆಯನ್ನು ಹಾಡಿಸಿದ್ದಾರೆ. ಸಚಿವೆ ಶಶಿಕಲಾ ಜೊಲ್ಲೆ ಶಾಸಕರಾಗಿರುವ ಕ್ಷೇತ್ರದಲ್ಲಿ, ಮರಾಠಿಮಯವಾದ ಸರ್ಕಾರಿ ಕಾರ್ಯಕ್ರಮ ನಡೆಸಿರುವುದರ ಬಗ್ಗೆ ಜನರ ಆಕ್ರೋಶ ವ್ಯಕ್ತವಾಗಿದೆ.

ಸಚಿವೆ ಶಶಿಕಲಾ ಜೊಲ್ಲೆ ಸಮರ್ಥನೆ ಸರ್ಕಾರಿ ಕಾರ್ಯಕ್ರಮದಲ್ಲಿ ಮರಾಠಿ ಪ್ರೇಮ ವಿಚಾರವನ್ನು ಸಚಿವೆ ಶಶಿಕಲಾ ಜೊಲ್ಲೆ ಸಮರ್ಥನೆ ಮಾಡಿಕೊಂಡಿದ್ದಾರೆ. ಸರ್ಕಾರಿ ಕಾರ್ಯಕ್ರಮದಲ್ಲಿ ಕೆಲವು ವೈದ್ಯರು ಮಾತನಾಡಿದ್ದಾರೆ. ಅವರಿಗೆ ಕನ್ನಡ ಬರಲ್ಲ ಎಂದು ಭಾವನಾತ್ಮಕವಾಗಿ ಮರಾಠಿಯಲ್ಲಿ ಮಾತಾಡಿದ್ದಾರೆ. ನಿಪ್ಪಾಣಿಯಲ್ಲಿ ಮರಾಠಿ ಜೊತೆ ಕನ್ನಡ ಭಾಷೆಯೂ ಬೆಳೆಯುತ್ತಿದೆ ಎಂದು ಜೊಲ್ಲೆ ಸಮಜಾಯಿಷಿ ನೀಡಿದ್ದಾರೆ.

ನಾನು ಮತ್ತು ಡಾ.ಸುಧಾಕರ್ ಮಾತಾಡಿದಾಗ ನಮ್ಮ ಜನ ಚಪ್ಪಾಳೆ ತಟ್ಟಿದ್ದಾರೆ. ಬೆಳಗಾವಿ ಹಾಗೂ ಮಹಾರಾಷ್ಟ್ರ ಗಡಿಯಲ್ಲಿ ಮರಾಠಿ ಹಾಗೂ ಕನ್ನಡ ಭಾಷಿಕರು ಅನ್ನೋನ್ಯತೆಯಿಂದ ಇದ್ದಾರೆ. ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಗಡಿ ವಿಷಯದ ಬಗ್ಗೆ ಮಾತಾಡುವ ಅಧಿಕಾರ ಇಲ್ಲ. ಉದ್ಧವ್ ಠಾಕ್ರೆ ಹೇಳಿಕೆ ಮೂರ್ಖತನದ್ದು. ಅದನ್ನು ನಾನು ಖಂಡಿಸುತ್ತೇನೆ. ಯಾವುದೇ ಪರಿಸ್ಥಿತಿಯಲ್ಲೂ ಬೆಳಗಾವಿಯನ್ನ ಬಿಟ್ಟು ಕೊಡುವದಿಲ್ಲ ಎಂದು ಶಶಿಕಲಾ ಜೊಲ್ಲೆ ಮಾತನಾಡಿದ್ದಾರೆ.

ಕರ್ನಾಟಕ ಸರ್ಕಾರದ ಕಾರ್ಯಕ್ರಮದಲ್ಲಿ ಮರಾಠಿ ಹಾಡು

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧಟತನ ತೋರುತ್ತಿದ್ದಾರೆ.. ಗಡಿ ಸೌಹಾರ್ದತೆ ಕದಡುತ್ತಿದ್ದಾರೆ: ಸಿಎಂ ಯಡಿಯೂರಪ್ಪ ಆಕ್ರೋಶ

Published On - 4:53 pm, Mon, 18 January 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು