AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲಿ ನೆರವಿಗೆ ನಿಂತ ಮಾಲೂರಿನ ಮಾರಿಕಾಂಭ; ನಿರ್ಗತಿಕರಿಗೆ ಮೂರು ಹೊತ್ತಿನ ಊಟ ನೀಡಿ ಸಹಾಯ

ರಾಜ್ಯ ಸರ್ಕಾರ ಏಪ್ರಿಲ್ 29 ರಂದು ಲಾಕ್​ಡೌನ್ ಘೋಷಣೆ ಮಾಡಿದ ಮೇಲೆ ಮಾರಿಕಾಂಭ ದೇವಿ ಪಟ್ಟಣದ ಜನರಿಗೆ ತಾಯಿ‌ ಅನ್ನಪೂರ್ಣೆಯಾಗಿದ್ದಾಳೆ. ಕೊರೊನಾ ಸೋಂಕಿನಿಂದ‌ ಆಸ್ಪತ್ರೆ ಸೇರಿದ ರೋಗಿಗಳಿಗೆ ಈ ದೇವಾಲಯದಲ್ಲಿ ಪ್ರತಿನಿತ್ಯ ಮೂರು ಹೊತ್ತು ಚಪಾತಿ, ಅನ್ನ, ಪಲ್ಯ, ಸಾರು ಸೇರಿದಂತೆ 5 ಬಗ್ಗೆಯ ಊಟವನ್ನು ನೀಡಲಾಗುತ್ತಿದೆ.

ಕೊರೊನಾ ಕಾಲದಲ್ಲಿ ನೆರವಿಗೆ ನಿಂತ ಮಾಲೂರಿನ ಮಾರಿಕಾಂಭ; ನಿರ್ಗತಿಕರಿಗೆ ಮೂರು ಹೊತ್ತಿನ ಊಟ ನೀಡಿ ಸಹಾಯ
ಮಾಲೂರು ಮಾರಿಕಾಂಭ ದೇವಾಲಯ
preethi shettigar
|

Updated on: May 23, 2021 | 7:19 PM

Share

ಕೋಲಾರ: ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಸಾವಿನ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇನ್ನು ಸೋಂಕಿತರ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಹೀಗಾಗಿ ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಸುಧಾರಿಸಲು ಲಾಕ್​ಡೌನ್ ಘೋಷಣೆ ಮಾಡಿದೆ. ಆದರೆ ಇದರಿಂದಾಗಿ ಸಾವಿರಾರು ಜನ ಊಟ ಇಲ್ಲದೆ ನರಳುವ ಸ್ಥಿತಿ ಎದುರಾಗಿದೆ. ಇಷ್ಟೇ ಅಲ್ಲ ಕೊರೊನಾ ಎಂದು ಆಸ್ಪತ್ರೆ ಸೇರುವ ರೋಗಿಗಳಿಗು ಕೂಡ ಸರಿಯಾದ ಊಟದ ವ್ಯವಸ್ಥೆ ಇಲ್ಲ. ಹೀಗಾಗಿ ಕೋಲಾರದ ಜನ ಎಚ್ಛೇತ್ತುಕೊಂಡಿದ್ದು, ಶಕ್ತಿ ದೇವತೆ ಸನ್ನಿಧಿಯನ್ನೇ ಊಟ ತಯಾರಿಸುವ ಕೇಂದ್ರವನ್ನಾಗಿ ಮಾಡಿ ಜನರಿಗೆ ನೆರವು ನೀಡುತ್ತಿದೆ.

ಕೋಲಾರ ಜಿಲ್ಲೆಯ ಜನರ ನಂಬಿಕೆಯ ದೇವರು ಎಂದರೆ ಅದು ಮಾಲೂರಿನ ಮಾರಿಕಾಂಭ ದೇವರು. ಇಲ್ಲಿನ ಜನರಿಗೆ ಮಾರಿಕಾಂಬ ದೇವರ ಮೇಲೆ ಅಷ್ಟೊಂದು ನಂಬಿಕೆ ಇದೆ. ಸದಾ ಕಾಲ ಊರ ಜನರ ಸಂಕಷ್ಟಕ್ಕೆ ಸ್ಪಂದಿಸಿ ಜನರಿಗೆ ಶಕ್ತಿ ನೀಡುವ ದೇವತೆ ಕೊರೊನಾ ಸಂಕಷ್ಟದ ಕಾಲದಲ್ಲೂ ಸ್ಪಂದಿಸುತ್ತಿದ್ದಾಳೆ ಎಂದು ನಂಬಿದ್ದಾರೆ. ಹೀಗಾಗಿ ಮಾಲೂರು ಮಾರಿಕಾಂಭ ಟ್ರಸ್ಟ್​ನ ಸದಸ್ಯರು ಕೊರೊನಾ ಸಂಕಷ್ಟದಲ್ಲಿ ಅನೇಕ ನಿರ್ಗತಿಕರಿಗೆ ಮತ್ತು ಬಡವರಿಗೆ‌ ಆಸರೆಯಾಗಿ ಕೆಲಸ ಮಾಡುತ್ತಿದ್ದಾರೆ.

ರಾಜ್ಯ ಸರ್ಕಾರ ಏಪ್ರಿಲ್ 29 ರಂದು ಲಾಕ್​ಡೌನ್ ಘೋಷಣೆ ಮಾಡಿದ ಮೇಲೆ ಮಾರಿಕಾಂಭ ದೇವಿ ಪಟ್ಟಣದ ಜನರಿಗೆ ತಾಯಿ‌ ಅನ್ನಪೂರ್ಣೆಯಾಗಿದ್ದಾಳೆ. ಕೊರೊನಾ ಸೋಂಕಿನಿಂದ‌ ಆಸ್ಪತ್ರೆ ಸೇರಿದ ರೋಗಿಗಳಿಗೆ ಈ ದೇವಾಲಯದಲ್ಲಿ ಪ್ರತಿನಿತ್ಯ ಮೂರು ಹೊತ್ತು ಚಪಾತಿ, ಅನ್ನ, ಪಲ್ಯ, ಸಾರು ಸೇರಿದಂತೆ 5 ಬಗ್ಗೆಯ ಊಟವನ್ನು ನೀಡಲಾಗುತ್ತಿದೆ. ಜೊತೆಗೆ ಕೊರೊನಾದಲ್ಲಿ ಕೆಲಸ ಮಾಡುವ ವೈದ್ಯಕೀಯ ಸಿಬ್ಬಂದಿ, ಪೊಲೀಸರಿಗೆ ಮತ್ತು ನಿರ್ಗತಿಕರಿಗೆ ಮೂರು ಹೊತ್ತಿನ ಊಟವನ್ನು ಟ್ರಸ್ಟ್ ವತಿಯಿಂದ ನೀಡಲಾಗುತ್ತಿದೆ. ಈ ಮೂಲಕ ಪ್ರತಿನಿತ್ಯ ಸುಮಾರು 400-500 ಜನರಿಗೆ ಮಾರಿಕಾಂಭ ಟ್ರಸ್ಟ್​ನಿಂದ ಊಟ ನೀಡಲಾಗುತ್ತಿದೆ.

ಇನ್ನು ಟ್ರಸ್ಟ್ ವತಿಯಿಂದ ಮತ್ತೊಂದು ಬಹುದೊಡ್ಡ ಕಾರ್ಯ ಇಲ್ಲಿ ಮಾಡಿದ್ದಾರೆ. ಅದೆನೆಂದರೆ ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ 12 ಐಸಿಯು ಬೆಡ್​​ಗಳನ್ನು ಮಾಡಿದ್ದು, ಉಸಿರಾಟದ ತೊಂದರೆಯಿಂದ ಬಳಲುವ ಕೊರೊನಾ ಸೋಂಕಿತರಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಅಷ್ಟೇ ಅಲ್ಲದೆ ಸೋಂಕಿಗೆ ತುತ್ತಾಗಿ ಹೋಮ್ ಐಸೋಲೇಷನ್​ನಲ್ಲಿರುವ ರೋಗಿಗಳಿಗೆ ಮೆಡಿಸಿನ್ ಕಿಟ್​ಗಳನ್ನು ವ್ಯವಸ್ಥೆ ಮಾಡಿದ್ದು, ಇದನ್ನು ಮನೆ ಮನೆಗೂ ತಲುಪಿಸುವಂತಹ ಕೆಲಸ ಮಾಡುತ್ತಿದ್ದಾರೆ.

ಕೊವಿಡ್ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುವ ವೈದ್ಯರಿಗೆ ಮತ್ತು ಸಿಬ್ಬಂದಿಗೆ ಬೇಕಾಗುವಂತ ಸ್ಯಾನಿಟೈಜರ್​ ಮಾಸ್ಕ್, ಗ್ಲೌಸ್​, ಸೇರಿದಂತೆ ಸುಮಾರು 1 ಸಾವಿರ ಬೆಲೆ ಬಾಳುವ ಕಿಟ್​ಗಳನ್ನು ನೀಡಲಾಗುತ್ತಿದೆ.‌ ಸತತವಾಗಿ 24 ದಿನಗಳಿಂದ ಟ್ರಸ್ಟ್​ನ ಸಿಬ್ಬಂದಿ ಪಟ್ಟಣದ ಜನರ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸುಮಾರು 25 ಜನ ಸ್ವಯಂ ಸೇವಕರು ಈ ಕಾರ್ಯಕ್ಕೆ ಕೈಜೋಡಿಸಿದ್ದು, ಆ ಮೂಲಕ ಜನರ ಸಂಕಷ್ಟದ ಕಾಲದಲ್ಲಿ ನೆರವಿಗೆ ನಿಂತಿದ್ದಾರೆ.

ಇದನ್ನೂ ಓದಿ:

ಕೊರೊನಾದಿಂದ ತಂದೆ-ತಾಯಿಯನ್ನು ಕಳೆದುಕೊಂಡ ಸಾವಿರ ಮಕ್ಕಳಿಗೆ ಸಹಾಯ ಮಾಡುತ್ತಿರುವ ನಟಿ ಲಕ್ಷ್ಮೀ ಮಂಚು

ಕೊರೊನಾ ಚಿಕಿತ್ಸೆಗೆ ನೆರವು, ಆರ್ಥಿಕ ಸಹಾಯ, ಅರ್ಹ ಮಕ್ಕಳಿಗೆ ಉಚಿತ ಶಿಕ್ಷಣ; ಸುತ್ತೂರು ಮಠದಿಂದ ಹಲವು ಸತ್ಕಾರ್ಯ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?