AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್​ಗೆ ಕೊರೊನಾ ಸೋಂಕು

Karnataka ByElection 2021: ಅವರಿಗೆ ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಆರ್‌ಟಿಪಿಸಿಆರ್‌ ಟೆಸ್ಟ್‌ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಪ್ರತಾಪ್​ಗೌಡ ಪಾಟೀಲ್​ಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್​ಗೆ ಕೊರೊನಾ ಸೋಂಕು
ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್
guruganesh bhat
|

Updated on:Apr 11, 2021 | 9:34 PM

Share

ರಾಯಚೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್​ಗೆ ಕೊರೊನಾ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಮತ್ತು ಇತರ ಹಲವು ಸಚಿವರ ಜೊತೆ ಪ್ರತಾಪ್​ಗೌಡ ಪಾಟೀಲ್ ಪ್ರಚಾರ ನಡೆಸಿದ್ದರು. ಅವರಿಗೆ ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಆರ್‌ಟಿಪಿಸಿಆರ್‌ ಟೆಸ್ಟ್‌ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಪ್ರತಾಪ್​ಗೌಡ ಪಾಟೀಲ್​ಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್​ಗೆ ಕೊರೊನಾ ಪಾಸಿಟಿವ್ ಬಂದಿರುವ ಬಗ್ಗೆ ಇಂದು ಆರೋಗ್ಯ ಇಲಾಖೆ ಮೂಲಗಳು ಟಿವಿ9ಗೆ ಮಾಹಿತಿ ನೀಡಿವೆ. ಆದರೆ, ಪ್ರತಾಪ್​ಗೌಡ ಪಾಟೀಲ್​ ಅಧಿಕೃತವಾಗಿ ಇದುವರೆಗೂ ತಮಗೆ ಕೊರೊನಾ ಸೋಂಕು ಬಂದಿರುವುದಾಗಿ ಘೋಷಣೆ ಮಾಡಿಕೊಂಡಿಲ್ಲ. ನಾಳೆ ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್ ಅವರ ಕಡೆಯವರು ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಈ ಕುರಿತು ಪ್ರಕಟಿಸುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸದ್ಯ ಮಸ್ಕಿಯಲ್ಲೇ ಬಿಜೆಪಿ ಅಭ್ಯರ್ಥಿ ಪ್ರತಾಪ್​ಗೌಡ ಪಾಟೀಲ್ ಅವರ ಪರ ಪ್ರಚಾರ ನಡೆಸುತ್ತಿದ್ದಾರೆ. ಅಲ್ಲದೇ ರಾಜ್ಯ ಬಿಜೆಪಿಯ ಕೆಲವು ಸಚಿವರು ಮತ್ತು ನಾಯಕರು ಸಹ ಪ್ರತಾಪ್​ಗೌಡ ಪಾಟೀಲ್ ಅವರ ಪರ ಪ್ರಚಾರ ನಡೆಸುತ್ತಿದ್ದಾರೆ. ಇದೀಗ ಏ ಎಲ್ಲ ಸಚಿವರು, ನಾಯಕರಿಗೂ ಕೊರೊನಾ ಭಯ ಎದುರಾಗಿದೆ. ಈ ಎಲ್ಲ ನಾಯಕರೂ ಕ್ವಾರಂಟೈನ್ ಆಗಬೇಕಿದೆ.

ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್​ ಮೂರು ಪಕ್ಷಗಳಿಗೂ ಮಸ್ಕಿ ವಿಧಾನಸಭಾ ಕ್ಷೇತ್ರದ ಚುನಾವಣೆ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದೆ. ಕಾಂಗ್ರೆಸ್​ನಿಂದ ಬಸನಗೌಡ ತುರುವಿಹಾಳ ಕಣದಲ್ಲಿದ್ದಾರೆ. ಮಸ್ಕಿ ವಿಧಾನಸಭಾ ಕ್ಷೇತ್ರದ ಚುನಾವಣೆ ಏಪ್ರಿಲ್ 17 ರಂದು ನಡೆಯಲಿದೆ. ಮೇ 2 ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ:ಮಸ್ಕಿ ಬೈಎಲೆಕ್ಷನ್‌ನಲ್ಲಿ ಪ್ರತಾಪಗೌಡ ಪಾಟೀಲ್ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ – ಬಿ.ಎಸ್.ಯಡಿಯೂರಪ್ಪ

ಮಸ್ಕಿ ಉಪಚುನಾವಣಾ ಪ್ರಚಾರದ ವೇಳೆ ಮಿರ್ಚಿ ಕರಿದ ಶಾಸಕ ರೇಣುಕಾಚಾರ್ಯ

(maski constituency by election 2021 bjp candidate pratapgouda patil tests covid 19 positive GGD)

Published On - 7:08 pm, Sun, 11 April 21

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?