AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಕ್ರೀದ್ ಹಬ್ಬದಂದು ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ

ರಂಜಾನ್ ನಂತರ ಮೂರು ತಿಂಗಳಿಗೆ ಬರುವ ಬಕ್ರೀದ್ ಹಬ್ಬವನ್ನು ಆಚರಿಸಲು ಮುಸ್ಲಿಂ ಬಾಂಧವರು ಭರದ ಸಿದ್ಧತೆಗಳನ್ನು ನಡೆಸಿರುವರಾದರೂ ಕೊರೊನ ಸೋಂಕಿನ ಭೀತಿ ಅವರ ಉತ್ಸಾಹವನ್ನು ಕೊಂಚ ತಗ್ಗಿಸಿದೆ. ಈದ್-ಉಲ್-ಅದಾ ಎಂದೂ ಕರೆಯಲ್ಪಡುವ ಬಕ್ರೀದ್ ಹಬ್ಬವನ್ನು ಆಗಸ್ಟ್ ಒಂದರಂದು ವಿಶ್ವದಾದ್ಯಂತ ಆಚರಿಸಲಾಗುವುದು. ಪ್ರವಾದಿ ಇಬ್ರಾಹಿಂ ದೇವರಿಗೆ ತನ್ನ ಸ್ವಂತ ಮಗನನ್ನೇ ಬಲಿಕೊಡಲು ಮುಂದಾಗಿದ್ದು ಇಸ್ಲಾಂ ಧರ್ಮದ ಒಂದು ಪ್ರಮುಖ ಭಾಗವಾಗಿದೆ. ಅವರ ವಿಧೇಯತೆ ಮತ್ತು ಅಲ್ಲಾಹು ಕಡೆಗಿನ ಭಕ್ತಿಯನ್ನು ಸ್ಮರಿಸುವ ಪ್ರತೀಕವಾಗಿ ಇಸ್ಲಾಂ ಅನುಯಾಯಿಗಳು ಈ ಹಬ್ಬವನ್ನು ಕುರಿ, […]

ಬಕ್ರೀದ್ ಹಬ್ಬದಂದು ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ
ಪ್ರಾರ್ಥನೆ (
KUSHAL V
| Updated By: |

Updated on:Jul 26, 2020 | 2:15 AM

Share

ರಂಜಾನ್ ನಂತರ ಮೂರು ತಿಂಗಳಿಗೆ ಬರುವ ಬಕ್ರೀದ್ ಹಬ್ಬವನ್ನು ಆಚರಿಸಲು ಮುಸ್ಲಿಂ ಬಾಂಧವರು ಭರದ ಸಿದ್ಧತೆಗಳನ್ನು ನಡೆಸಿರುವರಾದರೂ ಕೊರೊನ ಸೋಂಕಿನ ಭೀತಿ ಅವರ ಉತ್ಸಾಹವನ್ನು ಕೊಂಚ ತಗ್ಗಿಸಿದೆ. ಈದ್-ಉಲ್-ಅದಾ ಎಂದೂ ಕರೆಯಲ್ಪಡುವ ಬಕ್ರೀದ್ ಹಬ್ಬವನ್ನು ಆಗಸ್ಟ್ ಒಂದರಂದು ವಿಶ್ವದಾದ್ಯಂತ ಆಚರಿಸಲಾಗುವುದು.

ಪ್ರವಾದಿ ಇಬ್ರಾಹಿಂ ದೇವರಿಗೆ ತನ್ನ ಸ್ವಂತ ಮಗನನ್ನೇ ಬಲಿಕೊಡಲು ಮುಂದಾಗಿದ್ದು ಇಸ್ಲಾಂ ಧರ್ಮದ ಒಂದು ಪ್ರಮುಖ ಭಾಗವಾಗಿದೆ. ಅವರ ವಿಧೇಯತೆ ಮತ್ತು ಅಲ್ಲಾಹು ಕಡೆಗಿನ ಭಕ್ತಿಯನ್ನು ಸ್ಮರಿಸುವ ಪ್ರತೀಕವಾಗಿ ಇಸ್ಲಾಂ ಅನುಯಾಯಿಗಳು ಈ ಹಬ್ಬವನ್ನು ಕುರಿ, ಮೇಕೆ, ಹಸು, ದನ ಮತ್ತು ಒಂಟೆಯನ್ನು ಬಲಿ ಕೊಡುವ ಮೂಲಕ ಆಚರಿಸುತ್ತಾರೆ.ಇಸ್ಲಾಂ ಧರ್ಮದ ಪ್ರಕಾರ ಬಕ್ರೀದ್ ರಂಜಾನ್ನಷ್ಟೇ ಅಥವಾ ಅದಕ್ಕಿಂತಲೂ ಪವಿತ್ರವಾದದ್ದು. ರಂಜಾನ್ನಂತೆ ಈ ಹಬ್ಬದಂದು ಸಹ ಮುಸ್ಲಿಮರು ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಾರೆ.

ಆದರೆ, ಕೊರೊನಾ ಪೀಡೆ ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದನ್ನು ನಿರ್ಬಂಧಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಕಾರ್ಯದರ್ಶಿ ಎ ಬಿ ಇಬ್ರಾಹಿಂ ಅವರು ಈ ಕುರಿತು ಆದೇಶವೊಂದನ್ನು ಹೊರಡಿಸಿದ್ದು, ಈದ್ಗಾ ಮೈದಾನವಲ್ಲದೆ, ಸಮುದಾಯ ಭವನ, ಶಾದಿ ಮಹಲ್ ಹಾಗೂ ಇತರ ಬಯಲು ಪ್ರದೇಶಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಜನ ಸೇರಬಾರದೆಂದು ತಿಳಿಸಿದ್ದಾರೆ.

ಸಮಾಧಾನಕರ ಅಂಶವೆಂದರೆ, ಹಬ್ಬದಂದು ಮುಸ್ಲಿಂ ಸಮುದಾಯದವರು ಮಸೀದಿಗಳಲ್ಲಿ ನಮಾಜ್ ಮಾಡಬಹುದು, ಆದರೆ ಒಂದೇ ಸಮಯದಲ್ಲಿ 50ಕ್ಕಿಂತ ಜಾಸ್ತಿ ಜನ ಸೇರುವಂತಿಲ್ಲ. ಪಂಗಡಗಳಲ್ಲಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಬಹುದಾಗಿದೆ.

ಹಬ್ಬದ ವಾತಾವರಣ ರಾಜ್ಯದಲ್ಲಿ ಮತ್ತು ಬೆಂಗಳೂರು ನಗರದಲ್ಲಿ ಈಗಾಗಲೇ ಸೃಷ್ಟಿಯಾಗಿದೆ. ಕುರಿ ಮತ್ತು ಮೇಕೆಗಳ ವ್ಯಾಪಾರ ಜೋರಾಗಿ ನಡೆಯುತ್ತಿದೆ. ಮುಸ್ಲಿಂ ಜನಾಂಗದವರು ಕುರಿ ಮತ್ತು ಅವುಗಳ ಆಹಾರಕ್ಕೆಂದು ಮೇವು ಹಾಗೂ ಕಾಳುಗಳ ಖರೀದಿಯಲ್ಲಿ ವ್ಯಸ್ತರಾಗಿದ್ದಾರೆ.

Published On - 3:50 pm, Sat, 25 July 20

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ