AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಹಗರಣ: KSDLನಲ್ಲಿ 1000 ಕೋಟಿ ರೂ ಭಷ್ಟಾಚಾರ ಆರೋಪ!

ಕರ್ನಾಟಕದಲ್ಲಿ ಶೇ 63ರಷ್ಟು ಭ್ರಷ್ಟಾಚಾರ ಇದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಸುದ್ದು ಮಾಡುತ್ತಿದ್ದು, ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಈ ಸಂಬಂಧ ವಿಪಕ್ಷ ನಾಯಕ ಅಶೋಕ್ ಹಾಗೂ ಸಿಎಂ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಮಾತಿನ ಸಮರ ನಡೆದಿದೆ. ಈ ಬೆಳಗಣಿಗೆಗಳ ನಡುವೆ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಹಗರಣ ಆರೋಪ ಕೇಳಿಬಂದಿದ್ದು, KSDL ನಲ್ಲಿ ಕೋಟ್ಯಂತರ ರೂ ಅವ್ಯವಹಾರ ನಡೆದಿದೆ ಎಂದು ಜೆಡಿಎಸ್ ಶಾಸಕ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಹಗರಣ: KSDLನಲ್ಲಿ 1000 ಕೋಟಿ ರೂ ಭಷ್ಟಾಚಾರ ಆರೋಪ!
ಜೆಡಿಎಸ್ ಶಾಸಕ ಹೆಚ್.ಟಿ ಮಂಜು
Anil Kalkere
| Edited By: |

Updated on:Dec 05, 2025 | 4:58 PM

Share

ಬೆಂಗಳೂರು, ಡಿಸೆಂಬರ್​​ 05: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಗಂಧದ ಎಣ್ಣೆ ಖರೀದಿಯಲ್ಲಿ 1000 ಕೋಟಿ ರೂ ಭ್ರಷ್ಟಾಚಾರವಾಗಿದೆ ಎಂದು ಜೆಡಿಎಸ್ ಶಾಸಕ ಹೆಚ್.ಟಿ ಮಂಜು (JDS MLA HT Manju) ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕೆಎಸ್​​​ಡಿಎಲ್​​ನಲ್ಲಿ (KSDL) ಸಾಬೂನು ತೈಲ ಕಚ್ಚಾ ಸಾಮಾಗ್ರಿಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಕಂಪನಿಗೆ ಮಾಹಿತಿ ಕೇಳಿ ಪತ್ರ ಬರೆದಿದ್ದು, ಯಾವುದೇ ಮಾಹಿತಿ ನೀಡಿಲ್ಲ ಎಂದು ಹೇಳಿದ್ದಾರೆ.

ಗಂಧದ ಎಣ್ಣೆ ಖರೀದಿಯಲ್ಲಿ ಭ್ರಷ್ಟಾಚಾರ ಆಗಿದೆ

ವಿಧಾನಸೌಧದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಹೆಚ್.ಟಿ ಮಂಜು,  ಗಂಧದ ಎಣ್ಣೆ ಖರೀದಿಯಲ್ಲಿ 1000 ಕೋಟಿ ರೂ ಭ್ರಷ್ಟಾಚಾರ ಆಗಿದೆ. 800 ಪುಟಗಳ ವರದಿಯನ್ನ ಪಡೆದಿದ್ದೇವೆ. 9 ಟೆಂಡರ್​​​ದಾಖಲೆಗಳು ಮಾತ್ರ ಸಿಕ್ಕಿವೆ. ಸರ್ಕಾರದ ಮುಖ್ಯಕಾರ್ಯದರ್ಶಿ, ಇಲಾಖೆಯ ಸಚಿವರು, ಸಿಎಂಗೆ ಪತ್ರ ಬರೆದಿದ್ದು, ಯಾರೋಬ್ಬರೂ ಈವರೆಗೆ ಉತ್ತರ ನೀಡಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಂಬಿ ಪಾಟೀಲ್ ಎಚ್ಚರಿಕೆ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ 1918ರಲ್ಲಿ ಆರಂಭವಾದ ಸಂಸ್ಥೆ. 1500 ಕೋಟಿ ರೂ ಠೇವಣಿಯ ಹಣ ಕೊಟ್ಟಿದ್ದಾರೆ. ನಕಲಿ ದಾಖಲೆ ಮಾಡಿ ಕೊಟ್ಟಿದ್ದಾರೆ. ಮಾರಾಟವಾಗಿಲ್ಲ ಅಂತ 40% ರಿಯಾಯಿತಿಗೆ ಮಾರಾಟ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಬ್ಲಾಕ್‌ ಲಿಸ್ಟ್​​ಗೆ ಸೇರಿದ ಕಂಪನಿಗೆ ಟೆಂಡರ್ 

ಬ್ಲಾಕ್‌ ಲಿಸ್ಟ್​​ಗೆ ಸೇರಿಸಿರುವ ಕರ್ನಾಟಕ ಅರೋಮಾಸ್ ಎಂಬ ಕಂಪನಿಗೆ ಟೆಂಡರ್ ಕೊಡುತ್ತಾರೆ. ಟೆಂಡರ್​ನಲ್ಲಿ ಪಾಲಿಸಬೇಕಾದ ನಿಯಮ ಪಾಲಿಸಿಲ್ಲ. ಹೊರಗಡೆಯಿಂದ ಆಮದು ಮಾಡಿಕೊಳ್ಳುತ್ತಿದ್ದೇವೆ ಅಂತಾರೆ ಆದರೆ ದಾಖಲೆ ನೀಡುತ್ತಿಲ್ಲ. ಇಲ್ಲಿನ‌ ಎಣ್ಣೆಯನ್ನೇ ಖರೀದಿ ಮಾಡಿದ್ದಾರೆ. ಯಾವುದೇ GST ಕಟ್ಟಿಲ್ಲ. 2025ರ ಮೇ ತಿಂಗಳಿನಲ್ಲಿ ನಾನು ಪತ್ರ ಬರೆದಿದ್ದೆ. ಆಗ 1ಕೆ.ಜಿ‌ ಗಂಧದ ಎಣ್ಣೆಗೆ 2 ಲಕ್ಷ 24 ಸಾವಿರ ರೂ. ಇತ್ತು. 7500 ಮೆಟ್ರಕ್ ಟನ್​ಗೆ 93,116 ರೂ. ಟೆಂಡರ್​ ಕೊಡುತ್ತಾರೆ. 17 ಸಾವಿರ ಕೋಟಿ ರೂ. ವ್ಯತ್ಯಾಸ ಬರುತ್ತಿದೆ. ಈ ವರ್ಷ ಗಂಧದ ಎಣ್ಣೆಯ ದರ ಕೆ.ಜಿಗೆ 93 ಸಾವಿರ ರೂ ಮಾತ್ರ. ಅಷ್ಟು ವ್ಯತ್ಯಾಸ ಏಕೆ ಬರುತ್ತೆ ಎಂದು ಶಾಸಕ ಹೆಚ್.ಟಿ ಮಂಜು ಪ್ರಶ್ನಿಸಿದ್ದಾರೆ.

ಟೆಂಡರ್ ಪೂರ್ವ ಪರಿಶೀಲನಾ‌ ಸಮಿತಿ ಮಾರುಕಟ್ಟೆ ಮೌಲ್ಯ ಪರಿಶೀಲನೆ ಮಾಡಬೇಕು. ಅವರ ಅನುಮೋದನೆ ಪಡೆದು ಟೆಂಡರ್ ಕರೆಯಬೇಕು. 570 ಕೋಟಿ ರೂ ಟೆಂಡರ್ ಆಗುತ್ತೆ. ದೂರವಾಣಿ ಮುಖಾಂತರ ಸಂಧಾನ ಮಾಡುವ ಪ್ರಯತ್ನ ವ್ಯವಸ್ಥಾಪಕ ನಿರ್ದೇಶಕ ಮಾಡುತ್ತಾರೆ. ದರ ಸಂಧಾನ ಮಾಡಿಲ್ಲ. ಒಂದೇ ವರ್ಷದಲ್ಲಿ ಮೂರು ರೀತಿಯ ಆಡಿಟ್ ವರದಿಯನ್ನ ತರಿಸಿಕೊಳ್ಳುತ್ತಾರೆ. ಅದೇ ವ್ಯಕ್ತಿ ಬೇರೆ ಕಂಪನಿಯ ಹೆಸರಿಗೆ ಟೆಂಡರ್ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಒದ್ದು ಒಳಗೆ ಹಾಕುತ್ತೇನೆ ಎಂದ ಸಚಿವ ಎಂಬಿ ಪಾಟೀಲ್

ಈ ಕುರಿತಾಗಿ ಸಚಿವ ಎಂಬಿ ಪಾಟೀಲ್​ ಪ್ರತಿಕ್ರಿಯಿಸಿದ್ದು, ನಾನು ನೋಡಿಲ್ಲ, ತಿಳಿದುಕೊಳ್ಳುತ್ತೇನೆ. ಅದಕ್ಕೆ ಸ್ಪಷ್ಟೀಕರಣ ಕೊಡುತ್ತೇವೆ. ಅವ್ಯವಹಾರ ಆಗಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುತ್ತೇವೆ. ತಿಮಿಂಗಲು ಇದ್ದಾವೆ, ಅವೆಲ್ಲಾ ಈ ರೀತಿ ಆರೋಪ ಮಾಡುತ್ತಿದ್ದಾರೆ. ಯಾರು ಆರೋಪ ಮಾಡಿದ್ದಾರೆ ಅನ್ನೋದನ್ನ ಹೇಳಿದರೆ ಒದ್ದು ಒಳಗೆ ಹಾಕುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಭ್ರಷ್ಟಾಚಾರ: ನಿಮಗೆ ಧೈರ್ಯ ಇದ್ರೆ ಸಿಬಿಐ ತನಿಖೆ ಮಾಡಿಸಿ; ಆರ್​​ ಅಶೋಕ್ ಸವಾಲು

ಸಂಪೂರ್ಣ ಮಾಹಿತಿ ಕೊಡುತ್ತೇವೆ. ಬೇಜವಾಬ್ದಾರಿಯಂತೆ ಆರೋಪ ಮಾಡಿದರೆ ಮಾನನಷ್ಟ ಕ್ರಮ ತೆಗೆದುಕೊಳ್ಳುತ್ತೇವೆ. ಯಾವ ರೀತಿ ಕೆಎಸ್​ಡಿಎಲ್ ಬೆಳೆಯುತ್ತಿದೆ ಎನ್ನುವುದು ನಿಮಗೆ ಗೊತ್ತು. ಟೆಂಡರ್​ನಲ್ಲಿ ಅವ್ಯವಹಾರ ಆಗಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಅವರ ಆರೋಪಕ್ಕೆ ನಾನು ಉತ್ತರ ಕೊಡುತ್ತೇವೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:33 pm, Fri, 5 December 25

ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್
‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್