AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು 2ನೇ ಏರ್​ಪೋರ್ಟ್​ಗೆ ಭಾರೀ ವಿರೋಧ: ಸದ್ದಿಲ್ಲದೆ ಹತ್ತಾರು ಹಳ್ಳಿ ರೈತರಿಂದ ಹೋರಾಟಕ್ಕೆ ಸಿದ್ಧತೆ

ಬೆಂಗಳೂರಲ್ಲಿ ಎರಡನೇ ಅಂತಾರಾಷ್ಟ್ರೀಯ ಏರ್ಪೋರ್ಟ್‌ ಸ್ಥಾಪಿಸಲು ಸ್ಥಳ ಆಯ್ಕೆ ಸದ್ಯ ಜಟಾಪಟಿಗೆ ಕಾರಣವಾಗಿದೆ. ಹೀಗಿರುವಾಗಲೇ ಇತ್ತ ನೆಲಮಂಗಲ ವಿಧಾನಸಭೆ ಕ್ಷೇತ್ರದ ಪೆಮ್ಮನಹಳ್ಳಿ ಗ್ರಾಮದಲ್ಲಿ ಸದ್ದಿಲ್ಲದೆ ಹತ್ತಾರು ಹಳ್ಳಿಯ ರೈತರು ಹಾಗೂ ರೈತ ಮುಖಂಡರು ಸಭೆ ಮಾಡಿದ್ದಾರೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಬಾರಿ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು 2ನೇ ಏರ್​ಪೋರ್ಟ್​ಗೆ ಭಾರೀ ವಿರೋಧ: ಸದ್ದಿಲ್ಲದೆ ಹತ್ತಾರು ಹಳ್ಳಿ ರೈತರಿಂದ ಹೋರಾಟಕ್ಕೆ ಸಿದ್ಧತೆ
ರೈತರು ಹಾಗೂ ರೈತ ಮುಖಂಡರ ಸಭೆ
ಗಂಗಾಧರ​ ಬ. ಸಾಬೋಜಿ
|

Updated on:Apr 25, 2025 | 3:49 PM

Share

ನೆಲಮಂಗಲ, ಏಪ್ರಿಲ್ 25: ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (airport) ಸ್ಥಾಪನೆಗೆ ಸಂಬಂಧಪಟ್ಟ ಹಾಗೆ ಈಗಾಗಲೇ ಬಾರಿ ಪರಿಶೀಲನೆ ನಡೆಯುತ್ತಿದೆ. ಬೆಂಗಳೂರು ಸುತ್ತಮುತ್ತ ಮೂರು ಸ್ಥಳವನ್ನು ಕೇಂದ್ರ ವಿಮಾನ ಪ್ರಾಧಿಕಾರದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಹೀಗಿರುವಾಗಲೇ  ಎರಡನೇ ವಿಮಾನ ನಿಲ್ದಾಣಕ್ಕೆ ಬಾರಿ ವಿರೋಧ ವ್ಯಕ್ತವಾಗಿದೆ. ಇದೀಗ ತಮ್ಮ ಮನೆ, ಜಮೀನು ಉಳಿಸಿಕೊಳ್ಳಲು ಸದ್ದಿಲ್ಲದೆ ಹತ್ತಾರು ಹಳ್ಳಿಯ ರೈತರು (Farmers) ಹಾಗೂ ರೈತ ಮುಖಂಡರು ಸಭೆ ಮಾಡಿದ್ದಾರೆ.

ನೆಲಮಂಗಲ ಕುಣಿಗಲ್ ರಸ್ತೆಯ ಅಕ್ಕಪಕ್ಕದ ಎರಡು ಕಡೆ ವಿಮಾನ ನಿಲ್ದಾಣದ ಸ್ಥಳ ಗುರುತು ಮಾಡಲಾಗಿದೆ. ಹೀಗಾಗಿ ನೆಲಮಂಗಲ ವಿಧಾನಸಭೆ ಕ್ಷೇತ್ರದ ಪೆಮ್ಮನಹಳ್ಳಿ ಗ್ರಾಮದಲ್ಲಿ ನೂರಾರು ರೈತರ ಸಭೆ ಮಾಡಲಾಗಿದ್ದು, ವಿಮಾನ ನಿಲ್ದಾಣ ವಿರುದ್ಧ ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು 2ನೇ ಏರ್​ಪೋರ್ಟ್: ಬಿಡದಿ ಔಟ್, ಈ ಎರಡು ಸ್ಥಳಗಳ ಬಗ್ಗೆ ಚರ್ಚೆ, ಜಟಾಪಟಿ!

ಇದನ್ನೂ ಓದಿ
Image
ಬೆಂಗಳೂರು 2ನೇ ಏರ್‌ಪೋರ್ಟ್​ನ ಬಿಗ್ ಅಪ್ಡೇಟ್ಸ್​: ಸಮೀಕ್ಷೆಗೆ ಬಂತು ತಂಡ!
Image
ಬೆಂಗಳೂರು ವಿಮಾನ ನಿಲ್ದಾಣ ಮಾಹಿತಿ, ವಿಮಾನ ವೇಳಾಪಟ್ಟಿ ಕನ್ನಡದಲ್ಲಿ ಪ್ರಕಟ
Image
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ಗೆ 3 ಸ್ಥಳ ಫೈನಲ್​!
Image
ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿ ಪಡೆದ ಬೆಂಗಳೂರು ಏರ್ಪೋರ್ಟ್

ವಿಮಾನ ನಿಲ್ದಾಣವಾದರೆ ನೂರಾರು ವರ್ಷಗಳ ಮನೆ ಮಠ, ಆಸ್ತಿ ಪಾಸ್ತಿ, ದೇವಾಲಯಗಳು, ಜಾನುವಾರುಗಳು ತೋಟಗಳು ಕಳೆದುಕೊಳ್ಳುವ ಭೀತಿ ಎದುರಾಗಿದೆ. ಹಾಗಾಗಿ ಕರಪತ್ರಗಳ ಮೂಲಕ ರೈತ ಮುಖಂಡರು ರೈತರ ಮನವರಿಕೆಗೆ ಮುಂದಾಗಿದ್ದಾರೆ.

ಇತ್ತೀಚೆಗೆ ಏರ್​ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಅಧಿಕಾರಿಗಳು ಬೆಂಗಳೂರಲ್ಲೇ ಠಿಕಾಣಿ ಹೂಡಿದ್ದರು. ಕನಕಪುರ ರಸ್ತೆಯ 2 ಸ್ಥಳಗಳಿಗೆ ಅಧಿಕಾರಿಗಳು ಭೇಟಿಕೊಟ್ಟಿದ್ದರು. ಸಚಿವ ಎಂ ಬಿ ಪಾಟೀಲ್ ಜೊತೆಗೆ ಸುದೀರ್ಘ ಚರ್ಚೆ ಕೂಡ ಮಾಡಿದ್ದರು. ಬಳಿಕ ನೆಲಮಂಗಲ ಮತ್ತು ಕುಣಿಗಲ್ ಭಾಗದ ಸ್ಥಳಗಳನ್ನೂ ಏರ್​ಪೋರ್ಟ್ ಅಥಾರಿಟಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದರು.

ಸರ್ಕಾರ ಗುರುತಿಸಿರುವ 3 ಸ್ಥಳಗಳನ್ನ ಬಿಟ್ಟು ಶಿರಾದಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸಲು ಕೂಗು ಕೇಳಿಬಂದಿತ್ತು. ಸಿಎಂ ಸಿದ್ದರಾಮಯ್ಯಗೆ ಟಿಬಿ ಜಯಚಂದ್ರ ನೇತೃತ್ವದಲ್ಲಿ 30ಕ್ಕೂ ಹೆಚ್ಚು ಶಾಸಕರು ಪಕ್ಷಾತೀತವಾಗಿ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: Bengaluru 2nd Airport: ಬೆಂಗಳೂರು 2ನೇ ಏರ್‌ಪೋರ್ಟ್​ನ ಬಿಗ್ ಅಪ್ಡೇಟ್ಸ್​: ಸಮೀಕ್ಷೆಗೆ ಬಂತು ಕೇಂದ್ರ ತಂಡ

ಕನಕಪುರದಲ್ಲೂ ವಿಮಾನ ನಿಲ್ದಾಣಕ್ಕೆ ಜಾಗ ಪರಿಶೀಲಿಸಲಾಗಿದೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಒತ್ತಡವೇ ಕಾರಣ ಅಂತಾ ಕೆಲವರಿಂದ ಬೇಸರ ವ್ಯಕ್ತವಾಗಿತ್ತು. ಏರ್​ಪೋರ್ಟ್ ಸ್ಥಾಪನೆ ವಿಚಾರದಲ್ಲೂ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಅಂತಾ 30ಕ್ಕೂ ಹೆಚ್ಚು ಶಾಸಕರು ಧ್ವನಿ ಎತ್ತಿದ್ದರು. ಸದ್ಯ ಪರ ವಿರೋಧ ಏನೇ ಇದ್ದರೂ, ಅಂತಿಮವಾಗಿ ಕೇಂದ್ರದ ನಾಗರಿಕ ವಿಮಾನಯಾನ ಇಲಾಖೆ ಮತ್ತು ಕೇಂದ್ರ ಸರ್ಕಾರವೇ ಜಾಗ ಫೈನಲ್ ಮಾಡಲಿದೆ. ಸದ್ಯ ಯಾವ ಸ್ಥಳ ಗುರ್ತಿಸ್ತಾರೆ ಅನ್ನೋದೇ ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:49 pm, Fri, 25 April 25

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!