ನೆಲಮಂಗಲದ ನವಯುಗ ಟೋಲ್ ಬಳಿ ಸಿಕ್ಕಾಪಟ್ಟೆ ಟ್ರಾಫಿಕ್​: ಮೈಲು​​ಗಟ್ಟಲೆ ಸಾಲುಗಟ್ಟಿ ನಿಂತ ವಾಹನಗಳು

ಪಟ್ಟಣದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾರಿ ಪ್ರಮಾಣದಲ್ಲಿ ಟ್ರಾಫಿಕ್​ ಜಾಮ್​ ಕಂಡುಬಂತು. ಇದರ ಪರಿಣಾಮವಾಗಿ ಕಿಲೋ ಮೀಟರ್​​ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಹಾಗಾಗಿ, ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯ್ತು. ಅತ್ತ, ಪಟ್ಟಣದ ನವಯುಗ ಟೋಲ್ ರಸ್ತೆಯಲ್ಲೂ ಟ್ರಾಫಿಕ್​ ಜಾಮ್ ಕಂಡುಬಂತು.

ನೆಲಮಂಗಲದ ನವಯುಗ ಟೋಲ್ ಬಳಿ ಸಿಕ್ಕಾಪಟ್ಟೆ ಟ್ರಾಫಿಕ್​: ಮೈಲು​​ಗಟ್ಟಲೆ ಸಾಲುಗಟ್ಟಿ ನಿಂತ ವಾಹನಗಳು
ನವಯುಗ ಟೋಲ್ ಬಳಿ ಸಿಕ್ಕಾಪಟ್ಟೆ ಟ್ರಾಫಿಕ್

Updated on: Mar 07, 2021 | 9:59 PM

ನೆಲಮಂಗಲ: ಪಟ್ಟಣದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾರಿ ಪ್ರಮಾಣದಲ್ಲಿ ಟ್ರಾಫಿಕ್​ ಜಾಮ್​ ಕಂಡುಬಂತು. ಇದರ ಪರಿಣಾಮವಾಗಿ ಕಿಲೋ ಮೀಟರ್​​ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಹಾಗಾಗಿ, ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯ್ತು. ಅತ್ತ, ಪಟ್ಟಣದ ನವಯುಗ ಟೋಲ್ ರಸ್ತೆಯಲ್ಲೂ ಟ್ರಾಫಿಕ್​ ಜಾಮ್ ಕಂಡುಬಂತು.

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಸೋಫಾ ಅಂಗಡಿ
ಇತ್ತ, ಆಕಸ್ಮಿಕ ಬೆಂಕಿಗೆ ಸೋಫಾ ಅಂಗಡಿ ಒಂದು ಹೊತ್ತಿ ಉರಿದ ಪ್ರಸಂಗ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. 3 ಅಂಗಡಿಗಳಿಗೆ ಬೆಂಕಿ ಆವರಿಸಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಶೆಟರ್ ವೆಲ್ಡಿಂಗ್ ಮಾಡುವಾಗ ಅಂಗಡಿಗೆ ಬೆಂಕಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಅಗ್ನಿ ದುರಂತದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟುಭಸ್ಮವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರು.

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಸೋಫಾ ಅಂಗಡಿ

ವೀರನಾರಾಯಣ ದೇಗುಲದ ಬಳಿ ಹೊತ್ತಿ ಉರಿದ ಸ್ಕೂಟಿ
ಆಕಸ್ಮಿಕ ಬೆಂಕಿಯಿಂದ ದ್ವಿಚಕ್ರ ವಾಹನವೊಂದು ಹೊತ್ತಿ ಉರಿದ ಘಟನೆ ಗದಗ ನಗರದ ವೀರನಾರಾಯಣ ದೇಗುಲದ ಬಳಿ ನಡೆದಿದೆ. ಅವಘಡದಲ್ಲಿ ಇಮಾಮ್​ಸಾಬ್ ಕರೆಕಾಯಿ ಎಂಬುವವರ ಸ್ಕೂಟಿ ಭಸ್ಮವಾಯಿತು. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವೀರನಾರಾಯಣ ದೇಗುಲದ ಬಳಿ ಹೊತ್ತಿ ಉರಿದ ಸ್ಕೂಟಿ

ಇದನ್ನೂ ಓದಿ: ‘ಅಧಿಕಾರದಲ್ಲಿದ್ದಾಗ ಕಾಂಗ್ರೆಸಿಗರು ಬ್ಲ್ಯಾಕ್‌ಮನಿ ಮಾಡುತ್ತಿದ್ರು.. ಈಗ ಬ್ಲ್ಯಾಕ್‌ಮೇಲ್‌ಗೆ ಇಳಿದಿದ್ದಾರೆ’

Published On - 9:54 pm, Sun, 7 March 21