AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೋದಿ ಮುಖ ನೋಡ್ಕೊಂಡು ವೋಟ್​ ಹಾಕಿದ್ವಿ, ನಮಗೆ ಬೆಲೆ ಇಲ್ವಾ’; ಸಿಎಂ ವಿರುದ್ಧ ಗುರುಪ್ರಸಾದ್​ ಗರಂ

Guruprasad | BS Yediyurappa: 29 ಸಾವಿರ ಕನ್ನಡಿಗರು ಸತ್ತಿದ್ದಾರೆ. ಅವರೆಲ್ಲರಿಗೂ ಒಂದೊಂದು ಕೋಟಿ ರೂಪಾಯಿ ಕೊಡಿ. ಅಷ್ಟು ಕನ್ನಡಿಗರನ್ನು ಸಾಯಿಸಿದ್ದೀರಲ್ಲ ನಿಮಗೆ ಪ್ರಾಯಶ್ಚಿತ್ತ ಇಲ್ಲವೇ ಎಂದು ಗುರುಪ್ರಸಾದ್​ ಅವರು ರಾಜಕಾರಣಿಗಳ ವಿರುದ್ಧ ಗುಡುಗಿದ್ದಾರೆ.

‘ಮೋದಿ ಮುಖ ನೋಡ್ಕೊಂಡು ವೋಟ್​ ಹಾಕಿದ್ವಿ, ನಮಗೆ ಬೆಲೆ ಇಲ್ವಾ’; ಸಿಎಂ ವಿರುದ್ಧ ಗುರುಪ್ರಸಾದ್​ ಗರಂ
ಬಿಎಸ್​ ಯಡಿಯೂರಪ್ಪ, ಗುರುಪ್ರಸಾದ್​, ನರೇಂದ್ರ ಮೋದಿ
ಮದನ್​ ಕುಮಾರ್​
|

Updated on: Jun 07, 2021 | 12:47 PM

Share

ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಗುರುಪ್ರಸಾದ್​ ಅವರು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಕೊರೊನಾ ವೈರಸ್​ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಕಿಡಿಕಾರಿದ್ದಾರೆ. ಫೇಸ್​ಬುಕ್​ನಲ್ಲಿ ಲೈವ್​ ಬಂದು ಮಾತನಾಡಿರುವ ಅವರು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸೇರಿದಂತೆ ಅನೇಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಯಡಿಯೂರಪ್ಪ ಇಂದು ಜನರ ಸೇವೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಆದರೆ ಅವರು ಅವರ ಮಗನ, ವಂಶದ ಸೇವೆ ಮಾಡುತ್ತಿದ್ದಾರೆ. ಕೊರೊನಾದಿಂದ ಸಾವಿರಾರು ಜನರು ಸತ್ತಿದ್ದಾರೆ. ನಿಮಗೆ ಪಾಪಪ್ರಜ್ಞೆ ಇಲ್ಲವೇ?’ ಎಂದು ಗುರುಪ್ರಸಾದ್​ ಪ್ರಶ್ನಿಸಿದ್ದಾರೆ.

‘ವೋಟ್​ ಹಾಕಿದ ನಮಗೆ ಬೆಲೆ ಇಲ್ವಾ? ನಾವು ಮೋದಿ ಮುಖ ನೋಡಿಕೊಂಡು ವೋಟ್​ ಹಾಕಿದ್ವಿ. ನಿಮ್ಮ ಸ್ವಂತ ಆಸ್ತಿಗಳನ್ನು ಘೋಷಣೆ ಮಾಡಿ. 29 ಸಾವಿರ ಕನ್ನಡಿಗರು ಸತ್ತಿದ್ದಾರೆ. ಅವರೆಲ್ಲರಿಗೂ ಒಂದೊಂದು ಕೋಟಿ ರೂಪಾಯಿ ಕೊಡಿ. ಅಷ್ಟು ಕನ್ನಡಿಗರನ್ನು ಸಾಯಿಸಿದ್ದೀರಲ್ಲ ನಿಮಗೆ ಪ್ರಾಯಶ್ಚಿತ್ತ ಇಲ್ಲವೇ? ಅದು ಹೇಗೆ ಊಟ ಮಾಡುತ್ತೀರಿ? ನೀವೆಲ್ಲ ಭ್ರಷ್ಟಾಚಾರಿಗಳು. ಅದನ್ನು ನಾನು ಕೋರ್ಟ್​ನಲ್ಲಿ ಸಾಬೀತು ಮಾಡುತ್ತೇನೆ. ಅದಕ್ಕೆ ನನ್ನ ಬಳಿ ಸಾಕ್ಷಿ ಇದೆ’ ಎಂದು ಗುರುಪ್ರಸಾದ್​ ಹೇಳಿದ್ದಾರೆ.

‘ಹೈಕಮಾಂಡ್​ ಬಗ್ಗೆ ಯಡಿಯೂರಪ್ಪ ಮಾತನಾಡುತ್ತಾರೆ. ಕನ್ನಡಿಗರೇ ಹೈಕಮಾಂಡ್​. ನಾವು ಹೇಳ್ತಾ ಇದ್ದೀವಿ. ನೀವು ರಾಜಿನಾಮೆ ಕೊಟ್ಟು ಮನೆಗೆ ಹೋಗಬೇಕು. ದುಡ್ಡು ಮಾಡಿದ್ದೀರಲ್ಲ ಅದನ್ನು ನೆಕ್ಕಬೇಕು. ಎಲ್ಲ ಕೆಲಸಗಾರರನ್ನು ಒಂದೂವರೆ ವರ್ಷ ಕೂಡಿ ಹಾಕಿದ್ದೀರಿ. ಎಲ್ಲರಿಗೂ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟು, ಯಾರಿಗೂ ಏನೂ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕಾದ್ದು ಸರ್ಕಾರದ ಜವಾಬ್ದಾರಿ’ ಎಂದು ಗುರುಪ್ರಸಾದ್​ ಗುಡುಗಿದ್ದಾರೆ.

‘ಸಂಸ್ಕಾರಹೀನ, ಭ್ರಷ್ಟಾಚಾರಿ ರಾಜಕಾರಣಿಗಳ ಯುಗ ಮುಗಿಯುತ್ತಿದೆ. ಆದರೆ ಅದು ಸರಿಹೋಗಲು ಇನ್ನೂ 100 ವರ್ಷ ಬೇಕು. ಅದಕ್ಕೆ ಈಗ ಬೀಗ ಹಾಕುತ್ತಿದ್ದೇನೆ. ಪ್ರತಿಯೊಬ್ಬರ ಜೀವನ ಕಾಪಾಡುವುದು ಸರ್ಕಾರದ ಕೆಲಸ. ವೋಟ್​ ಹಾಕುವವರು ದುಡ್ಡು ತೆಗೆದುಕೊಳ್ಳಬೇಡಿ’ ಎಂದಿದ್ದಾರೆ ಗುರುಪ್ರಸಾದ್​. ಸದ್ಯ ಈ ವಿಡಿಯೋ ವೈರಲ್​ ಆಗುತ್ತಿದೆ.

ಏಪ್ರಿಲ್​ನಲ್ಲಿ ಕೂಡ ಗುರುಪ್ರಸಾದ್​ ಅವರು ಇದೇ ರೀತಿ ವಿಡಿಯೋ ಮಾಡಿದ್ದರು. ತಮಗೆ ಕೊವಿಡ್​ ಬಂದಿದೆ. ಒಂದು ವೇಳೆ ಸತ್ತರೆ ಅದಕ್ಕೆ ರಾಜಕಾರಣಿಗಳು ಕಾರಣ ಎಂದು ಹೇಳಿದ್ದರು. ಈಗ ಮತ್ತೆ ಕೆಂಡಾಮಂಡಲ ಆಗಿದ್ದಾರೆ. ಅವರ ವಿಡಿಯೋಗೆ ನೆಟ್ಟಿಗರು ಹಲವು ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಅವರ ಅಭಿಪ್ರಾಯದ ಬಗ್ಗೆ ಪರ-ವಿರೋಧದದ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ:

ನನ್ನ ಸಾವಿಗೆ ರಾಜಕಾರಣಿಗಳೇ ಕಾರಣ; ಕೊರೊನಾ ಸೋಂಕಿತ ‘ಮಠ’ ಗುರುಪ್ರಸಾದ್​ ಬಹಿರಂಗ ಡೆತ್​ ನೋಟ್​​

ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ: ಬಿ.ಎಸ್.ಯಡಿಯೂರಪ್ಪ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು