AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೋದಿ ಮುಖ ನೋಡ್ಕೊಂಡು ವೋಟ್​ ಹಾಕಿದ್ವಿ, ನಮಗೆ ಬೆಲೆ ಇಲ್ವಾ’; ಸಿಎಂ ವಿರುದ್ಧ ಗುರುಪ್ರಸಾದ್​ ಗರಂ

Guruprasad | BS Yediyurappa: 29 ಸಾವಿರ ಕನ್ನಡಿಗರು ಸತ್ತಿದ್ದಾರೆ. ಅವರೆಲ್ಲರಿಗೂ ಒಂದೊಂದು ಕೋಟಿ ರೂಪಾಯಿ ಕೊಡಿ. ಅಷ್ಟು ಕನ್ನಡಿಗರನ್ನು ಸಾಯಿಸಿದ್ದೀರಲ್ಲ ನಿಮಗೆ ಪ್ರಾಯಶ್ಚಿತ್ತ ಇಲ್ಲವೇ ಎಂದು ಗುರುಪ್ರಸಾದ್​ ಅವರು ರಾಜಕಾರಣಿಗಳ ವಿರುದ್ಧ ಗುಡುಗಿದ್ದಾರೆ.

‘ಮೋದಿ ಮುಖ ನೋಡ್ಕೊಂಡು ವೋಟ್​ ಹಾಕಿದ್ವಿ, ನಮಗೆ ಬೆಲೆ ಇಲ್ವಾ’; ಸಿಎಂ ವಿರುದ್ಧ ಗುರುಪ್ರಸಾದ್​ ಗರಂ
ಬಿಎಸ್​ ಯಡಿಯೂರಪ್ಪ, ಗುರುಪ್ರಸಾದ್​, ನರೇಂದ್ರ ಮೋದಿ
ಮದನ್​ ಕುಮಾರ್​
|

Updated on: Jun 07, 2021 | 12:47 PM

Share

ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಗುರುಪ್ರಸಾದ್​ ಅವರು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಕೊರೊನಾ ವೈರಸ್​ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಕಿಡಿಕಾರಿದ್ದಾರೆ. ಫೇಸ್​ಬುಕ್​ನಲ್ಲಿ ಲೈವ್​ ಬಂದು ಮಾತನಾಡಿರುವ ಅವರು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸೇರಿದಂತೆ ಅನೇಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಯಡಿಯೂರಪ್ಪ ಇಂದು ಜನರ ಸೇವೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಆದರೆ ಅವರು ಅವರ ಮಗನ, ವಂಶದ ಸೇವೆ ಮಾಡುತ್ತಿದ್ದಾರೆ. ಕೊರೊನಾದಿಂದ ಸಾವಿರಾರು ಜನರು ಸತ್ತಿದ್ದಾರೆ. ನಿಮಗೆ ಪಾಪಪ್ರಜ್ಞೆ ಇಲ್ಲವೇ?’ ಎಂದು ಗುರುಪ್ರಸಾದ್​ ಪ್ರಶ್ನಿಸಿದ್ದಾರೆ.

‘ವೋಟ್​ ಹಾಕಿದ ನಮಗೆ ಬೆಲೆ ಇಲ್ವಾ? ನಾವು ಮೋದಿ ಮುಖ ನೋಡಿಕೊಂಡು ವೋಟ್​ ಹಾಕಿದ್ವಿ. ನಿಮ್ಮ ಸ್ವಂತ ಆಸ್ತಿಗಳನ್ನು ಘೋಷಣೆ ಮಾಡಿ. 29 ಸಾವಿರ ಕನ್ನಡಿಗರು ಸತ್ತಿದ್ದಾರೆ. ಅವರೆಲ್ಲರಿಗೂ ಒಂದೊಂದು ಕೋಟಿ ರೂಪಾಯಿ ಕೊಡಿ. ಅಷ್ಟು ಕನ್ನಡಿಗರನ್ನು ಸಾಯಿಸಿದ್ದೀರಲ್ಲ ನಿಮಗೆ ಪ್ರಾಯಶ್ಚಿತ್ತ ಇಲ್ಲವೇ? ಅದು ಹೇಗೆ ಊಟ ಮಾಡುತ್ತೀರಿ? ನೀವೆಲ್ಲ ಭ್ರಷ್ಟಾಚಾರಿಗಳು. ಅದನ್ನು ನಾನು ಕೋರ್ಟ್​ನಲ್ಲಿ ಸಾಬೀತು ಮಾಡುತ್ತೇನೆ. ಅದಕ್ಕೆ ನನ್ನ ಬಳಿ ಸಾಕ್ಷಿ ಇದೆ’ ಎಂದು ಗುರುಪ್ರಸಾದ್​ ಹೇಳಿದ್ದಾರೆ.

‘ಹೈಕಮಾಂಡ್​ ಬಗ್ಗೆ ಯಡಿಯೂರಪ್ಪ ಮಾತನಾಡುತ್ತಾರೆ. ಕನ್ನಡಿಗರೇ ಹೈಕಮಾಂಡ್​. ನಾವು ಹೇಳ್ತಾ ಇದ್ದೀವಿ. ನೀವು ರಾಜಿನಾಮೆ ಕೊಟ್ಟು ಮನೆಗೆ ಹೋಗಬೇಕು. ದುಡ್ಡು ಮಾಡಿದ್ದೀರಲ್ಲ ಅದನ್ನು ನೆಕ್ಕಬೇಕು. ಎಲ್ಲ ಕೆಲಸಗಾರರನ್ನು ಒಂದೂವರೆ ವರ್ಷ ಕೂಡಿ ಹಾಕಿದ್ದೀರಿ. ಎಲ್ಲರಿಗೂ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟು, ಯಾರಿಗೂ ಏನೂ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕಾದ್ದು ಸರ್ಕಾರದ ಜವಾಬ್ದಾರಿ’ ಎಂದು ಗುರುಪ್ರಸಾದ್​ ಗುಡುಗಿದ್ದಾರೆ.

‘ಸಂಸ್ಕಾರಹೀನ, ಭ್ರಷ್ಟಾಚಾರಿ ರಾಜಕಾರಣಿಗಳ ಯುಗ ಮುಗಿಯುತ್ತಿದೆ. ಆದರೆ ಅದು ಸರಿಹೋಗಲು ಇನ್ನೂ 100 ವರ್ಷ ಬೇಕು. ಅದಕ್ಕೆ ಈಗ ಬೀಗ ಹಾಕುತ್ತಿದ್ದೇನೆ. ಪ್ರತಿಯೊಬ್ಬರ ಜೀವನ ಕಾಪಾಡುವುದು ಸರ್ಕಾರದ ಕೆಲಸ. ವೋಟ್​ ಹಾಕುವವರು ದುಡ್ಡು ತೆಗೆದುಕೊಳ್ಳಬೇಡಿ’ ಎಂದಿದ್ದಾರೆ ಗುರುಪ್ರಸಾದ್​. ಸದ್ಯ ಈ ವಿಡಿಯೋ ವೈರಲ್​ ಆಗುತ್ತಿದೆ.

ಏಪ್ರಿಲ್​ನಲ್ಲಿ ಕೂಡ ಗುರುಪ್ರಸಾದ್​ ಅವರು ಇದೇ ರೀತಿ ವಿಡಿಯೋ ಮಾಡಿದ್ದರು. ತಮಗೆ ಕೊವಿಡ್​ ಬಂದಿದೆ. ಒಂದು ವೇಳೆ ಸತ್ತರೆ ಅದಕ್ಕೆ ರಾಜಕಾರಣಿಗಳು ಕಾರಣ ಎಂದು ಹೇಳಿದ್ದರು. ಈಗ ಮತ್ತೆ ಕೆಂಡಾಮಂಡಲ ಆಗಿದ್ದಾರೆ. ಅವರ ವಿಡಿಯೋಗೆ ನೆಟ್ಟಿಗರು ಹಲವು ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಅವರ ಅಭಿಪ್ರಾಯದ ಬಗ್ಗೆ ಪರ-ವಿರೋಧದದ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ:

ನನ್ನ ಸಾವಿಗೆ ರಾಜಕಾರಣಿಗಳೇ ಕಾರಣ; ಕೊರೊನಾ ಸೋಂಕಿತ ‘ಮಠ’ ಗುರುಪ್ರಸಾದ್​ ಬಹಿರಂಗ ಡೆತ್​ ನೋಟ್​​

ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ: ಬಿ.ಎಸ್.ಯಡಿಯೂರಪ್ಪ

Follow Us
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ