AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದ ಸ್ಟಾರ್ಟಪ್​ಗಳಿಗೆ ಅಮೆರಿಕ ಕಂಪನಿಗಳ ಹೂಡಿಕೆ ಸೆಳೆಯಲಿದೆ ಕರ್ನಾಟಕ

ಎಂಬಿ ಪಾಟೀಲ್ ನೇತೃತ್ವದ ನಿಯೋಗವು ಎಲೆಕ್ಟ್ರಿಕಲ್ ವೆಹಿಕಲ್ಸ್ (ಇವಿ) ತಯಾರಕರಿಂದ ಫಿನ್‌ಟೆಕ್‌ವರೆಗೆ, ಏರೋಸ್ಪೇಸ್‌ನಿಂದ ಆರೋಗ್ಯ ಮತ್ತು ಇಎಸ್‌ಡಿಎಂವರೆಗೆ ಅಮೆರಿಕದಾದ್ಯಂತ ಮುಂದಿನ ಎರಡು ವಾರಗಳ ಅವಧಿಯಲ್ಲಿ ಸುಮಾರು 30 ಕಂಪನಿಗಳನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದ ಸ್ಟಾರ್ಟಪ್​ಗಳಿಗೆ ಅಮೆರಿಕ ಕಂಪನಿಗಳ ಹೂಡಿಕೆ ಸೆಳೆಯಲಿದೆ ಕರ್ನಾಟಕ
ಸಚಿವ ಎಂಬಿ ಪಾಟೀಲ್
Ganapathi Sharma
|

Updated on: Sep 26, 2023 | 10:46 PM

Share

ಬೆಂಗಳೂರು, ಸೆಪ್ಟೆಂಬರ್ 26: ದೊಡ್ಡ ಹೂಡಿಕೆದಾರರನ್ನು ಕರ್ನಾಟಕಕ್ಕೆ ಸೆಳೆಯಲು ಕೈಗಾರಿಕಾ ಸಚಿವ ಎಂಬಿ ಪಾಟೀಲ್ (MB Patil) ನೇತೃತ್ವದ ಕರ್ನಾಟಕ ಸರ್ಕಾರದ ನಿಯೋಗ ಅಮೆರಿಕಕ್ಕೆ ಎರಡು ವಾರಗಳ ಪ್ರವಾಸ ಕೈಗೊಂಡಿದೆ. ನಿಯೋಗವು ಬಾಹ್ಯಾಕಾಶ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ ಸಿಸ್ಟಮ್ಸ್ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್ (ESDM) ಕ್ಷೇತ್ರಗಳಲ್ಲಿ ಅಮೆರಿಕದ ದೊಡ್ಡ ಕಂಪನಿಗಳ ಹೂಡಿಕೆ ಸೆಳೆಯಲು ಪ್ರಯತ್ನಿಸಲಿದೆ. ಆಪಲ್‌ನಂತಹ ಮೊಬೈಲ್ ಫೋನ್ ತಯಾರಕರು ಮತ್ತು ಇಂಟೆಲ್‌ಸ್ಟಾಟ್ ಮತ್ತು ಆರ್‌ಟಿಎಕ್ಸ್‌ನಂತಹ ಏರೋಸ್ಪೇಸ್ ಕಂಪನಿಗಳಿಗೆ ವಿಶೇಷ ಒತ್ತು ನೀಡಲಿದೆ.

ನಿಯೋಗವು ಎಲೆಕ್ಟ್ರಿಕಲ್ ವೆಹಿಕಲ್ಸ್ (ಇವಿ) ತಯಾರಕರಿಂದ ಫಿನ್‌ಟೆಕ್‌ವರೆಗೆ, ಏರೋಸ್ಪೇಸ್‌ನಿಂದ ಆರೋಗ್ಯ ಮತ್ತು ಇಎಸ್‌ಡಿಎಂವರೆಗೆ ಅಮೆರಿಕದಾದ್ಯಂತ ಮುಂದಿನ ಎರಡು ವಾರಗಳ ಅವಧಿಯಲ್ಲಿ ಸುಮಾರು 30 ಕಂಪನಿಗಳನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

ತಂಡವು ತಮ್ಮ ಭೇಟಿಯ ಅವಧಿಯಲ್ಲಿ ವಾಷಿಂಗ್ಟನ್, ಬೋಸ್ಟನ್, ಆಸ್ಟಿನ್, ಡಲ್ಲಾಸ್ ಮತ್ತು ಸ್ಯಾನ್ ಫ್ರಾನ್ಸಿಸ್ಕೋಗೆ ಪ್ರಯಾಣಿಸಲಿದೆ.

ಪಾಟೀಲ್ ಮತ್ತು ಕೈಗಾರಿಕಾ ಇಲಾಖೆಯು ವಾಷಿಂಗ್ಟನ್‌ನಲ್ಲಿ ಸೋಮವಾರ ಆರ್‌ಟಿಎಕ್ಸ್‌ನೊಂದಿಗೆ ಮಾತುಕತೆ ನಡೆಸಿದೆ. ಕಂಪನಿಯು ಈಗಾಗಲೇ ಬೆಂಗಳೂರಿನಲ್ಲಿ ಆರ್ ಆ್ಯಂಡ್ ಡಿ ಕೇಂದ್ರವನ್ನು ಹೊಂದಿದೆ. ಪೂರೈಕೆ ಸರಪಳಿ ಸಂಪರ್ಕಗಳನ್ನು ಹೆಚ್ಚಿಸುವಲ್ಲಿ ಮತ್ತು ಕರ್ನಾಟಕದಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನೆಯನ್ನು ಪರಿಗಣಿಸುವಲ್ಲಿ ವಿಸ್ತರಣಾ ಯೋಜನೆಗಳ ಬಗ್ಗೆ ಚರ್ಚಿಸಲು ನಿಯೋಗವು ಕಂಪನಿಯ ಜತೆ ಮಾತುಕತೆ ನಡೆಸಿದೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಇದನ್ನೂ ಓದಿ: ಆಹಾರ ಉದ್ಯಮದಲ್ಲಿ ಸಮಾನ ಅವಕಾಶಕ್ಕೆ ಎಫ್​ಎಸ್​ಎಸ್​ಎಐ ತಂತ್ರ; ಮಹಿಳೆಯರು, ತೃತೀಯ ಲಿಂಗಿಗಳಿಗೆ ವಿಶೇಷ ವ್ಯವಸ್ಥೆ

ತಂತ್ರಜ್ಞಾನದ ಸಹಯೋಗಕ್ಕಾಗಿ ಬಾಹ್ಯಾಕಾಶ ಉದ್ಯಮದ ಸ್ಟಾರ್ಟ್‌ಅಪ್‌ಗಳೊಂದಿಗೆ ಸಂಭವನೀಯ ಪಾಲುದಾರಿಕೆಯನ್ನು ಅನ್ವೇಷಿಸಲು ಎರಡೂ ಕಡೆಯವರು ಉತ್ಸುಕತೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಪ್ರತಿಭಾನ್ವೇಷಣೆಯನ್ನು ಬೆಳೆಸಲು ರಾಜ್ಯ ಸರ್ಕಾರ ಮತ್ತು ಶಿಕ್ಷಣ ಸಂಸ್ಥೆಗಳೊಂದಿಗೆ ಸಹಭಾಗಿತ್ವಕ್ಕೆ ಸಚಿವರು ಮಾತುಕತೆ ವೇಳೆ ಒತ್ತು ನೀಡಿದ್ದಾರೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ