AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದ ಸ್ಟಾರ್ಟಪ್​ಗಳಿಗೆ ಅಮೆರಿಕ ಕಂಪನಿಗಳ ಹೂಡಿಕೆ ಸೆಳೆಯಲಿದೆ ಕರ್ನಾಟಕ

ಎಂಬಿ ಪಾಟೀಲ್ ನೇತೃತ್ವದ ನಿಯೋಗವು ಎಲೆಕ್ಟ್ರಿಕಲ್ ವೆಹಿಕಲ್ಸ್ (ಇವಿ) ತಯಾರಕರಿಂದ ಫಿನ್‌ಟೆಕ್‌ವರೆಗೆ, ಏರೋಸ್ಪೇಸ್‌ನಿಂದ ಆರೋಗ್ಯ ಮತ್ತು ಇಎಸ್‌ಡಿಎಂವರೆಗೆ ಅಮೆರಿಕದಾದ್ಯಂತ ಮುಂದಿನ ಎರಡು ವಾರಗಳ ಅವಧಿಯಲ್ಲಿ ಸುಮಾರು 30 ಕಂಪನಿಗಳನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದ ಸ್ಟಾರ್ಟಪ್​ಗಳಿಗೆ ಅಮೆರಿಕ ಕಂಪನಿಗಳ ಹೂಡಿಕೆ ಸೆಳೆಯಲಿದೆ ಕರ್ನಾಟಕ
ಸಚಿವ ಎಂಬಿ ಪಾಟೀಲ್
Follow us
Ganapathi Sharma
|

Updated on: Sep 26, 2023 | 10:46 PM

ಬೆಂಗಳೂರು, ಸೆಪ್ಟೆಂಬರ್ 26: ದೊಡ್ಡ ಹೂಡಿಕೆದಾರರನ್ನು ಕರ್ನಾಟಕಕ್ಕೆ ಸೆಳೆಯಲು ಕೈಗಾರಿಕಾ ಸಚಿವ ಎಂಬಿ ಪಾಟೀಲ್ (MB Patil) ನೇತೃತ್ವದ ಕರ್ನಾಟಕ ಸರ್ಕಾರದ ನಿಯೋಗ ಅಮೆರಿಕಕ್ಕೆ ಎರಡು ವಾರಗಳ ಪ್ರವಾಸ ಕೈಗೊಂಡಿದೆ. ನಿಯೋಗವು ಬಾಹ್ಯಾಕಾಶ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ ಸಿಸ್ಟಮ್ಸ್ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್ (ESDM) ಕ್ಷೇತ್ರಗಳಲ್ಲಿ ಅಮೆರಿಕದ ದೊಡ್ಡ ಕಂಪನಿಗಳ ಹೂಡಿಕೆ ಸೆಳೆಯಲು ಪ್ರಯತ್ನಿಸಲಿದೆ. ಆಪಲ್‌ನಂತಹ ಮೊಬೈಲ್ ಫೋನ್ ತಯಾರಕರು ಮತ್ತು ಇಂಟೆಲ್‌ಸ್ಟಾಟ್ ಮತ್ತು ಆರ್‌ಟಿಎಕ್ಸ್‌ನಂತಹ ಏರೋಸ್ಪೇಸ್ ಕಂಪನಿಗಳಿಗೆ ವಿಶೇಷ ಒತ್ತು ನೀಡಲಿದೆ.

ನಿಯೋಗವು ಎಲೆಕ್ಟ್ರಿಕಲ್ ವೆಹಿಕಲ್ಸ್ (ಇವಿ) ತಯಾರಕರಿಂದ ಫಿನ್‌ಟೆಕ್‌ವರೆಗೆ, ಏರೋಸ್ಪೇಸ್‌ನಿಂದ ಆರೋಗ್ಯ ಮತ್ತು ಇಎಸ್‌ಡಿಎಂವರೆಗೆ ಅಮೆರಿಕದಾದ್ಯಂತ ಮುಂದಿನ ಎರಡು ವಾರಗಳ ಅವಧಿಯಲ್ಲಿ ಸುಮಾರು 30 ಕಂಪನಿಗಳನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

ತಂಡವು ತಮ್ಮ ಭೇಟಿಯ ಅವಧಿಯಲ್ಲಿ ವಾಷಿಂಗ್ಟನ್, ಬೋಸ್ಟನ್, ಆಸ್ಟಿನ್, ಡಲ್ಲಾಸ್ ಮತ್ತು ಸ್ಯಾನ್ ಫ್ರಾನ್ಸಿಸ್ಕೋಗೆ ಪ್ರಯಾಣಿಸಲಿದೆ.

ಪಾಟೀಲ್ ಮತ್ತು ಕೈಗಾರಿಕಾ ಇಲಾಖೆಯು ವಾಷಿಂಗ್ಟನ್‌ನಲ್ಲಿ ಸೋಮವಾರ ಆರ್‌ಟಿಎಕ್ಸ್‌ನೊಂದಿಗೆ ಮಾತುಕತೆ ನಡೆಸಿದೆ. ಕಂಪನಿಯು ಈಗಾಗಲೇ ಬೆಂಗಳೂರಿನಲ್ಲಿ ಆರ್ ಆ್ಯಂಡ್ ಡಿ ಕೇಂದ್ರವನ್ನು ಹೊಂದಿದೆ. ಪೂರೈಕೆ ಸರಪಳಿ ಸಂಪರ್ಕಗಳನ್ನು ಹೆಚ್ಚಿಸುವಲ್ಲಿ ಮತ್ತು ಕರ್ನಾಟಕದಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನೆಯನ್ನು ಪರಿಗಣಿಸುವಲ್ಲಿ ವಿಸ್ತರಣಾ ಯೋಜನೆಗಳ ಬಗ್ಗೆ ಚರ್ಚಿಸಲು ನಿಯೋಗವು ಕಂಪನಿಯ ಜತೆ ಮಾತುಕತೆ ನಡೆಸಿದೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಇದನ್ನೂ ಓದಿ: ಆಹಾರ ಉದ್ಯಮದಲ್ಲಿ ಸಮಾನ ಅವಕಾಶಕ್ಕೆ ಎಫ್​ಎಸ್​ಎಸ್​ಎಐ ತಂತ್ರ; ಮಹಿಳೆಯರು, ತೃತೀಯ ಲಿಂಗಿಗಳಿಗೆ ವಿಶೇಷ ವ್ಯವಸ್ಥೆ

ತಂತ್ರಜ್ಞಾನದ ಸಹಯೋಗಕ್ಕಾಗಿ ಬಾಹ್ಯಾಕಾಶ ಉದ್ಯಮದ ಸ್ಟಾರ್ಟ್‌ಅಪ್‌ಗಳೊಂದಿಗೆ ಸಂಭವನೀಯ ಪಾಲುದಾರಿಕೆಯನ್ನು ಅನ್ವೇಷಿಸಲು ಎರಡೂ ಕಡೆಯವರು ಉತ್ಸುಕತೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಪ್ರತಿಭಾನ್ವೇಷಣೆಯನ್ನು ಬೆಳೆಸಲು ರಾಜ್ಯ ಸರ್ಕಾರ ಮತ್ತು ಶಿಕ್ಷಣ ಸಂಸ್ಥೆಗಳೊಂದಿಗೆ ಸಹಭಾಗಿತ್ವಕ್ಕೆ ಸಚಿವರು ಮಾತುಕತೆ ವೇಳೆ ಒತ್ತು ನೀಡಿದ್ದಾರೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು