AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮು ದ್ವೇಷ vs ​ಅಭಿವೃದ್ಧಿ: ಶಾಂತಿಯುತ ಕರ್ನಾಟಕ ಹೆಲ್ಪ್​ಲೈನ್ ಆರಂಭಿಸುವಂತೆ ಎಂಬಿ ಪಾಟೀಲ್ ಸಲಹೆ

ಸಚಿವ ಎಂಬಿ ಪಾಟೀಲ್ "ಶಾಂತಿಯುತ ಕರ್ನಾಟಕ" ಹೆಲ್ಪ್​ಲೈನ್ ಆರಂಭಿಸುವಂತೆ ಸಚಿವ ಡಾ.ಜಿ ಪರಮೇಶ್ವರ್, ಸಚಿವ ಪ್ರಿಯಾಂಕ ಖರ್ಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಆಗ್ರಹಿಸಿದ್ದಾರೆ.

ಕೋಮು ದ್ವೇಷ vs ​ಅಭಿವೃದ್ಧಿ: ಶಾಂತಿಯುತ ಕರ್ನಾಟಕ ಹೆಲ್ಪ್​ಲೈನ್ ಆರಂಭಿಸುವಂತೆ ಎಂಬಿ ಪಾಟೀಲ್ ಸಲಹೆ
ಸಚಿವ ಎಂಬಿ ಪಾಟೀಲ್​
ವಿವೇಕ ಬಿರಾದಾರ
|

Updated on: Jun 05, 2023 | 2:04 PM

Share

ಬೆಂಗಳೂರು: ರಾಜ್ಯ ಬಿಜೆಪಿ (BJP) ಘಟಕ ಕೋಮು ದ್ವೇಷ ಹರಡುತ್ತಿದೆ ಎಂದು ಕಾಂಗ್ರೆಸ್ (Congress)​ ನಾಯಕರು ಆಗಾಗ ಆರೋಪ ಮಾಡುತ್ತಿರುತ್ತಾರೆ. ಇದೀಗ ಕೈ ಅಧಿಕಾರಕ್ಕೆ ಬಂದಿದ್ದು, ಕೋಮು ದ್ವೇಷಕ್ಕೆ ಬ್ರೇಕ್​ ಹಾಕುತ್ತೇವೆ ಎಂದು ನಾಯಕರು ಹೇಳುತ್ತಿದ್ದಾರೆ. ಈ ಸಂಬಂಧ ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಸಚಿವ ಎಂಬಿ ಪಾಟೀಲ್ (MB Patil) “ಶಾಂತಿಯುತ ಕರ್ನಾಟಕ” ಹೆಲ್ಪ್​ಲೈನ್ ಆರಂಭಿಸುವಂತೆ ಸಚಿವ ಡಾ.ಜಿ ಪರಮೇಶ್ವರ್ (G Parameshwara), ಸಚಿವ ಪ್ರಿಯಾಂಕ ಖರ್ಗೆ (Priyank Kharge) ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರಿಗೆ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿದ ಸಚಿವ ಎಂಬಿ ಪಾಟೀಲ್ “ಶಾಂತಿಯುತ ಕರ್ನಾಟಕ” ಹೆಲ್ಪ್ ಲೈನ್ ಆರಂಭಿಸಬೇಕು. ಯಾವುದೇ ದ್ವೇಷ ಹರಡುವುದನ್ನು ತಡೆಯಲು ಹೆಲ್ಪ್ ಲೈನ್ ಆರಂಭಿಸಿ. ದ್ವೇಷ ಹರಡುವ ಘಟನೆಗಳನ್ನು ಟ್ರ್ಯಾಕ್ ಮಾಡಬೇಕು. ಕೇವಲ ಅಭಿವೃದ್ಧಿ ಮಂತ್ರ, ಬ್ರ್ಯಾಂಡ್ ಕರ್ನಾಟಕ ಕಾಪಾಡಬೇಕು ಎಂದು ಸಚಿವರಾದ ಡಾ.ಜಿ ಪರಮೇಶ್ವರ್, ಪ್ರಿಯಾಂಕ ಖರ್ಗೆ, ಹಾಗೂ ಡಿಸಿಎಂ ಡಿಕೆಶಿವಕುಮಾರ್” ಅವರಿಗೆ ಟ್ಯಾಗ್ ಮಾಡಿದ್ದಾರೆ.

ಏನಾದರೂ ಗಲಾಟೆ ಮಾಡಿದರೆ ಜೈಲಿಗೆ ಹಾಕ್ತಿವಿ: ಚಕ್ರವರ್ತಿ ಸೂಲಿಬೆಲೆಗೆ ಎಚ್ಚರಿಕೆ

ರಾಜ್ಯದಲ್ಲಿ ಹಿಟ್ಲರ್ ಆಡಳಿತವಿದೆ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆರೋಪ ಮಾಡಿದ್ದರು. ಈ ವಿಚಾರವಾಗಿ ಸಚಿವ ಎಂಬಿ ಪಾಟೀಲ್ ನಿನ್ನೆ (ಜೂ.4) ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಏನಾದರೂ ಗಲಾಟೆ ಮಾಡಿದರೆ ಜೈಲಿಗೆ ಹಾಕ್ತಿವಿ ಎಂದು ಖಡಕ್​​ ಸೂಚನೆ ನೀಡಿದ್ದರು.

ಈ ಹಿಂದೆ ಹಿಜಾಬ್, ಹಲಾಲ್ ವಿಚಾರದಲ್ಲಿ ಗಲಾಟೆ ಮಾಡಿದಂಗೆ ಈಗ ನಾಟಕ ಮಾಡಿದ್ರೆ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್ ಎಂದಿದ್ದರು.

ಇವರಿಗೇನು ಜನರು ಕೇಸರಿ ಗುತ್ತಿಗೆ ನೀಡಿಲ್ಲ. ಬಿಜೆಪಿ ಸರ್ಕಾರದಲ್ಲಿ ಹಿಜಾಬ್, ಹಲಾಲ್, ಉರಿಗೌಡ ಅಂತೆಲ್ಲಾ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿ, ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿತ್ತು. ಇದರಿಂದ ರೋಸಿಹೋದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ನೀಡಿದ್ದಾರೆ. ಸರ್ಕಾರ ಎಲ್ಲ ಸಮುದಾಯಗಳ ರಕ್ಷಣೆ ವಿಷಯದಲ್ಲಿ ವಿಶೇಷ ಕಾಳಜಿ ತೋರಲಿದೆ ಎಂದು ಹೇಳಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?