AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಣೆಗಾಗಿ ಡಾ.ಅಶ್ವತ್ಥ್ ನಾರಾಯಣ ಭೇಟಿಯಾಗಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿರುವುದು ಸರಿಯಲ್ಲ; ಎಂಬಿ ಪಾಟೀಲ್

ಡಿಕೆಶಿ ಮತ್ತು ನನ್ನ ಬಾಂಧವ್ಯ ಚೆನ್ನಾಗಿದೆ ಎಂದು ಹೇಳಿದ ಎಂಬಿ ಪಾಟೀಲ್, ಸಚಿವ ಅಶ್ವತ್ಥ್ ರಕ್ಷಿಸಲು ನಾನು ಸಿಎಂ ಅಲ್ಲ, ಅಧ್ಯಕ್ಷನೂ ಅಲ್ಲ ಎಂದು ತಿಳಿಸಿದರು. ಇನ್ನು ಈ ಹೇಳಿಕೆ ಬಗ್ಗೆ ಮಾತನಾಡಿರುವ ಅಶ್ವತ್ಥ್, ನನಗೆ ಯಾವುದೇ ಭಯ ಇಲ್ಲ.

ರಕ್ಷಣೆಗಾಗಿ ಡಾ.ಅಶ್ವತ್ಥ್ ನಾರಾಯಣ ಭೇಟಿಯಾಗಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿರುವುದು ಸರಿಯಲ್ಲ; ಎಂಬಿ ಪಾಟೀಲ್
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್
Follow us
TV9 Web
| Updated By: sandhya thejappa

Updated on:May 11, 2022 | 10:46 AM

ಬೆಂಗಳೂರು: ಸಚಿವ ಡಾ.ಅಶ್ವತ್ಥ್ ನಾರಾಯಣ (Ashwath Narayanan) ಮತ್ತು ಎಂಬಿ ಪಾಟೀಲ್ (MB Patil) ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು. ರಕ್ಷಣೆಗಾಗಿ ಸಚಿವ ಅಶ್ವತ್ಥ್ ಎಂಬಿಪಿ ಅವರನ್ನು ಭೇಟಿಯಾಗಿದ್ದರೆಂದು ಹೇಳಿದ್ದರು. ಈ ಹೇಳಿಕೆ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್, ರಕ್ಷಣೆಗಾಗಿ ಭೇಟಿಯಾಗಿದ್ದರೆಂದು ಡಿಕೆಶಿ ಹೇಳಿರುವುದು ಸರಿಯಲ್ಲ. ಡಿಕೆ ಶಿವಕುಮಾರ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ಡಿಕೆಶಿ ಹೇಳಿಕೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇನೆ ಎಂದರು.

ಡಿಕೆಶಿ ಮತ್ತು ನನ್ನ ಬಾಂಧವ್ಯ ಚೆನ್ನಾಗಿದೆ ಎಂದು ಹೇಳಿದ ಎಂಬಿ ಪಾಟೀಲ್, ಸಚಿವ ಅಶ್ವತ್ಥ್ ರಕ್ಷಿಸಲು ನಾನು ಸಿಎಂ ಅಲ್ಲ, ಅಧ್ಯಕ್ಷನೂ ಅಲ್ಲ ಎಂದು ತಿಳಿಸಿದರು. ಇನ್ನು ಈ ಹೇಳಿಕೆ ಬಗ್ಗೆ ಮಾತನಾಡಿರುವ ಅಶ್ವತ್ಥ್, ನನಗೆ ಯಾವುದೇ ಭಯ ಇಲ್ಲ. ಪ್ರತಿಕ್ಷಣ ಭಯದಲ್ಲಿ ಬದುಕುತ್ತಿರುವುದು ಡಿಕೆ ಶಿವಕುಮಾರ್. ಯಾವಾಗ ಜೈಲಿಗೆ ಹೋಗುತ್ತೇನೆ ಎಂದು ಬದುಕುತ್ತಿರುವುದು ಅವರು. ಡಿಕೆ ಶಿವಕುಮಾರ್ ಹೆಸರು ಕೇಳಿದರೆ ಜನಕ್ಕೆ ಗೊತ್ತಾಗುತ್ತದೆ. ಅವರು ಎಷ್ಟು ಭ್ರಷ್ಟಾಚಾರ ಮಾಡಿದ್ದಾರೆ ಎಂದು. ನಾನು ಯಾವುದೇ ಭ್ರಷ್ಟಾಚಾರವನ್ನು ಮಾಡಲಿಕ್ಕೆ ಬಂದಿಲ್ಲ. ನಂಬಿ ಬಂದವರ ಜನರ ಕುತ್ತಿಗೆ ಕುಯ್ಯೋದು ಇವರ ಕೆಲಸ. ಅವರ ಹೇಳಿಕೆಗೆ ಎಳ್ಳುಷ್ಟು ಬೆಲೆ ಇಲ್ಲ. ಕಾಂಗ್ರೆಸ್ ಮುಕ್ತ ರಾಮನಗರವನ್ನು ಮಾಡುತ್ತೇವೆ. ಇಂತಹ ವ್ಯಕ್ತಿಗಳನ್ನು ಮನೆಗೆ ಕಳಿಸುತ್ತೇವೆ ಎಂದರು.

ಇಬ್ಬರು ಮೌನ ವಹಿಸುವಂತೆ ಹಿರಿಯ ಕಾಂಗ್ರೆಸ್ ಮುಖಂಡ ಸಲಹೆ: ಡಿಕೆ ಶಿವಕುಮಾರ್ ಮತ್ತು ಎಂಬಿ ಪಾಟೀಲ್ ಹೇಳಿಕೆಯಿಂದ ಪಕ್ಷಕ್ಕೆ ಮುಜಗರ ಆಗಿದೆ. ಹೀಗಾಗಿ ಪ್ರಕರಣದ ಬಗ್ಗೆ ಇಬ್ಬರು ಮೌನ ವಹಿಸುವಂತೆ ಹಿರಿಯ ಕಾಂಗ್ರೆಸ್ ಮುಖಂಡ ಸಲಹೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಇದನ್ನ ಮುಂದುವರೆಸಿಕೊಂಡು ಹೋಗವುದು ಬೇಡ. ನಿಮ್ಮ ಹೇಳಿಕೆಗಳಿಂದ ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಆಗಲಿದೆ ಎಂದು ಇಬ್ಬರ ನಾಯಕರೊಂದಿಗೆ ಹಿರಿಯ ಕಾಂಗ್ರೆಸ್ ಮುಖಂಡ ಮಾತನಾಡಿದ್ದಾರೆ.

ಪ್ರಕರಣದ ಬಗ್ಗೆ ನೀವು ಯಾವುದೇ ಹೇಳಿಕೆ ಕೊಡ ಬೇಡಿ. ಮುಂದಿನ ವರ್ಷ ಚುನಾವಣೆ ಇದೆ. ನೀವು ಜವಾಬ್ದಾರಿ ಸ್ಥಾನದಲ್ಲಿರುವವರು ಹೀಗೆ ಮಾತನಾಡಿದರೆ ಹೇಗೆ? ಸಾರ್ವಜನಿಕವಾಗಿ ಈ ರೀತಿ ಹೇಳಿಕೆಗಳಿಂದ ಪಕ್ಷಕ್ಕೆ ಡ್ಯಾಮೇಜ್ ಆಗಲಿದೆ. ನೀವು ಈ ವಿಚಾರವನ್ನ ಇಲ್ಲಿಗೆ ಕೈಬಿಡಬೇಕೆಂದು ಮನವೊಲಿಕೆ ಮಾಡಿದ್ದಾರೆ.

ಇದನ್ನೂ ಓದಿ

ಬೇಸಿಗೆಯಲ್ಲಿ ಹನಿಮೂನ್​ಗೆ ತೆರಳಬಹುದಾದ ರೊಮ್ಯಾಂಟಿಕ್​ ತಾಣಗಳಿವು

ಫುಟ್​ಪಾತ್​ ಗುಂಡಿಗೆ ಬಿದ್ದು ಖ್ಯಾತ ಗಾಯಕ ಅಜಯ್​ ವಾರಿಯರ್​ಗೆ ಗಾಯ; ಬಿಬಿಎಂಪಿ ವಿರುದ್ಧ ಅಸಮಾಧಾನ

Published On - 10:41 am, Wed, 11 May 22

ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ