AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾವೀರ ಜಯಂತಿ, ವೀಕೆಂಡ್ ಕರ್ಫ್ಯೂ ನಡುವೆ ಮಾಂಸ ಖರೀದಿಗೆ ಮುಗಿಬಿದ್ದ ಜನ, ಅಂಗಡಿ ಮುಚ್ಚಿಸಿ ಪೊಲೀಸರಿಂದ ವಾರ್ನಿಂಗ್

ಭಾನುವಾರದ ಬಾಡೂಟಕ್ಕೆ ಮಾಂಸದಂಗಡಿಗಳ ಮುಂದೆ ಜನ ಮುಗಿಬಿದ್ದಿದ್ದಾರೆ. 10 ಗಂಟೆಯವರೆಗೆ ಅಗತ್ಯವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. 10 ಗಂಟೆಯ ಬಳಿಕ ಎಲ್ಲಾ ಅಂಗಡಿಗಳನ್ನು ಮುಚ್ಚಿಸಲಾಗುತ್ತೆ. ಬಳಿಕ ವೀಕೆಂಡ್ ಕರ್ಫ್ಯೂ ಇರುತ್ತೆ.

ಮಹಾವೀರ ಜಯಂತಿ, ವೀಕೆಂಡ್ ಕರ್ಫ್ಯೂ ನಡುವೆ ಮಾಂಸ ಖರೀದಿಗೆ ಮುಗಿಬಿದ್ದ ಜನ, ಅಂಗಡಿ ಮುಚ್ಚಿಸಿ ಪೊಲೀಸರಿಂದ ವಾರ್ನಿಂಗ್
ಮಾಂಸದ ಅಂಗಡಿ
ಆಯೇಷಾ ಬಾನು
|

Updated on: Apr 25, 2021 | 9:42 AM

Share

ಬೆಂಗಳೂರು: ಇಂದು ಭಾನುವಾರ ಬಹುತೇಕ ಮಂದಿ ಮನೆಯಲ್ಲಿ ಮಾಂಸದೂಟ ಮಾಡಿ ಭರ್ಜರಿಯಾಗಿ ತಿನ್ನುವ ಆಸೆ ಹೊಂದಿರುತ್ತಾರೆ. ಆದರೆ ಮಹಾವೀರ ಜಯಂತಿ ಹಾಗೂ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಬಹಳ ಕಡೆ ಮಾಂಸ ಮಾರಾಟ ನಿಷೇಧಿಸಲಾಗಿದೆ. ಕೆಲ ಕಡೆ ಮಾಂಸದ ಅಂಗಡಿಗಳ ಮುಂದೆ ಜನ ಜಂಗುಳಿಯೇ ಕಾಣಸಿಗುತ್ತಿದೆ. ಸಾಮಾಜಿಕ ಅಂತರ ಮರೆತು ಜನ ಮಾಂಸ ಖರೀದಿಗೆ ಮುಗಿಬಿದ್ದಿದ್ದಾರೆ.

ಭಾನುವಾರದ ಬಾಡೂಟಕ್ಕೆ ಮಾಂಸದಂಗಡಿಗಳ ಮುಂದೆ ಜನ ಮುಗಿಬಿದ್ದಿದ್ದಾರೆ. 10 ಗಂಟೆಯವರೆಗೆ ಅಗತ್ಯವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. 10 ಗಂಟೆಯ ಬಳಿಕ ಎಲ್ಲಾ ಅಂಗಡಿಗಳನ್ನು ಮುಚ್ಚಿಸಲಾಗುತ್ತೆ. ಬಳಿಕ ವೀಕೆಂಡ್ ಕರ್ಫ್ಯೂ ಇರುತ್ತೆ. ಜನ ಓಡಾಡುವ ಹಾಗಿಲ್ಲ. ಹೀಗಾಗಿ ಮಾಂಸ ಪ್ರಿಯರು ತಮಗೆ ಇಷ್ಟವಾದ ಚಿಕನ್, ಮಟನ್, ಫಿಶ್ ಖರೀದಿಗಾಗಿ ಕೊರೊನಾ ನಿಯಮವನ್ನೇ ಮರೆತು ಮುಗಿಬಿದ್ದಿದ್ದಾರೆ. ರಾಜ್ಯದ ಬಹುತೇಕ ಮಾಂಸದಂಗಡಿಗಳ ಮುಂದೇ ಇದೇ ಸ್ಥಿತಿ ಕಂಡು ಬಂದಿದೆ. ಇನ್ನು ಕೆಲ ಕಡೆ ಕದ್ದುಮುಚ್ಚಿ ದುಪ್ಪಟ್ಟು ಬೆಲೆಗೆ ಮಾಂಸ ಮಾರಾಟ ಮಾಡಲಾಗುತ್ತಿದೆ.

ನಿಷೇಧದ ಮಧ್ಯೆ ಮಾಂಸ ಮಾರುತ್ತಿದ್ದ ಅಂಗಡಿ ಮೇಲೆ ದಾಳಿ ಮಹಾವೀರ ಜಯಂತಿ, ವೀಕೆಂಡ್ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ನಿಷೇಧದ ಮಧ್ಯೆ ಮಾಂಸ ಮಾರುತ್ತಿದ್ದ ಅಂಗಡಿ ಮೇಲೆ ದಾಳಿ ನಡೆದಿದೆ. ಗದಗ ನಗರದ ಸರಾಫ್ ಬಜಾರ್, ಜವಳಿ ಗಲ್ಲಿಯಲ್ಲಿ ರೇಡ್ ಆಗಿದ್ದು ಆದೇಶ ಉಲ್ಲಂಘಿಸಿ ಮಾರಾಟದಲ್ಲಿ ತೊಡಗಿದ್ದವರನ್ನು ಬಂಧಿಸಲಾಗಿದೆ. 9 ಮಾಂಸ ಮಾರಾಟಗಾರರನ್ನು ಗದಗ ಪೊಲೀಸರು ಬಂಧಿಸಿದ್ದಾರೆ. ನಗರಸಭೆ ಅಧಿಕಾರಿಗಳು ಮಾಂಸದ ಅಂಗಡಿ ಜಪ್ತಿ ಮಾಡಿದ್ದಾರೆ.

ನಿಷೇಧ ಉಲ್ಲಂಘಿಸಿ ದೇವನಹಳ್ಳಿಯಲ್ಲಿ ಮಾಂಸ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ಅಕ್ರಮವಾಗಿ ಮಾಂಸ ಮಾರಾಟ ಮಾಡ್ತಿದ್ದ ಅಂಗಡಿಗಳಿಗೆ ಬೀಗ ಹಾಕಿ ಪುರಸಭೆ ಅಧಿಕಾರಿಗಳು ಮತ್ತು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮತ್ತೊಂದು ಕಡೆ ಸಾಮಾಜಿಕ ಅಂತರ, ಮಾಸ್ಕ್ ಮರೆತು ತರಕಾರಿ ಖರೀದಿ, ಮಾಂಸ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಜನರನ್ನ ನಿಯಂತ್ರತಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

Meat Shop

ಮಾಂಸದ ಅಂಗಡಿ

ಇದನ್ನೂ ಓದಿ: ವೈದ್ಯಕೀಯ ಆಕ್ಸಿಜನ್ ಅಭಾವ; ಆಮ್ಲಜನಕವಿಲ್ಲದೆ ಜೀವ ಬಿಟ್ಟ ನವಜಾತ ಅವಳಿ ಶಿಶುಗಳು

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ