AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾವೀರ ಜಯಂತಿ, ವೀಕೆಂಡ್ ಕರ್ಫ್ಯೂ ನಡುವೆ ಮಾಂಸ ಖರೀದಿಗೆ ಮುಗಿಬಿದ್ದ ಜನ, ಅಂಗಡಿ ಮುಚ್ಚಿಸಿ ಪೊಲೀಸರಿಂದ ವಾರ್ನಿಂಗ್

ಭಾನುವಾರದ ಬಾಡೂಟಕ್ಕೆ ಮಾಂಸದಂಗಡಿಗಳ ಮುಂದೆ ಜನ ಮುಗಿಬಿದ್ದಿದ್ದಾರೆ. 10 ಗಂಟೆಯವರೆಗೆ ಅಗತ್ಯವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. 10 ಗಂಟೆಯ ಬಳಿಕ ಎಲ್ಲಾ ಅಂಗಡಿಗಳನ್ನು ಮುಚ್ಚಿಸಲಾಗುತ್ತೆ. ಬಳಿಕ ವೀಕೆಂಡ್ ಕರ್ಫ್ಯೂ ಇರುತ್ತೆ.

ಮಹಾವೀರ ಜಯಂತಿ, ವೀಕೆಂಡ್ ಕರ್ಫ್ಯೂ ನಡುವೆ ಮಾಂಸ ಖರೀದಿಗೆ ಮುಗಿಬಿದ್ದ ಜನ, ಅಂಗಡಿ ಮುಚ್ಚಿಸಿ ಪೊಲೀಸರಿಂದ ವಾರ್ನಿಂಗ್
ಮಾಂಸದ ಅಂಗಡಿ
ಆಯೇಷಾ ಬಾನು
|

Updated on: Apr 25, 2021 | 9:42 AM

Share

ಬೆಂಗಳೂರು: ಇಂದು ಭಾನುವಾರ ಬಹುತೇಕ ಮಂದಿ ಮನೆಯಲ್ಲಿ ಮಾಂಸದೂಟ ಮಾಡಿ ಭರ್ಜರಿಯಾಗಿ ತಿನ್ನುವ ಆಸೆ ಹೊಂದಿರುತ್ತಾರೆ. ಆದರೆ ಮಹಾವೀರ ಜಯಂತಿ ಹಾಗೂ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಬಹಳ ಕಡೆ ಮಾಂಸ ಮಾರಾಟ ನಿಷೇಧಿಸಲಾಗಿದೆ. ಕೆಲ ಕಡೆ ಮಾಂಸದ ಅಂಗಡಿಗಳ ಮುಂದೆ ಜನ ಜಂಗುಳಿಯೇ ಕಾಣಸಿಗುತ್ತಿದೆ. ಸಾಮಾಜಿಕ ಅಂತರ ಮರೆತು ಜನ ಮಾಂಸ ಖರೀದಿಗೆ ಮುಗಿಬಿದ್ದಿದ್ದಾರೆ.

ಭಾನುವಾರದ ಬಾಡೂಟಕ್ಕೆ ಮಾಂಸದಂಗಡಿಗಳ ಮುಂದೆ ಜನ ಮುಗಿಬಿದ್ದಿದ್ದಾರೆ. 10 ಗಂಟೆಯವರೆಗೆ ಅಗತ್ಯವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. 10 ಗಂಟೆಯ ಬಳಿಕ ಎಲ್ಲಾ ಅಂಗಡಿಗಳನ್ನು ಮುಚ್ಚಿಸಲಾಗುತ್ತೆ. ಬಳಿಕ ವೀಕೆಂಡ್ ಕರ್ಫ್ಯೂ ಇರುತ್ತೆ. ಜನ ಓಡಾಡುವ ಹಾಗಿಲ್ಲ. ಹೀಗಾಗಿ ಮಾಂಸ ಪ್ರಿಯರು ತಮಗೆ ಇಷ್ಟವಾದ ಚಿಕನ್, ಮಟನ್, ಫಿಶ್ ಖರೀದಿಗಾಗಿ ಕೊರೊನಾ ನಿಯಮವನ್ನೇ ಮರೆತು ಮುಗಿಬಿದ್ದಿದ್ದಾರೆ. ರಾಜ್ಯದ ಬಹುತೇಕ ಮಾಂಸದಂಗಡಿಗಳ ಮುಂದೇ ಇದೇ ಸ್ಥಿತಿ ಕಂಡು ಬಂದಿದೆ. ಇನ್ನು ಕೆಲ ಕಡೆ ಕದ್ದುಮುಚ್ಚಿ ದುಪ್ಪಟ್ಟು ಬೆಲೆಗೆ ಮಾಂಸ ಮಾರಾಟ ಮಾಡಲಾಗುತ್ತಿದೆ.

ನಿಷೇಧದ ಮಧ್ಯೆ ಮಾಂಸ ಮಾರುತ್ತಿದ್ದ ಅಂಗಡಿ ಮೇಲೆ ದಾಳಿ ಮಹಾವೀರ ಜಯಂತಿ, ವೀಕೆಂಡ್ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ನಿಷೇಧದ ಮಧ್ಯೆ ಮಾಂಸ ಮಾರುತ್ತಿದ್ದ ಅಂಗಡಿ ಮೇಲೆ ದಾಳಿ ನಡೆದಿದೆ. ಗದಗ ನಗರದ ಸರಾಫ್ ಬಜಾರ್, ಜವಳಿ ಗಲ್ಲಿಯಲ್ಲಿ ರೇಡ್ ಆಗಿದ್ದು ಆದೇಶ ಉಲ್ಲಂಘಿಸಿ ಮಾರಾಟದಲ್ಲಿ ತೊಡಗಿದ್ದವರನ್ನು ಬಂಧಿಸಲಾಗಿದೆ. 9 ಮಾಂಸ ಮಾರಾಟಗಾರರನ್ನು ಗದಗ ಪೊಲೀಸರು ಬಂಧಿಸಿದ್ದಾರೆ. ನಗರಸಭೆ ಅಧಿಕಾರಿಗಳು ಮಾಂಸದ ಅಂಗಡಿ ಜಪ್ತಿ ಮಾಡಿದ್ದಾರೆ.

ನಿಷೇಧ ಉಲ್ಲಂಘಿಸಿ ದೇವನಹಳ್ಳಿಯಲ್ಲಿ ಮಾಂಸ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ಅಕ್ರಮವಾಗಿ ಮಾಂಸ ಮಾರಾಟ ಮಾಡ್ತಿದ್ದ ಅಂಗಡಿಗಳಿಗೆ ಬೀಗ ಹಾಕಿ ಪುರಸಭೆ ಅಧಿಕಾರಿಗಳು ಮತ್ತು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಮತ್ತೊಂದು ಕಡೆ ಸಾಮಾಜಿಕ ಅಂತರ, ಮಾಸ್ಕ್ ಮರೆತು ತರಕಾರಿ ಖರೀದಿ, ಮಾಂಸ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಜನರನ್ನ ನಿಯಂತ್ರತಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

Meat Shop

ಮಾಂಸದ ಅಂಗಡಿ

ಇದನ್ನೂ ಓದಿ: ವೈದ್ಯಕೀಯ ಆಕ್ಸಿಜನ್ ಅಭಾವ; ಆಮ್ಲಜನಕವಿಲ್ಲದೆ ಜೀವ ಬಿಟ್ಟ ನವಜಾತ ಅವಳಿ ಶಿಶುಗಳು

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ