AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dr K. Sudhakar: ಕನ್ನಡ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಡಾ. ಕೆ.ಸುಧಾಕರ್​; ನಾಲ್ಕು ಜನರಿಗೆ ಸ್ಫೂರ್ತಿಯಾಗುವ ನೈಜ ಕಥೆ ಇದು ಎಂದ ಸಚಿವರು

ರಾಜಕೀಯಕ್ಕೆ ಕಾಲಿಟ್ಟ ಮೇಲೆ ಸಿನಿಮಾದಲ್ಲಿ ನಟಿಸುವುದು ತೀರ ವಿರಳ. ಇದೀಗ ಸಚಿವ ಡಾ. ಕೆ.ಸುಧಾಕರ್​ (K. Sudhakar) ಅವರು ತನುಜಾ ಎಂಬ Kannada cinema ನಟಿಸುತ್ತಿದ್ದು, ಇದು ನೈಜಕತೆಯನ್ನು ಆಧರಿಸಿದ ಸಿನಿಮಾ ಎಂಬುದು ಇನ್ನೂ ವಿಶೇಷ..

Dr K. Sudhakar: ಕನ್ನಡ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಡಾ. ಕೆ.ಸುಧಾಕರ್​; ನಾಲ್ಕು ಜನರಿಗೆ ಸ್ಫೂರ್ತಿಯಾಗುವ ನೈಜ ಕಥೆ ಇದು ಎಂದ ಸಚಿವರು
ಸಚಿವ ಡಾ.ಕೆ.ಸುಧಾಕರ್​ ಮತ್ತು NEET ಪರೀಕ್ಷೆ ಬರೆದ ವಿದ್ಯಾರ್ಥಿನಿ ತನುಜಾ
Lakshmi Hegde
|

Updated on:Feb 10, 2021 | 3:28 PM

Share

ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ (​ Dr K. Sudhakar) ಸಿನಿಮಾವೊಂದರಲ್ಲಿ ಪಾತ್ರ ನಿರ್ವಹಿಸುತ್ತಿದ್ದಾರೆ. ಮೂರು ತಾಸುಗಳ ಶೂಟಿಂಗ್​ಗೆ ಒಪ್ಪಿಕೊಂಡಿದ್ದಾಗಿ ಸ್ವತಃ ಸಚಿವರೇ ತಿಳಿಸಿದ್ದಾರೆ.  ಸಿನಿಮಾದಲ್ಲಿ ನಟನೆ ಮಾಡಿದ ಬಳಿಕ, ರಾಜಕೀಯಕ್ಕೆ ಧುಮುಕಿದವರ ಉದಾಹರಣೆ ಇದೆ. ಆದರೆ ರಾಜಕೀಯಕ್ಕೆ ಕಾಲಿಟ್ಟ ಮೇಲೆ ಸಿನಿಮಾದಲ್ಲಿ ನಟಿಸುವುದು ತೀರ ವಿರಳ. ಇದೀಗ ಸಚಿವರು ತನುಜಾ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದು, ಇದು ನೈಜಕತೆಯನ್ನು ಆಧರಿಸಿದ ಸಿನಿಮಾ ಎಂಬುದು ಇನ್ನೂ ವಿಶೇಷ.. ಈ ಬಗ್ಗೆ ಟಿವಿ 9 ಕನ್ನಡ ಡಿಜಿಟಲ್​, ಡಾ. ಕೆ. ಸುಧಾಕರ್ ಅವರ​ ಬಳಿ ಪ್ರಶ್ನಿಸಿದಾಗ, ಹೌದು..ನಾನು ಈ ಕನ್ನಡ ಸಿನಿಮಾ (Kannada cinema) ದಲ್ಲಿ ನಟಿಸಲು ಒಪ್ಪಿಕೊಂಡಿದ್ದೇನೆ. ಯಾವುದೇ ಕಮರ್ಷಿಯಲ್​ ಸಿನಿಮಾ ಅಲ್ಲ, ನಾಲ್ಕು ಜನರಿಗೆ ಸ್ಫೂರ್ತಿಯಾಗುವ ರೀತಿಯಲ್ಲಿ ಇರುವ ಚಲನಚಿತ್ರ ಇದಾಗಿದೆ ಎಂದು ತಿಳಿಸಿದ್ದಾರೆ.

ಏನಿದು ತನುಜಾ ಕತೆ? ನಿಮಗೆ ತನುಜಾ ಎಂಬ ಹುಡುಗಿಯ ಬಗ್ಗೆ ನೆನಪಿರಬಹುದು. ಶಿವಮೊಗ್ಗ ಜಿಲ್ಲೆಯವಳು ಈಕೆ. ಕಳೆದ ಸೆಪ್ಟೆಂಬರ್​ನಲ್ಲಿ ಕೊರೊನಾ ಕಾರಣದಿಂದ ನೀಟ್ ಪರೀಕ್ಷೆಗೆ ಹಾಜರಾಗಿರಲಿಲ್ಲ. 2020ರ ಸೆಪ್ಟೆಂಬರ್​ 13ರಂದು ನೀಟ್​ ಪರೀಕ್ಷೆ ನಡೆದಿತ್ತಾದರೂ ಅದಾಗಲೇ ತನುಜಾರ ಮನೆ ಇರುವ ಪ್ರದೇಶವನ್ನ ಕಂಟೈನ್​​ಮೆಂಟ್ ವಲಯವನ್ನಾಗಿ ಗುರುತಿಸಲಾಗಿತ್ತು. ಅಷ್ಟೇ ಅಲ್ಲ, ತನುಜಾರಲ್ಲೂ ಕೊರೊನಾ (corona virus) ಲಕ್ಷಣಗಳು ಕಾಣಿಸಿಕೊಂಡಿದ್ದವು.

ಮೊದಲ ಸಲ ಪರೀಕ್ಷೆ ಕೈ ತಪ್ಪಿದ್ದಕ್ಕೆ ಬೇಸರಗೊಂಡಿದ್ದ ತನುಜಾಗೆ, ಎನ್​ಟಿಎ ಎರಡನೇ ಬಾರಿಗೆ ನೀಟ್​ ಪರೀಕ್ಷೆ ನಡೆಸಲು ಒಪ್ಪಿದಾಗ ತುಂಬ ಖುಷಿಯಾಗಿತ್ತು. ಆದರೆ ಹೀಗೆ ಎರಡನೇ ಬಾರಿ ಪರೀಕ್ಷೆ ಬರೆಯಬೇಕು ಎಂದರೆ ಕೊವಿಡ್​-19 ಸಂಬಂಧಿತ ವರದಿ, ದಾಖಲೆಯನ್ನು ಮೇಲ್​ ಮಾಡಲು ಎನ್​ಟಿಎ ತಿಳಿಸಿತ್ತು. ಆದರೆ ಅಲ್ಲೂ ಸಹ ತನುಜಾರಿಗೆ ಹಿನ್ನಡೆಯಾಗಿತ್ತು. ನೆಟ್​ವರ್ಕ್​ ಸಮಸ್ಯೆಯಿಂದಾಗಿ ದಾಖಲೆಗಳನ್ನು ಸಲ್ಲಿಸಲು ಸಾಧ್ಯವಾಗಿರಲಿಲ್ಲ.

ಈ ವಿಷಯವನ್ನು ತನುಜಾ ನೋವಿನಿಂದ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದು ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಸುಧಾಕರ್​ ಅವರ ಗಮನಕ್ಕೂ ಬಂದು, ಇವರಿಬ್ಬರೂ ಸೇರಿ ಎನ್​ಟಿಎ ತಾಂತ್ರಿಕ ನಿರ್ದೇಶಕರ ಜತೆ ಮಾತುಕತೆ ನಡೆಸಿದ್ದರು. ಈ ಮೂಲಕ ತನುಜಾ ನೀಟ್ ಪರೀಕ್ಷೆ ಬರೆದು ಯಶಸ್ವಿಯಾಗಿ ಎಂಬಿಬಿಎಸ್​ ಸೀಟು ಗಿಟ್ಟಿಸಿಕೊಂಡಿದ್ದರು.

ತನುಜಾ ಅವರು ನೀಟ್​ ಪರೀಕ್ಷೆ ಬರೆದಿದ್ದು ಒಂದು ವಿಭಿನ್ನ ಕತೆ. ಇನ್ನು ಈ ಸಿನಿಮಾದಲ್ಲಿ ಡಾ. ಸುಧಾಕರ್​ ಯಾವ ಪಾತ್ರ ನಿರ್ವಹಿಸಲಿದ್ದಾರೆ ಎಂಬುದು ಕುತೂಹಲ.

ಇದನ್ನೂ ಓದಿ: ಕಠಿಣ ಮನಃಸ್ಥಿತಿಯಲ್ಲಿ ಪರೀಕ್ಷೆ ಬರೆದಿದ್ದ ತನುಜಾಗೆ ಈಗ ಮೆಡಿಕಲ್ ಸೀಟ್ ಕಟ್ಟಿಟ್ಟ ಬುತ್ತಿ

Published On - 3:23 pm, Wed, 10 February 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?