AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುವೈತ್​ನಿಂದ ಮಂಗಳೂರು ಬಂದರಿಗೆ ಬಂತು 40 ಮೆಟ್ರಿಕ್ ಟನ್ ಆಕ್ಸಿಜನ್

ಜೊತೆಗೆ 5 ಟನ್ ಆಕ್ಸಿಜನ್ ಸಿಲಿಂಡರ್ ಹಾಗೂ 4 ಹೈ ಫ್ಲೋ ಆಕ್ಸಿಜನ್ ಕಂಟೇನರ್​ಗಳು ಸಹ ಆಗಮಿಸಿವೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಕುವೈತ್​ನಿಂದ ಬಂದ ವೈದ್ಯಕೀಯ ನೆರವನ್ನು ಸ್ವಾಗತಿಸಿದ್ದಾರೆ.

ಕುವೈತ್​ನಿಂದ ಮಂಗಳೂರು ಬಂದರಿಗೆ ಬಂತು 40 ಮೆಟ್ರಿಕ್ ಟನ್ ಆಕ್ಸಿಜನ್
ಕುವೈತ್​ನಿಂದ ಬಂತು ಆಕ್ಸಿಜನ್
TV9 Web
| Edited By: |

Updated on:Aug 23, 2021 | 12:40 PM

Share

ಮಂಗಳೂರು: ಇಲ್ಲಿನ ನವ ಮಂಗಳೂರು ಬಂದರಿಗೆ ಕುವೈತ್​ನಿಂದ 40 ಮೆಟ್ರಿಕ್ ಟನ್ ಆಕ್ಸಿಜನ್ ಬಂದು ತಲುಪಿದೆ. ಐಎನ್​ಎಸ್ ಕೋಲ್ಕತ್ತಾ ಯುದ್ಧ ನೌಕೆ ಮೂಲಕ ವೈದ್ಯಕೀಯ ಆಮ್ಲಜನಕ ಬಂದಿಳಿದಿದೆ. ಜೊತೆಗೆ 5 ಟನ್ ಆಕ್ಸಿಜನ್ ಸಿಲಿಂಡರ್ ಹಾಗೂ 4 ಹೈ ಫ್ಲೋ ಆಕ್ಸಿಜನ್ ಕಂಟೇನರ್​ಗಳು ಸಹ ಆಗಮಿಸಿವೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಕುವೈತ್​ನಿಂದ ಬಂದ ವೈದ್ಯಕೀಯ ನೆರವನ್ನು ಸ್ವಾಗತಿಸಿದ್ದಾರೆ.

ಇದಕ್ಕೂ ಮುನ್ನ ಬಹ್ರೇನ್‌ನಿಂದ 40 ಮೆಟ್ರಿಕ್ ಟನ್ ಆಕ್ಸಿಜನ್ ಇಲ್ಲಿನ ನವ ಮಂಗಳೂರು ಬಂದರ್‌ಗೆ ಬಂದಿತ್ತು. ನೌಕಾಪಡೆಯ ಐಎನ್​ಎಸ್ ತಲ್ವಾರ್‌ನಲ್ಲಿ ಆಕ್ಸಿಜನ್ ಬಂದಿತ್ತು. ಬಹ್ರೇನ್‌ನ ಮನಾಮಾ ಬಂದರಿನಿಂದ ಬಂದಿದ್ದ ಐಎನ್​ಎಸ್ ತಲ್ವಾರ್‌, ಆಕ್ಸಿಜನ್ ಹೊತ್ತು ತಂದಿತ್ತು. 2 ಕ್ರಯೋಜೆನಿಕ್ ಐಸೋಕಂಟೇನರ್​ಗಳಲ್ಲಿ ಆಕ್ಸಿಜನ್ ರವಾನೆ ಮಾಡಲಾಗಿತ್ತು. ಕೇವಲ ಆಕ್ಸಿಜನ್ ಮಾತ್ರವಲ್ಲದೆ, ಕೊವಿಡ್ ಚಿಕಿತ್ಸೆಗೆ ಬಳಸಲಾಗುವ ಇತರ ವೈದ್ಯಕೀಯ ಉಪಕರಣಗಳನ್ನು ಕೂಡ ಹಡಗು ತಂದಿತ್ತು.

20 ಮೆಟ್ರಿಕ್ ಟನ್ ಆಕ್ಸಿಜನ್​​ ಕರಾವಳಿ ಭಾಗಕ್ಕೆ ಬಳಕೆ ಕರಾವಳಿ ಭಾಗಕ್ಕೆ (ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡಕ್ಕೆ) 20 ಮೆಟ್ರಿಕ್ ಟನ್ ಆಕ್ಸಿಜನ್​ನ್ನು ಬಳಕೆ ಮಾಡಿಕೊಳ್ಳಲಿರುವ ಜಿಲ್ಲಾಡಳಿತ, ನಂತರದ 20 ಮೆಟ್ರಿಕ್ ಟನ್ ಆಕ್ಸಿಜನ್​ನ್ನು ವಿವಿಧ ಜಿಲ್ಲೆಗಳಿಗೆ ಬಳಕೆ ಮಾಡಲಿದೆ ಎಂದು ಮಾಹಿತಿ ಲಭ್ಯವಾಗಿತ್ತು.

ಅಮೆರಿಕಾದಿಂದ ನೆರವು ಅಷ್ಟೇ ಅಲ್ಲದೆ, ಅಮೆರಿಕಾದಿಂದ ಭಾರತಕ್ಕೆ 2200 ಆಕ್ಸಿಜನ್ ಕಾನ್ಸೆಂಟ್ರೇಟರ್​​ ನೆರವು ಒದಗಿಬಂದಿದೆ. ಜೊತೆಗೆ 10 ಸಾವಿರ ಆಕ್ಸಿಮೀಟರ್ ಸಹ ಭಾರತಕ್ಕೆ ರವಾನೆಯಾಗಿದೆ. ಕೇಂದ್ರ ಸರ್ಕಾರವು ಇವುಗಳನ್ನ ತಕ್ಷಣ ಕೆಲ ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಕೇಂದ್ರ ನೀತಿ ಆಯೋಗ (National Institution for Transforming India-NITI Aayog) ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಅದರಲ್ಲಿ ಕರ್ನಾಟಕಕ್ಕೆ ಹೆಚ್ಚು ಪಾಲು ಸಂದಾಯವಾಗಿದೆ ಎಂಬುದು ಸಮಧಾನಕರ ವಿಷಯ.

ಕೊರೊನಾ ಸಂಕಷ್ಟ ಕಾಲದಲ್ಲಿ ಅಮರಿಕದಿಂದ ಬಂದಿಳಿದಿರುವ ವೈದ್ಯಕೀಯ ನೆರವಿನಲ್ಲಿ ಕರ್ನಾಟಕಕ್ಕೆ 400 ಆಕ್ಸಿಜನ್ ಕಾನ್ಸೆಂಟ್ರೇಟರ್​ಗಳು (Oxygen Concentrators), ಮಹಾರಾಷ್ಟ್ರಕ್ಕೆ 300 ಆಕ್ಸಿಜನ್ ಕಾನ್ಸೆಂಟ್ರೇಟರ್​ ನೀಡಿಕೆಯಾಗಿದೆ. ಇನ್ನು ಪಲ್ಸ್ ಆಕ್ಸಿಮೀಟರ್ (Oximeters) ಪೈಕಿ ಕರ್ನಾಟಕಕ್ಕೆ 1,308 ನೀಡಲಾಗಿದೆ. ಮಹಾರಾಷ್ಟ್ರಕ್ಕೆ 2,144 ಆಕ್ಸಿಮೀಟರ್​ಗಳು ಹೋಗಿವೆ. ಕೇರಳಕ್ಕೆ 1048 ಆಕ್ಸಿಮೀಟರ್ ನೀಡಲಾಗಿದೆ.

ಇದನ್ನೂ ಓದಿ: ಕೊರೊನಾ ಅಟ್ಟಹಾಸಕ್ಕೆ ನಲುಗಿದ್ದ ಕೋಲಾರ ಜಿಲ್ಲೆಗೊಂದು ಹೊಸ ಆಶಾಕಿರಣ.. ಉಸಿರಿಗೆ ಉಸಿರು ನೀಡಲು ಬಂತು ಇಸ್ರೇಲ್​ ಆಕ್ಸಿಜನ್​!

ಆಕ್ಸಿಜನ್ ದೇವಾಲಯವಾದ ಗುರುದ್ವಾರ!

Published On - 6:45 pm, Mon, 10 May 21

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!