AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸರ್ಕಾರಿ ಆಸ್ಪತ್ರೆಗಳಿಗೆ ಹೋದ್ರೆ ಇಲ್ಲ ಔಷಧ ಗ್ಯಾರಂಟಿ! 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್

ಒಂದೆಡೆ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ನೆರವಿಗೆ ಧಾವಿಸಿದೆ ಎನ್ನುತ್ತಿರುವ ರಾಜ್ಯ ಸರ್ಕಾರ ಮತ್ತೊಂದೆಡೆ ಆರೋಗ್ಯದ ವಿಚಾರದಲ್ಲಿ ಅದೇ ಬಡವರನ್ನು ಸಂಕಷ್ಟಕ್ಕೆ ದೂಡುತ್ತಿದೆಯೇ? ಇಂಥದ್ದೊಂದು ಅನುಮಾನ ಇದೀಗ ಸೃಷ್ಟಿಯಾಗಿದೆ. ಇದಕ್ಕೆ ಬಲವಾದ ಕಾರಣವೂ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅನೇಕ ಅಗತ್ಯ ಔಷಧಗಳ ತೀವ್ರ ಕೊರತೆ ಇದ್ದು, ಬಡವರು ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್​​ಗಳನ್ನು ಅವಲಂಬಿಸಬೇಕಾಗಿ ಬಂದಿದೆ.

ಕರ್ನಾಟಕ ಸರ್ಕಾರಿ ಆಸ್ಪತ್ರೆಗಳಿಗೆ ಹೋದ್ರೆ ಇಲ್ಲ ಔಷಧ ಗ್ಯಾರಂಟಿ! 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್
ಸಾಂದರ್ಭಿಕ ಚಿತ್ರ
Vinay Kashappanavar
| Updated By: Ganapathi Sharma|

Updated on: Nov 18, 2024 | 11:38 AM

Share

ಬೆಂಗಳೂರು, ನವೆಂಬರ್ 18: ಕರ್ನಾಟಕದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ 250ಕ್ಕೂ ಹೆಚ್ಚು ಔಷಧಗಳು ದಾಸ್ತಾನಿಲ್ಲದಿರುವ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ, ಬಡ ರೋಗಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಹೋದರೆ ಔಷಧ ಸಿಗುವ ಗ್ಯಾರಂಟಿಯೇ ಇಲ್ಲವಾಗಿದೆ. ಒಂದೆಡೆ, ಆಗಾಗ್ಗೆ ಬದಲಾಗುವ ವಾತಾವರಣದಿಂದಾಗಿ ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದೆ. ಇಂಥ ಪರಿಸ್ಥಿತಿಯಲ್ಲಿಯೇ ಔಷಧ ದಾಸ್ತಾನು ಕೊರತೆ ಉಂಟಾಗಿರುವುದು ಸಮಸ್ಯೆಗೆ ಕಾರಣವಾಗಿದೆ.

ಸರ್ಕಾರಿ ಔಷಧ ದಾಸ್ತಾನು ಕೇಂದ್ರಗಳಲ್ಲಿ ಔಷಧಗಳು ಖಾಲಿಯಾಗಿವೆ. ಮತ್ತೊಂದೆಡೆ, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ 250 ಔಷಧಗಳ ದಾಸ್ತಾನು ಸಂಪೂರ್ಣ ಖಾಲಿ ಆಗಿದೆ.

ಔಷಧ ಕೊರತೆಗೆ ಕಾರಣವೇನು?

ಟೆಂಡರ್ ಪ್ರಕ್ರಿಯೆ ವಿಳಂಬವಾಗಿರುವುದೇ ಔಷಧ ಕೊರತೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಇದೇ ಕಾರಣದಿಂದ ಜೀವರಕ್ಷಕ ಔಷಧಗಳ ಪೂರೈಕೆಯೂ ಸ್ಥಗಿತವಾಗಿದೆ. ಹೀಗಾಗಿ ಬಡ ರೋಗಿಗಳು ದುಬಾರಿ ಬೆಲೆ ಕೊಟ್ಟು ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್​ಗೆ ತೆರಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಯಾವೆಲ್ಲ ಔಷಧಗಳು ಔಟ್ ಆಫ್ ಸ್ಟಾಕ್?

ಔಷಧ ಪೂರೈಕೆಗೆ ಪ್ರತಿ ವರ್ಷ ಕೆಎಸ್ಎಂಸಿಎಲ್ (ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ) ಕೋಟ್ಯಂತರ ರೂ. ಖರ್ಚು ಮಾಡುತ್ತದೆ. ಆದಾಗ್ಯೂ ಈ ವರ್ಷ ಔಷಧ ಕೊರತೆ ಎದುರಾಗಿದೆ. ಶ್ವಾಸಕೋಶ, ಕರುಳು, ರಕ್ತಹೀನತೆ, ನ್ಯಮೋನಿಯಾ, ಅಸ್ತಮಾ, ಮಧುಮೇಹ, ಬಿಪಿ, ಹೃದಯಾಘಾತ, ಕಣ್ಣಿನ ಸೋಂಕು ಸೇರಿದಂತೆ ಹಲವು ಗಂಭೀರ ಖಾಯಿಲೆಗಳಿಗೆ ನೀಡುವ ಔಷಧಗಳೇ ಸದ್ಯಕ್ಕೆ ಔಟ್ ಆಫ್ ಸ್ಟಾಕ್ ಆಗಿವೆ.

ಇದನ್ನೂ ಓದಿ: ಮಧುಮೇಹ ರೋಗಿಗಳಿಗೆ ನಸುಕಂದು ಮಚ್ಚೆಗಳು ಏಕೆ ಬರುತ್ತವೆ?

ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಯಾರಸಿಟಮಲ್, ಅಲ್ಬುಮಿನಿ, ಆ್ಯಂಪ್ಸಿಲಿನ್, ಲೆವೊಥೈರಾಕ್ಸಿನ್, ವಿಲ್ಡಗ್ಲೀಪ್ಟನ್, ಪ್ಯಾರಸಿಟಾ, ನ್ಯುಸ್ಟೊಜಿಮೈನ್, ಸಬ್ಲೋಟೊಮಲ್, ಅಸ್ಟೊಪೈನ್ ಸೇರಿದಂತೆ ವಿವಿಧ ಮಾತ್ರೆಗಳ ಕೊರತೆ ಇದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ