AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸರ್ಕಾರಿ ಆಸ್ಪತ್ರೆಗಳಿಗೆ ಹೋದ್ರೆ ಇಲ್ಲ ಔಷಧ ಗ್ಯಾರಂಟಿ! 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್

ಒಂದೆಡೆ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ನೆರವಿಗೆ ಧಾವಿಸಿದೆ ಎನ್ನುತ್ತಿರುವ ರಾಜ್ಯ ಸರ್ಕಾರ ಮತ್ತೊಂದೆಡೆ ಆರೋಗ್ಯದ ವಿಚಾರದಲ್ಲಿ ಅದೇ ಬಡವರನ್ನು ಸಂಕಷ್ಟಕ್ಕೆ ದೂಡುತ್ತಿದೆಯೇ? ಇಂಥದ್ದೊಂದು ಅನುಮಾನ ಇದೀಗ ಸೃಷ್ಟಿಯಾಗಿದೆ. ಇದಕ್ಕೆ ಬಲವಾದ ಕಾರಣವೂ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅನೇಕ ಅಗತ್ಯ ಔಷಧಗಳ ತೀವ್ರ ಕೊರತೆ ಇದ್ದು, ಬಡವರು ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್​​ಗಳನ್ನು ಅವಲಂಬಿಸಬೇಕಾಗಿ ಬಂದಿದೆ.

ಕರ್ನಾಟಕ ಸರ್ಕಾರಿ ಆಸ್ಪತ್ರೆಗಳಿಗೆ ಹೋದ್ರೆ ಇಲ್ಲ ಔಷಧ ಗ್ಯಾರಂಟಿ! 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Nov 18, 2024 | 11:38 AM

Share

ಬೆಂಗಳೂರು, ನವೆಂಬರ್ 18: ಕರ್ನಾಟಕದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ 250ಕ್ಕೂ ಹೆಚ್ಚು ಔಷಧಗಳು ದಾಸ್ತಾನಿಲ್ಲದಿರುವ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ, ಬಡ ರೋಗಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಹೋದರೆ ಔಷಧ ಸಿಗುವ ಗ್ಯಾರಂಟಿಯೇ ಇಲ್ಲವಾಗಿದೆ. ಒಂದೆಡೆ, ಆಗಾಗ್ಗೆ ಬದಲಾಗುವ ವಾತಾವರಣದಿಂದಾಗಿ ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದೆ. ಇಂಥ ಪರಿಸ್ಥಿತಿಯಲ್ಲಿಯೇ ಔಷಧ ದಾಸ್ತಾನು ಕೊರತೆ ಉಂಟಾಗಿರುವುದು ಸಮಸ್ಯೆಗೆ ಕಾರಣವಾಗಿದೆ.

ಸರ್ಕಾರಿ ಔಷಧ ದಾಸ್ತಾನು ಕೇಂದ್ರಗಳಲ್ಲಿ ಔಷಧಗಳು ಖಾಲಿಯಾಗಿವೆ. ಮತ್ತೊಂದೆಡೆ, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ 250 ಔಷಧಗಳ ದಾಸ್ತಾನು ಸಂಪೂರ್ಣ ಖಾಲಿ ಆಗಿದೆ.

ಔಷಧ ಕೊರತೆಗೆ ಕಾರಣವೇನು?

ಟೆಂಡರ್ ಪ್ರಕ್ರಿಯೆ ವಿಳಂಬವಾಗಿರುವುದೇ ಔಷಧ ಕೊರತೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಇದೇ ಕಾರಣದಿಂದ ಜೀವರಕ್ಷಕ ಔಷಧಗಳ ಪೂರೈಕೆಯೂ ಸ್ಥಗಿತವಾಗಿದೆ. ಹೀಗಾಗಿ ಬಡ ರೋಗಿಗಳು ದುಬಾರಿ ಬೆಲೆ ಕೊಟ್ಟು ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್​ಗೆ ತೆರಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಯಾವೆಲ್ಲ ಔಷಧಗಳು ಔಟ್ ಆಫ್ ಸ್ಟಾಕ್?

ಔಷಧ ಪೂರೈಕೆಗೆ ಪ್ರತಿ ವರ್ಷ ಕೆಎಸ್ಎಂಸಿಎಲ್ (ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ) ಕೋಟ್ಯಂತರ ರೂ. ಖರ್ಚು ಮಾಡುತ್ತದೆ. ಆದಾಗ್ಯೂ ಈ ವರ್ಷ ಔಷಧ ಕೊರತೆ ಎದುರಾಗಿದೆ. ಶ್ವಾಸಕೋಶ, ಕರುಳು, ರಕ್ತಹೀನತೆ, ನ್ಯಮೋನಿಯಾ, ಅಸ್ತಮಾ, ಮಧುಮೇಹ, ಬಿಪಿ, ಹೃದಯಾಘಾತ, ಕಣ್ಣಿನ ಸೋಂಕು ಸೇರಿದಂತೆ ಹಲವು ಗಂಭೀರ ಖಾಯಿಲೆಗಳಿಗೆ ನೀಡುವ ಔಷಧಗಳೇ ಸದ್ಯಕ್ಕೆ ಔಟ್ ಆಫ್ ಸ್ಟಾಕ್ ಆಗಿವೆ.

ಇದನ್ನೂ ಓದಿ: ಮಧುಮೇಹ ರೋಗಿಗಳಿಗೆ ನಸುಕಂದು ಮಚ್ಚೆಗಳು ಏಕೆ ಬರುತ್ತವೆ?

ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಯಾರಸಿಟಮಲ್, ಅಲ್ಬುಮಿನಿ, ಆ್ಯಂಪ್ಸಿಲಿನ್, ಲೆವೊಥೈರಾಕ್ಸಿನ್, ವಿಲ್ಡಗ್ಲೀಪ್ಟನ್, ಪ್ಯಾರಸಿಟಾ, ನ್ಯುಸ್ಟೊಜಿಮೈನ್, ಸಬ್ಲೋಟೊಮಲ್, ಅಸ್ಟೊಪೈನ್ ಸೇರಿದಂತೆ ವಿವಿಧ ಮಾತ್ರೆಗಳ ಕೊರತೆ ಇದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ