AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜ ಸೇವೆಯಲ್ಲ, ಇದು ‘ಕರ್ತವ್ಯ’; ಜನಾನುರಾಗಿ ಈ ಬೆಂಗಳೂರು ಹುಡುಗ ವಿನೋದ್

ಇವರ ಹೆಸರು ವಿನೋದ್ ಕರ್ತವ್ಯ. ವೃತ್ತಿಯಲ್ಲಿ ಡಿಆರ್​​ಡಿಒ ತಾಂತ್ರಿಕ ಅಧಿಕಾರಿ. ನಮ್ಮ ಸಮಾಜ ನಮಗೆ ಎಲ್ಲವನ್ನೂ ಕೊಟ್ಟಿದೆ, ಅದನ್ನು ನಾವು ಸಮಾಜಕ್ಕೆ ಮರಳಿಸಬೇಕು. ಹಾಗಾಗಿ ನಾನು ಮಾಡುತ್ತಿರುವುದು ಸಾಮಾಜಿಕ ಸೇವೆ ಅಲ್ಲ, ಕರ್ತವ್ಯ ಎಂದು ಹೇಳುವ ಜನಾನುರಾಗಿಯಾದ ಈ ಯುವಕನಿಗೆ ನಾಡು ನುಡಿ ಬಗ್ಗೆ ಅಪಾರ ಹೆಮ್ಮೆ. ಸಮಾಜದ ಬಗ್ಗೆ ಅತೀವ ಕಾಳಜಿ. ಹೀಗೆ ಹಲವಾರು ಸಮಾಜಮುಖಿ ಕಾರ್ಯಗಳಿಗೆ ನೇತೃತ್ವವಹಿಸಿರುವ 'ಬೆಂಗಳೂರು ಹುಡುಗ' ತಂಡದ ಸಂಸ್ಥಾಪಕ ವಿನೋದ್ ಅವರ ಸಾಮಾಜಿಕ, ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಕಿರುನೋಟ ಬೀರುವ ಲೇಖನ ಇಲ್ಲಿದೆ.

ಸಮಾಜ ಸೇವೆಯಲ್ಲ, ಇದು 'ಕರ್ತವ್ಯ'; ಜನಾನುರಾಗಿ ಈ ಬೆಂಗಳೂರು ಹುಡುಗ ವಿನೋದ್
ವಿನೋದ್ ಕರ್ತವ್ಯ
ರಶ್ಮಿ ಕಲ್ಲಕಟ್ಟ
|

Updated on:Jul 25, 2024 | 1:15 PM

Share

ಫೇಸ್​​ಬುಕ್​​​ನಲ್ಲಿ ಸ್ಕ್ರಾಲ್ ಮಾಡುತ್ತಿದ್ದಾಗ ಕಣ್ಣಿಗೆ ಬಿದ್ದ ಹೆಸರು ಬೆಂಗಳೂರು ಹುಡುಗ ವಿನೋದ್ ಕರ್ತವ್ಯ (Vinod karthavya). ವೃತ್ತಿ ಡಿಆರ್​​​ಡಿಒದಲ್ಲಿ(DRDO) ತಾಂತ್ರಿಕ ಅಧಿಕಾರಿ. ಹೆಸರಿನ ಬಗ್ಗೆ ಕುತೂಹಲದಿಂದ ಫೇಸ್​​ಬುಕ್ ಫೀಡ್ ನೋಡಿದಾಗ ಅವರು ಮಾಡುತ್ತಿರುವ ಸಾಮಾಜಿಕ ಕಾರ್ಯಗಳ ಬಗ್ಗೆ ಒಂದಷ್ಟು ವಿಷಯ ಗೊತ್ತಾಗಿಬಿಟ್ಟಿತು. ಇವರ ಬಗ್ಗೆ ಇನ್ನಷ್ಟು ತಿಳಿಯುವ ಕುತೂಹಲದಿಂದ ಅವರಲ್ಲಿ ಮಾತನಾಡಿಸಿದಾಗ ಅವರು ಹೇಳಿದ್ದು, ನಾವು ಮಾಡುತ್ತಿರುವುದು ಸೇವೆ ಅಲ್ಲ, ಕರ್ತವ್ಯ. ಸಮಾಜ ನಮಗೆ ಕೊಟ್ಟಿದ್ದನ್ನು ನಾವು ಸಮಾಜಕ್ಕೆ ಮರಳಿಸುತ್ತಿದ್ದೇವೆ. ಹೆಸರಿನ ಜತೆಗೆ ‘ಕರ್ತವ್ಯ’ ಎಂದು ಸೇರಿಸಿಕೊಂಡಿರುವ ಬಗ್ಗೆ ಮಾತು ಆರಂಭಿಸಿದ ವಿನೋದ್, ತಾವು ಯಾವ ರೀತಿ ಸಾಮಾಜಿಕ ಕರ್ತವ್ಯಗಳನ್ನು ಮಾಡುತ್ತಿದ್ದೇವೆ ಎಂಬುದನ್ನು ಟಿವಿ9 ಆ್ಯಪ್​​ಗೆ ವಿವರಿಸಿದ್ದಾರೆ. ಹುಟ್ಟಿ ಬೆಳೆದದ್ದು ಬಡತನದಲ್ಲಿ. ಅಪ್ಪ ಸೋಮಶೇಖರ್ ಮಗ್ಗದ ಕೆಲಸ ಮಾಡುತ್ತಿದ್ದರು. ಅಮ್ಮ ಇಂದ್ರಾಣಿ. ಮನೆಯಲ್ಲಿ ಬಡತನವಿದ್ದರೂ ಅಪ್ಪ ಅಮ್ಮ ನನಗೆ ಉತ್ತಮ ಶಿಕ್ಷಣವನ್ನು ಕೊಡಿಸಿದರು. ನಾನು ಐಐಟಿ ಮುಗಿಸಿ, ಬಿಕಾಂ ಮಾಡಿ ನಂತರ ಡಿಪ್ಲೋಮಾ ಇಂಜಿನಿಯರಿಂಗ್ ಮಾಡಿದ್ದೆ. ಸಂಜೆ ಕಾಲೇಜಿಗೆ ಹೋಗಿ ಶಿಕ್ಷಣ ಪೂರೈಸಿದ್ದೆ. ನನ್ನ 19ನೇ ವಯಸ್ಸಿನಲ್ಲಿ ಡಿಆರ್​​ಡಿಒದಲ್ಲಿ ನೌಕರಿ ಸಿಕ್ಕಿತು. ಬದುಕು ಸುಧಾರಿಸಿತು, ಮನೆ ಕೂಡಾ ಆಯ್ತು. ಈಗ ಒಂಥರಾ ನೆಮ್ಮದಿಯ ಬದುಕು. ಹೀಗಿರುವಾಗಲೇ ಯೋಚನೆ ಹೊಳೆದದ್ದು ಸರ್ಕಾರ ಅಂದ್ರೆ ತೆರಿಗೆದಾರರ ದುಡ್ಡಿನಿಂದಲೇ ಅಲ್ಲವೇ ಇದೆಲ್ಲ ಸಾಧ್ಯವಾಗಿದ್ದು, ಅದರ ಋಣ ನಮ್ಮ ಮೇಲಿದೆ. ನಾವು ನಮ್ಮ ಸುತ್ತಮುತ್ತಲಿನ ಜನರಿಗಾಗಿ, ಸಾರ್ವಜನಿಕರಿಗಾಗಿ ಏನಾದರೊಂದು ಕೆಲಸ ಮಾಡಬೇಕು ಎಂಬುದು. ಹಾಗೆ ನಾನು  ಸಮಾನ ಮನಸ್ಕರಾದ ಐವರು ಗೆಳೆಯರು ಜತೆ ಸೇರಿ 2013ರಲ್ಲಿ ಅಂಬೇಡ್ಕರ್ ಜಯಂತಿಯಂದು ಅನಾಥಾಶ್ರಮವೊಂದಕ್ಕೆ...

Published On - 5:09 pm, Fri, 12 July 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?