AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಮತ್ತೊಂದು ವಿಘ್ನ; ಈ ಬಾರಿ ಪುದುಚೇರಿಯಿಂದ ಅಡ್ಡಗಾಲು! ಯಾಕಂತೆ?

ಕರ್ನಾಟಕದ ಮೇಕೆದಾಟಿನಲ್ಲಿ ಕಾವೇರಿ ನೀರಿಗೆ ಜಲಾಶಯ ನಿರ್ಮಿಸಿದರೆ ಪುದುಚೇರಿಯ ಕೆಲ ಪ್ರದೇಶಗಳಲ್ಲಿ ನೀರಿನ ಅಭಾವ ಉಂಟಾಗುತ್ತದೆ. ಹೀಗಾಗಿ ಕರ್ನಾಟಕ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಬಾರದು ಎಂಬುದು ಪುದುಚೇರಿ ಸರ್ಕಾರದ ವಾದವಾಗಿದೆ. ಈ ಮಧ್ಯೆ, ಶುಕ್ರವಾರ ತಮಿಳುನಾಡು ಸರ್ವಪಕ್ಷ ನಿಯೋಗವು ಪ್ರಧಾನಿಯನ್ನ ಭೇಟಿ ಮಾಡಲಿದೆ.

ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಮತ್ತೊಂದು ವಿಘ್ನ; ಈ ಬಾರಿ ಪುದುಚೇರಿಯಿಂದ ಅಡ್ಡಗಾಲು! ಯಾಕಂತೆ?
ಮೇಕೆದಾಟು ಡ್ಯಾಮ್ ನಿರ್ಮಾಣಕ್ಕೆ ಮತ್ತೊಂದು ವಿಘ್ನ; ಈ ಬಾರಿ ಪುದುಚೇರಿಯಿಂದ ಅಡ್ಡಗಾಲು
TV9 Web
| Edited By: ಸಾಧು ಶ್ರೀನಾಥ್​|

Updated on:Jul 14, 2021 | 6:06 PM

Share

ನವದೆಹಲಿ: ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ಸರ್ಕಾರವು ಡ್ಯಾಂ ನಿರ್ಮಾಣ ಮಾಡಲು ನಿರ್ಧರಿಸಿದ್ದು, ಇದಕ್ಕೆ ತಮಿಳುನಾಡು ಸರ್ಕಾರದಿಂದ ವಿರೋದ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಈಗ ಪುದುಚೇರಿ ಸರ್ಕಾರದಿಂದಲೂ ವಿರೋಧ ವ್ಯಕ್ತವಾಗಿದೆ. ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿ ವಿದ್ಯುತ್ ಉತ್ಪಾದನೆ ಹಾಗೂ ಕುಡಿಯುವ ನೀರಿನ ಉದ್ದೇಶಕ್ಕಾಗಿ ಡ್ಯಾಂ ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.

ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ (Mekedatu project) ಈ ಬಾರಿ ಪುದುಚೇರಿ ಅಡ್ಡಗಾಲು ಹಾಕಿದ್ದು, ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ತಡೆ ನೀಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಜಲಸಂಪನ್ಮೂಲ ಸಚಿವರಿಗೆ ಪತ್ರ ಬರೆಯಲು ಮುಂದಾಗಿದೆ. ಇಂದು ಪುದುಚೇರಿ ಸಿಎಂ ರಂಗಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕರ್ನಾಟಕದ ಮೇಕೆದಾಟಿನಲ್ಲಿ ಕಾವೇರಿ ನೀರಿಗೆ ಜಲಾಶಯ ನಿರ್ಮಿಸಿದರೆ ಪುದುಚೇರಿಯ ಕೆಲ ಪ್ರದೇಶಗಳಲ್ಲಿ ನೀರಿನ ಅಭಾವ ಉಂಟಾಗುತ್ತದೆ. ಹೀಗಾಗಿ ಕರ್ನಾಟಕ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಬಾರದು ಎಂಬುದು ಪುದುಚೇರಿ ಸರ್ಕಾರದ ವಾದವಾಗಿದೆ. ಈ ಮಧ್ಯೆ, ಶುಕ್ರವಾರ ತಮಿಳುನಾಡು ಸರ್ವಪಕ್ಷ ನಿಯೋಗವು ಪ್ರಧಾನಿಯನ್ನ ಭೇಟಿ ಮಾಡಲಿದೆ.

ಮೇಕೆದಾಟು ಜಲಾಶಯ ನಿರ್ಮಾಣ ಯೋಜನೆಯಿಂದ ಕರ್ನಾಟಕ ಸರ್ಕಾರ 440 ಮೆಗಾ ವ್ಯಾಟ್ ವಿದ್ಯುತ್‌ ಉತ್ಪಾದನೆ ಮಾಡಲು ಉದ್ದೇಶಿಸಿದೆ. ಕಾವೇರಿ ನ್ಯಾಯಾಧಿಕರಣದ ತೀರ್ಪಿನ ಅನ್ವಯ ಕುಡಿಯುವ ನೀರಿನ ಬಳಕೆಗೂ ಯೋಜನೆ ಸಹಕಾರಿಯಾಗಲಿದೆ. ಆದರೆ, ಕುಡಿಯುವ ಉದ್ದೇಶಕ್ಕೆ ಈ ಯೋಜನೆಯ ಅಗತ್ಯವಿಲ್ಲ. ಇದೇ ವೇಳೆ ಯೋಜನೆಯನ್ನು ನೀರಾವರಿಗೆ ಬಳಕೆ ಮಾಡುವುದಕ್ಕೆ ಅವಕಾಶವಿಲ್ಲ.

(Mekedatu project in the Cauvery basin Now puducherry government opposes Karnataka government)

Published On - 6:00 pm, Wed, 14 July 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​