AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಮತ್ತೊಂದು ವಿಘ್ನ; ಈ ಬಾರಿ ಪುದುಚೇರಿಯಿಂದ ಅಡ್ಡಗಾಲು! ಯಾಕಂತೆ?

ಕರ್ನಾಟಕದ ಮೇಕೆದಾಟಿನಲ್ಲಿ ಕಾವೇರಿ ನೀರಿಗೆ ಜಲಾಶಯ ನಿರ್ಮಿಸಿದರೆ ಪುದುಚೇರಿಯ ಕೆಲ ಪ್ರದೇಶಗಳಲ್ಲಿ ನೀರಿನ ಅಭಾವ ಉಂಟಾಗುತ್ತದೆ. ಹೀಗಾಗಿ ಕರ್ನಾಟಕ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಬಾರದು ಎಂಬುದು ಪುದುಚೇರಿ ಸರ್ಕಾರದ ವಾದವಾಗಿದೆ. ಈ ಮಧ್ಯೆ, ಶುಕ್ರವಾರ ತಮಿಳುನಾಡು ಸರ್ವಪಕ್ಷ ನಿಯೋಗವು ಪ್ರಧಾನಿಯನ್ನ ಭೇಟಿ ಮಾಡಲಿದೆ.

ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಮತ್ತೊಂದು ವಿಘ್ನ; ಈ ಬಾರಿ ಪುದುಚೇರಿಯಿಂದ ಅಡ್ಡಗಾಲು! ಯಾಕಂತೆ?
ಮೇಕೆದಾಟು ಡ್ಯಾಮ್ ನಿರ್ಮಾಣಕ್ಕೆ ಮತ್ತೊಂದು ವಿಘ್ನ; ಈ ಬಾರಿ ಪುದುಚೇರಿಯಿಂದ ಅಡ್ಡಗಾಲು
TV9 Web
| Edited By: |

Updated on:Jul 14, 2021 | 6:06 PM

Share

ನವದೆಹಲಿ: ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ಸರ್ಕಾರವು ಡ್ಯಾಂ ನಿರ್ಮಾಣ ಮಾಡಲು ನಿರ್ಧರಿಸಿದ್ದು, ಇದಕ್ಕೆ ತಮಿಳುನಾಡು ಸರ್ಕಾರದಿಂದ ವಿರೋದ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಈಗ ಪುದುಚೇರಿ ಸರ್ಕಾರದಿಂದಲೂ ವಿರೋಧ ವ್ಯಕ್ತವಾಗಿದೆ. ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿ ವಿದ್ಯುತ್ ಉತ್ಪಾದನೆ ಹಾಗೂ ಕುಡಿಯುವ ನೀರಿನ ಉದ್ದೇಶಕ್ಕಾಗಿ ಡ್ಯಾಂ ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.

ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ (Mekedatu project) ಈ ಬಾರಿ ಪುದುಚೇರಿ ಅಡ್ಡಗಾಲು ಹಾಕಿದ್ದು, ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ತಡೆ ನೀಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಜಲಸಂಪನ್ಮೂಲ ಸಚಿವರಿಗೆ ಪತ್ರ ಬರೆಯಲು ಮುಂದಾಗಿದೆ. ಇಂದು ಪುದುಚೇರಿ ಸಿಎಂ ರಂಗಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕರ್ನಾಟಕದ ಮೇಕೆದಾಟಿನಲ್ಲಿ ಕಾವೇರಿ ನೀರಿಗೆ ಜಲಾಶಯ ನಿರ್ಮಿಸಿದರೆ ಪುದುಚೇರಿಯ ಕೆಲ ಪ್ರದೇಶಗಳಲ್ಲಿ ನೀರಿನ ಅಭಾವ ಉಂಟಾಗುತ್ತದೆ. ಹೀಗಾಗಿ ಕರ್ನಾಟಕ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಬಾರದು ಎಂಬುದು ಪುದುಚೇರಿ ಸರ್ಕಾರದ ವಾದವಾಗಿದೆ. ಈ ಮಧ್ಯೆ, ಶುಕ್ರವಾರ ತಮಿಳುನಾಡು ಸರ್ವಪಕ್ಷ ನಿಯೋಗವು ಪ್ರಧಾನಿಯನ್ನ ಭೇಟಿ ಮಾಡಲಿದೆ.

ಮೇಕೆದಾಟು ಜಲಾಶಯ ನಿರ್ಮಾಣ ಯೋಜನೆಯಿಂದ ಕರ್ನಾಟಕ ಸರ್ಕಾರ 440 ಮೆಗಾ ವ್ಯಾಟ್ ವಿದ್ಯುತ್‌ ಉತ್ಪಾದನೆ ಮಾಡಲು ಉದ್ದೇಶಿಸಿದೆ. ಕಾವೇರಿ ನ್ಯಾಯಾಧಿಕರಣದ ತೀರ್ಪಿನ ಅನ್ವಯ ಕುಡಿಯುವ ನೀರಿನ ಬಳಕೆಗೂ ಯೋಜನೆ ಸಹಕಾರಿಯಾಗಲಿದೆ. ಆದರೆ, ಕುಡಿಯುವ ಉದ್ದೇಶಕ್ಕೆ ಈ ಯೋಜನೆಯ ಅಗತ್ಯವಿಲ್ಲ. ಇದೇ ವೇಳೆ ಯೋಜನೆಯನ್ನು ನೀರಾವರಿಗೆ ಬಳಕೆ ಮಾಡುವುದಕ್ಕೆ ಅವಕಾಶವಿಲ್ಲ.

(Mekedatu project in the Cauvery basin Now puducherry government opposes Karnataka government)

Published On - 6:00 pm, Wed, 14 July 21

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್