AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಲಣಗವಿ ಮಠದ ದೇಶಿಕೇಂದ್ರ ಶಿವಾಚಾರ್ಯ ಶ್ರೀಗಳಿಗೆ ಕೊರೊನಾ; ಕಿಚ್ಚ ಸುದೀಪ್​ಗೂ ಆತಂಕ?

ಮೇಲಣಗವಿ ಮಠದ ಪೀಠಾಧ್ಯಕ್ಷ ದೇಶಿಕೇಂದ್ರ ಶಿವಾಚಾರ್ಯ ಶ್ರೀಗಳಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರುವುದರ ಬೆನ್ನಲ್ಲೇ ನಟ ಕಿಚ್ಚ ಸುದೀಪ್​ ಅಭಿಮಾನಿಗಳಿಗೂ ಆತಂಕ ಶುರುವಾಗಿದೆ. ಏಪ್ರಿಲ್​ 4 ರಂದು ನಡೆದ ಕಾರ್ಯಕ್ರಮದಲ್ಲಿ ನಟ ಕಿಚ್ಚ ಸುದೀಪ್​ಗೆ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳು ಶಿವಗಂಗಾ ಶ್ರೀ ಪ್ರಶಸ್ತಿ ಪ್ರದಾನ ಮಾಡಿದ್ದರು.

ಮೇಲಣಗವಿ ಮಠದ ದೇಶಿಕೇಂದ್ರ ಶಿವಾಚಾರ್ಯ ಶ್ರೀಗಳಿಗೆ ಕೊರೊನಾ; ಕಿಚ್ಚ ಸುದೀಪ್​ಗೂ ಆತಂಕ?
ಪ್ರಾತಿನಿಧಿಕ ಚಿತ್ರ
Skanda
|

Updated on: Apr 09, 2021 | 9:13 AM

Share

ನೆಲಮಂಗಲ: ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ನೆಲಮಂಗಲ ತಾಲ್ಲೂಕು ಶಿವಗಂಗೆಯ ಮೇಲಣಗವಿ ಮಠದ ಪೀಠಾಧ್ಯಕ್ಷ ದೇಶಿಕೇಂದ್ರ ಶಿವಾಚಾರ್ಯ ಶ್ರೀಗಳಿಗೆ ಕೊರೊನಾ ಪಾಸಿಟಿವ್​ ದೃಢವಾಗಿದೆ. ಜಿಲ್ಲೆಯಲ್ಲಿ ಸೆಕ್ಷನ್​ 144 ಜಾರಿಯಲ್ಲಿದ್ದರೂ ನಡೆದಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಶ್ರೀಗಳು ಪಾಲ್ಗೊಂಡಿದ್ದು, ಇದೀಗ ಅವರಿಗೆ ಕೊರೊನಾ ಪಾಸಿಟಿವ್​ ದೃಢವಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಸಾವಿರಾರು ಜನ ಸೇರಿದ್ದ ಕಾರ್ಯಕ್ರಮ ನೆರವೇರಿದ ಎರಡು ದಿನಗಳ ನಂತರ ಅಂದರೆ ಏಪ್ರಿಲ್​ 6ಕ್ಕೆ ಮೇಲಣಗವಿ ಮಠದ ಪೀಠಾಧ್ಯಕ್ಷರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಶ್ರೀಗಳಿಗೆ ಕೊರೊನಾ ಪಾಸಿಟಿವ್ ಬಂದ ಕಾರಣ ಹೋಂ ಐಸೋಲೇಷನ್​ನಲ್ಲಿ ಇರುವಂತೆ ವೈದ್ಯರು ಸಲಹೆ ನೀಡಿದ್ದು, ಶ್ರೀಗಳ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುತ್ತಿದೆ.

ಕಿಚ್ಚ ಸುದೀಪ್​ಗೂ ಕೊರೊನಾ ಭಯ? ಮೇಲಣಗವಿ ಮಠದ ಪೀಠಾಧ್ಯಕ್ಷ ದೇಶಿಕೇಂದ್ರ ಶಿವಾಚಾರ್ಯ ಶ್ರೀಗಳಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರುವುದರ ಬೆನ್ನಲ್ಲೇ ನಟ ಕಿಚ್ಚ ಸುದೀಪ್​ ಅಭಿಮಾನಿಗಳಿಗೂ ಆತಂಕ ಶುರುವಾಗಿದೆ. ಏಪ್ರಿಲ್​ 4 ರಂದು ನಡೆದ ಕಾರ್ಯಕ್ರಮದಲ್ಲಿ ನಟ ಕಿಚ್ಚ ಸುದೀಪ್​ಗೆ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳು ಶಿವಗಂಗಾ ಶ್ರೀ ಪ್ರಶಸ್ತಿ ಪ್ರದಾನ ಮಾಡಿದ್ದರು. ಸಾವಿರಾರು ಜನ ಸೇರಿದ್ದ ಈ ಕಾರ್ಯಕ್ರಮ ಮುಗಿದ ಎರಡೇ ದಿನಕ್ಕೆ ಶ್ರೀಗಳಿಗೆ ಪಾಸಿಟಿವ್​ ಕಾಣಿಸಿಕೊಂಡಿರುವ ಕಾರಣ ನಟ ಸುದೀಪ್​ಗೂ ಕೊರೊನಾ ತಗುಲಿರಬಹುದಾ ಎಂಬ ಆತಂಕವನ್ನು ಕೆಲವರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ನಿಯಮಾವಳಿ ಪಾಲಿಸದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ದೂರು ದಾಖಲು 

ಸಿಎಂಗಳಿಗೆ ಪಿಎಂ ಕೊಟ್ಟ 5 ಟಿಪ್ಸ್​: ಕೊರೊನಾ ಸೋಂಕು ತಡೆಗೆ ರಾಜ್ಯಗಳಿಗೆ ನರೇಂದ್ರ ಮೋದಿ ಕೊಟ್ಟ ಮುಖ್ಯ ಸಲಹೆಗಳಿವು

(Melanagavi Mutt Swamiji tested positive for Corona Kichcha Sudeep was in primary contact 5 days before)

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ