AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಶಿಷ್ಟ ಜಾತಿ ಮೀಸಲಾತಿ ಪ್ರಬಲರ ಪಾಲಾಗುತ್ತಿದೆ -ರಾಜ್ಯದಲ್ಲಿ ಆರಂಭವಾಗಲಿದೆ ಬೃಹತ್​ ಮಾದಿಗ ಪಾದಯಾತ್ರೆ

ಮೀಸಲಾತಿ ಪ್ರಬಲರ ಪಾಲಾಗ್ತಿದೆ. ಪರಿಶಿಷ್ಟ ಜಾತಿ ಮೀಸಲಾತಿ ಪ್ರಬಲರ ಪಾಲಾಗುತ್ತಿದೆ. ಇದರಿಂದ ಕನಿಷ್ಠ ಮಟ್ಟದಲ್ಲಿ ಜೀವನ ಮಾಡುವ ಮಾದಿಗರಿಗೆ ಅನ್ಯಾಯವಾಗುತ್ತಿದೆ ಎಂದು ಶ್ರೀಗಳು ಹೇಳಿದರು.

ಪರಿಶಿಷ್ಟ ಜಾತಿ ಮೀಸಲಾತಿ ಪ್ರಬಲರ ಪಾಲಾಗುತ್ತಿದೆ -ರಾಜ್ಯದಲ್ಲಿ ಆರಂಭವಾಗಲಿದೆ ಬೃಹತ್​ ಮಾದಿಗ ಪಾದಯಾತ್ರೆ
ಷಡಕ್ಷರಿಮುನಿ ಸ್ವಾಮೀಜಿ
KUSHAL V
|

Updated on:Mar 07, 2021 | 5:29 PM

Share

ದಾವಣಗೆರೆ: ನ್ಯಾಯಮೂರ್ತಿ ಎ.ಜೆ.ಸದಾಶಿವ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಮಾ.25ರಿಂದ ಮಾದಿಗ ಸಮುದಾಯದಿಂದ ಬೃಹತ್​ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು, ನಗರದಲ್ಲಿ ಷಡಕ್ಷರಿಮುನಿ ಸ್ವಾಮೀಜಿ ಮಾಹಿತಿ ಹಂಚಿಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕೋಡಿಹಳ್ಳಿ ಮಠದ ಶ್ರೀಗಳಾದ ಷಡಕ್ಷರಿಮುನಿ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.

DVG SWAMIJI PROTEST 2

ಪಾದಯಾತ್ರೆಯ ಕುರಿತು ಚರ್ಚೆಗೆ ಮುಂದಾರ ಮಾದಿಗ ಸಮುದಾಯದ ಮುಖಂಡರು

ಮೀಸಲಾತಿ ಪ್ರಬಲರ ಪಾಲಾಗ್ತಿದೆ. ಪರಿಶಿಷ್ಟ ಜಾತಿ ಮೀಸಲಾತಿ ಪ್ರಬಲರ ಪಾಲಾಗುತ್ತಿದೆ. ಇದರಿಂದ ಕನಿಷ್ಠ ಮಟ್ಟದಲ್ಲಿ ಜೀವನ ಮಾಡುವ ಮಾದಿಗರಿಗೆ ಅನ್ಯಾಯವಾಗುತ್ತಿದೆ ಎಂದು ಶ್ರೀಗಳು ಹೇಳಿದರು.

DVG SWAMIJI PROTEST 3

ಚರ್ಚೆಯಲ್ಲಿ ಭಾಗಿಯಾದ ಮಾದಿಗ ಸಮುದಾಯದ ಸದಸ್ಯರು

ಹಾಗಾಗಿ, ಮಾ.25ರಿಂದ ಮಾದಿಗ ಸಮುದಾಯದ ಸದಸ್ಯರು ಬೃಹತ್​ ಪಾದಯಾತ್ರೆಯನ್ನು ಆಯೋಜಿಸಿದ್ದಾರೆ. ಹನಗವಾಡಿ ಬಳಿಯಿರುವ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾಧಿ ಸ್ಥಳದಿಂದ 280 ಕಿ.ಮೀ ಪಾದಯಾತ್ರೆ ನಡೆಸಿ ಸಮಾವೇಶ ನಡೆಸಲಾಗುವುದು. ಬೆಂಗಳೂರಿನಲ್ಲಿ ಮಾದಿಗರ ಬೃಹತ್​ ಸಮಾವೇಶ ಮಾಡಿ ಮನವಿ ಸಲ್ಲಿಸಲಾಗುವುದು. ಸಿಎಂ B.S.ಯಡಿಯೂರಪ್ಪಗೆ ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದೇವೆ ಎಂದು ಸ್ವಾಮೀಜಿಗಳು ತಿಳಿಸಿದರು.

DVG SWAMIJI PROTEST 6

ಮೈತ್ರಿವನ

ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯಲ್ಲಿ ಬರುವ 101 ಜಾತಿಗಳಲ್ಲಿ ಮಾದಿಗರು ಕನಿಷ್ಠ ಮಟ್ಟದ ಜೀವನ ನಡೆಸುತ್ತಿದ್ದಾರೆ. ಈ ಸಮಾಜಕ್ಕೆ ನ್ಯಾಯ ಒದಗಿಸಲು ಇದೇ 25 ರಂದು ಜಿಲ್ಲೆಯ ಹರಿಹರದ ಹನಗವಾಡಿ ಬಳಿ ಇರುವ ದಲಿತ ಹೋರಾಟಗಾರ ಪ್ರೊ.ಬಿ.ಕೃಷ್ಣಪ್ಪ ಸಮಾಧಿ ಸ್ಥಳದಿಂದ 280 ಕಿಲೋಮೀಟರ್ ಪಾದಯಾತ್ರೆ ನಡೆಯಲಿದೆ ಎಂದು ಶ್ರೀಗಳು ಹೇಳಿದರು.

DVG SWAMIJI PROTEST 5

ಪ್ರೊ.ಬಿ.ಕೃಷ್ಣಪ್ಪ ಸ್ಮಾರಕ ಭವನ

ಪ್ರೊ.ಬಿ.ಕೃಷ್ಣಪ್ಪ ಸಮಾಧಿ ಸ್ಥಳ

DVG SWAMIJI PROTEST 4

ಷಡಕ್ಷರಿಮುನಿ ಸ್ವಾಮೀಜಿ

ಇದನ್ನೂ ಓದಿ: ಆನ್​ಲೈನ್ ಕ್ಲಾಸ್ ತಂದ ಅವಾಂತರ: ವಿದ್ಯಾರ್ಥಿಗಳ ಆರೋಗ್ಯಕ್ಕೆ ಮಾರಕವಾಗ್ತಿದ್ಯಾ ಆನ್​ಲೈನ್​​ ಪಾಠ?

Published On - 5:28 pm, Sun, 7 March 21

Follow Us
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ