AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಹಂತ 2ಎ, 2ಬಿ ಯೋಜನೆ ಅನುಮೋದನೆಗೆ ಬೆಂಗಳೂರು ಮಹಾನಗರ ಯೋಜನಾ ಸಮಿತಿ ಸಭೆ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಪ್ರಮುಖ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಕಾಮಗಾರಿ ಪ್ರಾರಂಭಿಸಲು ಸಿದ್ಧವಾಗಿದೆ. 58 ಕಿ.ಮೀ.‌ ಮೆಟ್ರೋ ಮಾರ್ಗವನ್ನು 5 ವರ್ಷಗಳಿಗಿಂತ ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಲು ಮೆಟ್ರೋ ರೈಲು ನಿಗಮ ಯೋಜನೆ ಹಾಕಿಕೊಂಡಿದೆ.

ನಮ್ಮ ಮೆಟ್ರೋ ಹಂತ 2ಎ, 2ಬಿ ಯೋಜನೆ ಅನುಮೋದನೆಗೆ ಬೆಂಗಳೂರು ಮಹಾನಗರ ಯೋಜನಾ ಸಮಿತಿ ಸಭೆ
ನಮ್ಮ ಮೆಟ್ರೋ (ಸಾಂಕೇತಿಕ ಚಿತ್ರ)
TV9 Web
| Edited By: |

Updated on:Aug 23, 2021 | 12:38 PM

Share

ಬೆಂಗಳೂರು: ನಮ್ಮ ಮೆಟ್ರೋ 2ಎ, 2ಬಿ ಯೋಜನೆ ಅನುಮೋದನೆಗೆ ಬೆಂಗಳೂರು ಮಹಾನಗರ ಯೋಜನಾ ಸಮಿತಿ ಸಭೆ ನಡೆಸಿದೆ. ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್​ ನಾರಾಯಣ, ಬಿಎಂಆರ್​ಸಿಎಲ್​ ವ್ಯವಸ್ಥಾಪಕ ನಿರ್ದೇಶಕ ರಾಕೇಶ್​ ಸಿಂಗ್, ಸಿಎಂ ಎಸಿಎಸ್ ಡಾ. ರಮಣ ರೆಡ್ಡಿ, ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ.

ಹಂತ 2ಎ ಮೆಟ್ರೋ ಯೋಜನೆಯು ಸೆಂಟ್ರಲ್ ಸಿಲ್ಕ್ ಬೋರ್ಡ್‌ ಜಂಕ್ಷನ್‌ನಿಂದ ಕೆ.ಆರ್. ಪುರಂವರೆಗೆ 20 ಕಿ.ಮೀ. ಮತ್ತು ಹಂತ 2ಬಿ ಮೆಟ್ರೋ ಯೋಜನೆಯು ಕೆ.ಆರ್‌. ಪುರಂನಿಂದ ಹೆಬ್ಬಾಳ ಮೂಲಕ ವಿಮಾನ‌ ನಿಲ್ದಾಣ ಟರ್ಮಿನಲ್‌ವರೆಗೆ 38 ಕಿ.ಮೀ. ಅಂದರೆ ಒಟ್ಟು 58 ಕಿ.ಮೀ. ಮೆಟ್ರೋ ಯೋಜನೆ ಇದಾಗಿರಲಿದೆ. ಯೋಜನೆಯು 30 ಮೆಟ್ರೋ ನಿಲ್ದಾಣಗಳನ್ನು ಒಳಗೊಂಡಿರುತ್ತದೆ.

ಈ ಯೋಜನೆಯಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಹೆಬ್ಬಾಳದವರೆಗಿನ ಐಟಿ ಇಂಡಸ್ಟ್ರಿ ಉದ್ಯೋಗಿಗಳಿಗೆ, ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ಹೆಚ್ಚಿನ ಸಹಾಯವಾಗಲಿದೆ. ಈ ಯೋಜನೆಗೆ ಕರ್ನಾಟಕ ರಾಜ್ಯ ಸರ್ಕಾರವು ಜನವರಿ 2019ರಲ್ಲಿ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರವು 2021 ಏಪ್ರಿಲ್ 28ರಂದು 14,788 ಕೋಟಿ ರೂಪಾಯಿಗಳಿಗೆ ಅನುಮೋದನೆ‌ ನೀಡಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಪ್ರಮುಖ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಕಾಮಗಾರಿ ಪ್ರಾರಂಭಿಸಲು ಸಿದ್ಧವಾಗಿದೆ. 58 ಕಿ.ಮೀ.‌ ಮೆಟ್ರೋ ಮಾರ್ಗವನ್ನು 5 ವರ್ಷಗಳಿಗಿಂತ ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಲು ಮೆಟ್ರೋ ರೈಲು ನಿಗಮ ಯೋಜನೆ ಹಾಕಿಕೊಂಡಿದೆ.

ಇದನ್ನೂ ಓದಿ: ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ, 2ಬಿ ಹಂತಕ್ಕೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ

ಬೆಡ್​ ಸಿಕ್ಕಿಲ್ಲ.. ಮೆಟ್ರೋ ನಿಲ್ದಾಣದ ಕೆಳಗೆ ಆ್ಯಂಬುಲೆನ್ಸ್​ನಲ್ಲೇ ಚಿಕಿತ್ಸೆ | ಅಧಿಕಾರಿಗಳೇ ಇತ್ತ ನೋಡಿ..!

Published On - 9:02 pm, Mon, 10 May 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?