AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ

ಮೈಕ್ರೋ ಫೈನಾನ್ಸ್​ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಸದ್ಯ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ ಮಾಡಿದೆ. ಮೈಕ್ರೋ ಫೈನಾನ್ಸ್ ಪದ ಬಳಸಿದರೆ ಸಮಸ್ಯೆ ಆಗಬಹುದೆಂಬ ಲೆಕ್ಕಾಚಾರ ಹಿನ್ನಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಸಣ್ಣ ಸಾಲ ಎಂಬ ಪದ ಸೇರಿಸಿದೆ.

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ
ಪ್ರಸನ್ನ ಗಾಂವ್ಕರ್​
| Edited By: |

Updated on:Feb 05, 2025 | 4:31 PM

Share

ಬೆಂಗಳೂರು, ಫೆಬ್ರವರಿ 05: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ (Micro finance) ಕಿರುಕುಳಕ್ಕೆ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಗ್ರಾಮಸ್ಥರು ಊರುಗಳನ್ನೇ ತೊರೆಯುತ್ತಿದ್ದಾರೆ. ಫೈನಾನ್ಸ್ ಹಾವಳಿಗೆ ಅಂಕುಶ ಹಾಕಲು ಸರ್ಕಾರ ಸುಗ್ರೀವಾಜ್ಞೆ ಅಸ್ತ್ರ ಪ್ರಯೋಗಿಸಿದೆ. ಇತ್ತೀಚೆಗೆ ಸುಗ್ರೀವಾಜ್ಞೆ ಡ್ರಾಫ್ಟ್ ಅನ್ನು ರಾಜ್ಯಪಾಲರಿಗೆ ರವಾನೆ ಮಾಡಲಾಗಿತ್ತು. ಇದೀಗ ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ ಮಾಡಲಾಗಿದೆ.

ಮೈಕ್ರೋ ಫೈನಾನ್ಸ್​ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಸದ್ಯ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ ಮಾಡಿದೆ. ಮೈಕ್ರೋ ಸಾಲ ಮತ್ತು ಸಣ್ಣ ಸಾಲ (ದಬ್ಬಾಳಿಕೆ ಕ್ರಮಗಳ ತಡೆಗಟ್ಟುವಿಕೆ) ಸುಗ್ರೀವಾಜ್ಞೆ 2025 ಎಂದು ಕೆಲ ಅಂಶ ಬದಲಾವಣೆ ಮಾಡಲಾಗಿದೆ. ಮೈಕ್ರೋ ಫೈನಾನ್ಸ್ ಪದ ಬಳಸಿದರೆ ಸಮಸ್ಯೆ ಆಗಬಹುದೆಂಬ ಲೆಕ್ಕಾಚಾರ ಹಿನ್ನಲೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಸುಗ್ರೀವಾಜ್ಞೆ ಹೊಸ್ತಿಲಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಮೈಕ್ರೋಫೈನಾನ್ಸ್ ಕಂಪನಿಗಳು

ಮೈಕ್ರೋ ಫೈನಾನ್ಸ್​ಗಳು ಆರ್​ಬಿಐ ಅಡಿಯಲ್ಲಿ ನೋಂದಣಿ ಆಗಿರುತ್ತವೆ. ಜೊತೆಗೆ ಕಾನೂನು ಕ್ರಮ ಜರುಗಿಸುವುದಕ್ಕೆ ಕಷ್ಟವಾಗುತ್ತೆ. ಹೀಗಾಗಿ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಸಣ್ಣ ಸಾಲ ಎಂಬ ಪದ ಸೇರಿಸಿದೆ.

ಸರ್ಕಾರ ಸಾಲಗಾರನ ರಕ್ಷಣೆಗಾಗಿ ಸುಗ್ರೀವಾಜ್ಞೆಯ ರಕ್ಷಾ ಕವಚ ರಚನೆ ಮಾಡಿದೆ. ಬಡ್ಡಿ ದಂಧೆ, ಫೈನಾನ್ಸ್ ಸಿಬ್ಬಂದಿಯನ್ನ ಕಟ್ಟಿಹಾಕಲು ಕಠಿಣ ಕಾನೂನುಗಳನ್ನೇ ಅಳವಡಿಸಿ ಸುಗ್ರೀವಾಜ್ಞೆಯನ್ನ ರಾಜ್ಯಪಾಲರ ಅಂಗಳಕ್ಕೆ ಕಳಿಸಿಕೊಟ್ಟಿದೆ. ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಹಿಯೊಂದೇ ಬಾಕಿ ಇದೆ.

ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆ ಡ್ರಾಫ್ಟ್​ ರಾಜ್ಯಪಾಲರಿಗೆ ರವಾನೆ: ಜೈಲು ಶಿಕ್ಷೆಯಲ್ಲಿ ಬದಲಾವಣೆ

ಪ್ರಸ್ತಾವಿತ ಸುಗ್ರೀವಾಜ್ಞೆಯಲ್ಲಿ ಮೈಕ್ರೋ ಫೈನಾನ್ಸ್ ಕಾನೂನು ಉಲ್ಲಂಘನೆಗೆ ಜೈಲು ಶಿಕ್ಷೆಯನ್ನು 3 ವರ್ಷ ಇದ್ದದ್ದನ್ನು 10 ವರ್ಷಕ್ಕೆ ಹೆಚ್ಚಿಸಲಾಗಿದೆ. ದಂಡವನ್ನು 5 ಲಕ್ಷ ರೂಪಾಯಿಗೆ ಏರಿಸಲಾಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್‌ಕೆ ಪಾಟೀಲ್ ನೇತೃತ್ವದ ತಜ್ಞರ ಸಮಿತಿ ಶಿಕ್ಷೆ ಪ್ರಮಾಣ ಹೆಚ್ಚಿಸಲು ಶಿಫಾರಸು ಮಾಡಿದ್ದು, ಕಠಿಣ ಕ್ರಮದ ನಿರೀಕ್ಷೆ ಹೆಚ್ಚಾಗಿದೆ.

ಷರತ್ತುಗಳು ಮೀರಿದರೆ ಏನಾಗುತ್ತೆ?

ಸುಗ್ರೀವಾಜ್ಞೆಯ ಕಾನೂನು ಮೀರಿದರೆ 10 ವರ್ಷ ಜೈಲು ಶಿಕ್ಷೆ, 5 ಲಕ್ಷ ದಂಡ ವಿಧಿಸಲಾಗುತ್ತೆ. ನೋಂದಣಿ ಆಗದ ಸಂಸ್ಥೆಗಳು ನೀಡುವ ಸಾಲ ಮತ್ತು ಬಡ್ಡಿ ಮನ್ನಾ ಆಗಲಿದೆ. ಸಾಲಗಾರರ ವಿರುದ್ಧ ಯಾವುದೇ ಸಿವಿಲ್ ಕೋರ್ಟ್​ನಲ್ಲಿ ಕೇಸ್ ದಾಖಲಿಸಬಹುದು. ಕಿರುಕುಳ ಸಂಬಂಧ ಪೊಲೀಸ್ ಠಾಣೆಗೆ ದೂರುಕೊಡ್ಬೋದು. DYSP ಶ್ರೇಣಿಗಿಂತ ಮೇಲಿನ ಅಧಿಕಾರಿಗಳು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬಹುದು. ವಿವಾದಗಳನ್ನು ಇತ್ಯರ್ಥಪಡಿಸಲು ಒಂಬುಡ್ಸ್​ಮೆನ್ ನೇಮಕಕ್ಕೂ ಅವಕಾಶ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:24 pm, Wed, 5 February 25

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?