AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕ್ರೋಸಾಫ್ಟ್​ನ ಕ್ಲೌಡ್​ ಸರ್ವಿಸ್​ ಸಮಸ್ಯೆ: ಬೆಂಗಳೂರು, ಮಂಗಳೂರು ಏರ್​​ಪೋರ್ಟ್​​ನಲ್ಲಿ ಮ್ಯಾನುವಲ್ ಚೆಕ್​ ಇನ್​ ವ್ಯವಸ್ಥೆ

ಮೈಕ್ರೋಸಾಫ್ಟ್​ನ ‘ಕ್ಲೌಡ್​’ ಸರ್ವಿಸ್​ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಿಶ್ವದ ವಿಮಾನಯಾನ ಸಂಸ್ಥೆಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಹೀಗಾಗಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮ್ಯಾನುವಲ್ ಚೆಕ್ ಇನ್​​ಗೆ ವ್ಯವಸ್ಥೆ ಮಾಡಲಾಗಿದ್ದು, ನಿಗದಿತ ಸಮಯಕ್ಕಿಂತ ಮೊದಲೇ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ಸೂಚನೆ ನೀಡಲಾಗಿದೆ.

ಮೈಕ್ರೋಸಾಫ್ಟ್​ನ ಕ್ಲೌಡ್​ ಸರ್ವಿಸ್​ ಸಮಸ್ಯೆ: ಬೆಂಗಳೂರು, ಮಂಗಳೂರು ಏರ್​​ಪೋರ್ಟ್​​ನಲ್ಲಿ ಮ್ಯಾನುವಲ್ ಚೆಕ್​ ಇನ್​ ವ್ಯವಸ್ಥೆ
ಮೈಕ್ರೋಸಾಫ್ಟ್​ನ ‘ಕ್ಲೌಡ್​’ಸರ್ವಿಸ್​ ಸಮಸ್ಯೆ: ಬೆಂಗಳೂರು, ಮಂಗಳೂರು ಏರ್​​ಪೋರ್ಟ್​​ನಲ್ಲಿ ಮ್ಯಾನುವಲ್ ಚೆಕ್​ ಇನ್​ ವ್ಯವಸ್ಥೆ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Jul 19, 2024 | 3:03 PM

ಮಂಗಳೂರು, ಜುಲೈ 19: ಮೈಕ್ರೋಸಾಫ್ಟ್ ಕ್ಲೌಡ್ ಸರ್ವೀಸ್​ನಲ್ಲಿ ತಾಂತ್ರಿಕ ಸಮಸ್ಯೆ (Microsoft’s cloud service, problem) ಉಂಟಾದ ಹಿನ್ನೆಲೆ ಭಾರತ ಸೇರಿದಂತೆ ಹಲವು ದೇಶಗಳಲ್ಲಿ ವಿಮಾನ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ವಿಶ್ವದ ವಿಮಾನಯಾನ ಸಂಸ್ಥೆಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಬೆಂಗಳೂರಿನ ಕೆಂಪೇಗೌಡ ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡಿದ್ದಾರೆ. ತಾತ್ಕಾಲಿಕವಾಗಿ ಬುಕಿಂಗ್, ಚೆಕ್​​ ಇನ್ ಸೇವೆಗಳ ಮೇಲೆ ಪರಿಣಾಮ ಬೀರಿದ್ದು, ಸ್ಪೆಸ್ ಜೆಟ್, ಇಂಡಿಗೋ ಸಂಸ್ಥೆಗಳಲ್ಲಿ ಹೆಚ್ಚು ಸಮಸ್ಯೆ ಉಂಟಾಗಿದೆ.

ಆರೋಗ್ಯ ವ್ಯವಸ್ಥೆಗಳು ಸೇರಿದಂತೆ ಹಲವು ಭಾಗಗಳಲ್ಲಿ ತುರ್ತು ಸೇವೆಗಳು ಅಸ್ತವ್ಯಸ್ತವಾಗಿದೆ. ಯುರೋಪ್​ನ ಬಹುತೇಕ ಏರ್​​ಲೈನ್ ಕಂಪನಿಗಳಲ್ಲಿ ಸಮಸ್ಯೆ ಉಂಟಾಗಿದ್ದು, ಐಟಿ ವಲಯದಲ್ಲಿ ಟೆಕ್ಕಿಗಳು ದೊಡ್ಡ ಸಮಸ್ಯೆ ಎದುರಿಸುತ್ತಿದ್ದಾರೆ.

ಪ್ರಯಾಣಿಕರಿಗೆ ಬೇಗ ಬರುವಂತೆ ಏರ್​​ಪೋರ್ಟ್​ ಅಧಿಕಾರಿಗಳು ಸೂಚನೆ

ಇತ್ತ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಸಮಸ್ಯೆ ಕಂಡು ಬಂದಿದ್ದು, ವಿಮಾನ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಮ್ಯಾನುವಲ್ ಚೆಕ್ ಇನ್​ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ನಿಗದಿತ ಸಮಯಕ್ಕಿಂತ ಮೊದಲೇ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ವಿಮಾನಯಾನ ಸಂಸ್ಥೆಗಳು ಸೂಚನೆ ನೀಡಿವೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಬೇಟೆ: 30 ಕೋಟಿ ರೂ. ಮೌಲ್ಯದ ಕೊಕೇನ್ ಪತ್ತೆ

ವಿಮಾನ ಸೇವೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಮಂಗಳೂರು ವಿಮಾನ ನಿಲ್ದಾಣ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ಟ್ವೀಟ್​

ಬೆಂಗಳೂರು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ​ನಲ್ಲಿ ಕೂಡ ಪ್ರಯಾಣಿಕರು ಪರದಾಡಿದ್ದು, ಕಳೆದ ನಾಲ್ಕು ಗಂಟೆಗಳಿಂದ ಸರ್ವರ್ ಸಮಸ್ಯೆಯಿಂದ ಕಂಗಾಲಾಗಿದ್ದಾರೆ. ಇಂಡಿಗೋ, ಆಕಾಶ್, ಸ್ಪೈಸ್ ಜೆಟ್ ಮತ್ತು ಏರ್ ಇಂಡಿಯಾ ಏಕ್ಸಪ್ರೇಸ್ ಏರ್ಲೈನ್ಸ್ ಸಂಸ್ಥೆಗಳಲ್ಲಿ ತೊಂದರೆ ಉಂಟಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಸಿಬ್ಬಂದಿಗಳು ಮ್ಯಾನುವಲ್​ ಚೆಕ್ ಇನ್ ಮಾಡಿಸುತ್ತಿದ್ದಾರೆ. ಮ್ಯಾನುವಲ್ ಚೆಕಿಂಗ್​ನಿಂದ ಪ್ರಯಾಣಿಕರು ಕ್ಯೂನಲ್ಲಿ ನಿಲ್ಲುವಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!