ಮೈಕ್ರೋಸಾಫ್ಟ್​ನ ಕ್ಲೌಡ್​ ಸರ್ವಿಸ್​ ಸಮಸ್ಯೆ: ಬೆಂಗಳೂರು, ಮಂಗಳೂರು ಏರ್​​ಪೋರ್ಟ್​​ನಲ್ಲಿ ಮ್ಯಾನುವಲ್ ಚೆಕ್​ ಇನ್​ ವ್ಯವಸ್ಥೆ

ಮೈಕ್ರೋಸಾಫ್ಟ್​ನ ‘ಕ್ಲೌಡ್​’ ಸರ್ವಿಸ್​ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಿಶ್ವದ ವಿಮಾನಯಾನ ಸಂಸ್ಥೆಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಹೀಗಾಗಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮ್ಯಾನುವಲ್ ಚೆಕ್ ಇನ್​​ಗೆ ವ್ಯವಸ್ಥೆ ಮಾಡಲಾಗಿದ್ದು, ನಿಗದಿತ ಸಮಯಕ್ಕಿಂತ ಮೊದಲೇ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ಸೂಚನೆ ನೀಡಲಾಗಿದೆ.

ಮೈಕ್ರೋಸಾಫ್ಟ್​ನ ಕ್ಲೌಡ್​ ಸರ್ವಿಸ್​ ಸಮಸ್ಯೆ: ಬೆಂಗಳೂರು, ಮಂಗಳೂರು ಏರ್​​ಪೋರ್ಟ್​​ನಲ್ಲಿ ಮ್ಯಾನುವಲ್ ಚೆಕ್​ ಇನ್​ ವ್ಯವಸ್ಥೆ
ಮೈಕ್ರೋಸಾಫ್ಟ್​ನ ‘ಕ್ಲೌಡ್​’ಸರ್ವಿಸ್​ ಸಮಸ್ಯೆ: ಬೆಂಗಳೂರು, ಮಂಗಳೂರು ಏರ್​​ಪೋರ್ಟ್​​ನಲ್ಲಿ ಮ್ಯಾನುವಲ್ ಚೆಕ್​ ಇನ್​ ವ್ಯವಸ್ಥೆ
Edited By:

Updated on: Jul 19, 2024 | 3:03 PM

ಮಂಗಳೂರು, ಜುಲೈ 19: ಮೈಕ್ರೋಸಾಫ್ಟ್ ಕ್ಲೌಡ್ ಸರ್ವೀಸ್​ನಲ್ಲಿ ತಾಂತ್ರಿಕ ಸಮಸ್ಯೆ (Microsoft’s cloud service, problem) ಉಂಟಾದ ಹಿನ್ನೆಲೆ ಭಾರತ ಸೇರಿದಂತೆ ಹಲವು ದೇಶಗಳಲ್ಲಿ ವಿಮಾನ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ವಿಶ್ವದ ವಿಮಾನಯಾನ ಸಂಸ್ಥೆಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಬೆಂಗಳೂರಿನ ಕೆಂಪೇಗೌಡ ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡಿದ್ದಾರೆ. ತಾತ್ಕಾಲಿಕವಾಗಿ ಬುಕಿಂಗ್, ಚೆಕ್​​ ಇನ್ ಸೇವೆಗಳ ಮೇಲೆ ಪರಿಣಾಮ ಬೀರಿದ್ದು, ಸ್ಪೆಸ್ ಜೆಟ್, ಇಂಡಿಗೋ ಸಂಸ್ಥೆಗಳಲ್ಲಿ ಹೆಚ್ಚು ಸಮಸ್ಯೆ ಉಂಟಾಗಿದೆ.

ಆರೋಗ್ಯ ವ್ಯವಸ್ಥೆಗಳು ಸೇರಿದಂತೆ ಹಲವು ಭಾಗಗಳಲ್ಲಿ ತುರ್ತು ಸೇವೆಗಳು ಅಸ್ತವ್ಯಸ್ತವಾಗಿದೆ. ಯುರೋಪ್​ನ ಬಹುತೇಕ ಏರ್​​ಲೈನ್ ಕಂಪನಿಗಳಲ್ಲಿ ಸಮಸ್ಯೆ ಉಂಟಾಗಿದ್ದು, ಐಟಿ ವಲಯದಲ್ಲಿ ಟೆಕ್ಕಿಗಳು ದೊಡ್ಡ ಸಮಸ್ಯೆ ಎದುರಿಸುತ್ತಿದ್ದಾರೆ.

ಪ್ರಯಾಣಿಕರಿಗೆ ಬೇಗ ಬರುವಂತೆ ಏರ್​​ಪೋರ್ಟ್​ ಅಧಿಕಾರಿಗಳು ಸೂಚನೆ

ಇತ್ತ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಸಮಸ್ಯೆ ಕಂಡು ಬಂದಿದ್ದು, ವಿಮಾನ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಮ್ಯಾನುವಲ್ ಚೆಕ್ ಇನ್​ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ನಿಗದಿತ ಸಮಯಕ್ಕಿಂತ ಮೊದಲೇ ವಿಮಾನ ನಿಲ್ದಾಣಕ್ಕೆ ಬರುವಂತೆ ಪ್ರಯಾಣಿಕರಿಗೆ ವಿಮಾನಯಾನ ಸಂಸ್ಥೆಗಳು ಸೂಚನೆ ನೀಡಿವೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಬೇಟೆ: 30 ಕೋಟಿ ರೂ. ಮೌಲ್ಯದ ಕೊಕೇನ್ ಪತ್ತೆ

ವಿಮಾನ ಸೇವೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಮಂಗಳೂರು ವಿಮಾನ ನಿಲ್ದಾಣ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ಟ್ವೀಟ್​

ಬೆಂಗಳೂರು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ​ನಲ್ಲಿ ಕೂಡ ಪ್ರಯಾಣಿಕರು ಪರದಾಡಿದ್ದು, ಕಳೆದ ನಾಲ್ಕು ಗಂಟೆಗಳಿಂದ ಸರ್ವರ್ ಸಮಸ್ಯೆಯಿಂದ ಕಂಗಾಲಾಗಿದ್ದಾರೆ. ಇಂಡಿಗೋ, ಆಕಾಶ್, ಸ್ಪೈಸ್ ಜೆಟ್ ಮತ್ತು ಏರ್ ಇಂಡಿಯಾ ಏಕ್ಸಪ್ರೇಸ್ ಏರ್ಲೈನ್ಸ್ ಸಂಸ್ಥೆಗಳಲ್ಲಿ ತೊಂದರೆ ಉಂಟಾಗಿದೆ.


ಪ್ರಯಾಣಿಕರ ಅನುಕೂಲಕ್ಕಾಗಿ ಸಿಬ್ಬಂದಿಗಳು ಮ್ಯಾನುವಲ್​ ಚೆಕ್ ಇನ್ ಮಾಡಿಸುತ್ತಿದ್ದಾರೆ. ಮ್ಯಾನುವಲ್ ಚೆಕಿಂಗ್​ನಿಂದ ಪ್ರಯಾಣಿಕರು ಕ್ಯೂನಲ್ಲಿ ನಿಲ್ಲುವಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Follow Us