AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಳೆ ಹೋಗಿದ್ದ ಮತದಾರರಿಗೆ 1 ದಿನದ ರಾಜ ಮರ್ಯಾದೆ: ಊಟೋಪಚಾರದ ಜೊತೆ ಖರ್ಚು ವೆಚ್ಚ ಭರಿಸಿದ ಅಭ್ಯರ್ಥಿಗಳು

ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ಗುಳೆ ಹೋಗಿದ್ದವರಿಗೆ ಎಲೆಕ್ಷನ್​ ಅಭ್ಯರ್ಥಿಗಳು ರತ್ನಗಂಬಳಿ ಹಾಸಿ ಒಂದು ದಿನದ ಮಟ್ಟಿಗೆ ರಾಜ ಮರ್ಯಾದೆ ನೀಡಿರುವ ಘಟನೆ ಜಿಲ್ಲೆಯ ಇಳಕಲ್​ ಬಳಿಯ ಗುಳೇದಗುಡ್ಡ ಗ್ರಾಮದಲ್ಲಿ ನಡೆದಿದೆ.

ಗುಳೆ ಹೋಗಿದ್ದ ಮತದಾರರಿಗೆ 1 ದಿನದ ರಾಜ ಮರ್ಯಾದೆ: ಊಟೋಪಚಾರದ ಜೊತೆ ಖರ್ಚು ವೆಚ್ಚ ಭರಿಸಿದ ಅಭ್ಯರ್ಥಿಗಳು
ಮತದಾನ ಮಾಡಲು ತವರೂರಿಗೆ ವಾಪಸ್​ ಆದ ಗ್ರಾಮಸ್ಥರು
preethi shettigar
| Edited By: |

Updated on:Dec 27, 2020 | 1:57 PM

Share

ಬಾಗಲಕೋಟೆ: ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ಗುಳೆ ಹೋಗಿದ್ದವರಿಗೆ ಎಲೆಕ್ಷನ್​ ಅಭ್ಯರ್ಥಿಗಳು ರತ್ನಗಂಬಳಿ ಹಾಸಿ ಒಂದು ದಿನದ ಮಟ್ಟಿಗೆ ರಾಜ ಮರ್ಯಾದೆ ನೀಡಿರುವ ಘಟನೆ ಜಿಲ್ಲೆಯ ಇಳಕಲ್​ ಬಳಿಯ ಗುಳೇದಗುಡ್ಡ ಗ್ರಾಮದಲ್ಲಿ ನಡೆದಿದೆ.

ಗ್ರಾಮ ಪಂಚಾಯತಿ ಚುನಾಣೆಯ ಎರಡನೇ ಹಂತ ನಡೆಯುತ್ತಿರುವ ಬೆನ್ನಲ್ಲೇ ಮಂಗಳೂರು, ಬೆಂಗಳೂರು, ಗೋವಾ, ಮಹಾರಾಷ್ಟ್ರಕ್ಕೆ ಗುಳೆ ಹೋಗಿದ್ದ ಗ್ರಾಮಸ್ಥರು ಮತದಾನ ಮಾಡಿ ವಾಪಸ್​ ಹೋಗಲು ಅಭ್ಯರ್ಥಿಗಳು ಈ ಹಿಂದೆ ಮನವಿ ಮಾಡಿಕೊಂಡಿದ್ದರು. ಈ ನಿಟ್ಟಿನಲ್ಲಿ ಗುಳೆ ಹೋದ ಗ್ರಾಮಸ್ಥರಿಗೆ ಓಡಾಟದ ಖರ್ಚುವೆಚ್ಚವನ್ನು ಕೊಡುವ ಭರವಸೆಯನ್ನು ಸಹ ನೀಡಿದ್ದರು.

ಬಾಗಲಕೋಟೆ ಜಿಲ್ಲೆ ಇಳಕಲ್, ಗುಳೇದಗುಡ್ಡ ಬಸ್ ನಿಲ್ದಾಣಕ್ಕೆ ಬಂದ ಮತದಾರರು

ಈ ನಿಟ್ಟಿನಲ್ಲಿ, ಇಳಕಲ್, ಗುಳೇದಗುಡ್ಡ ಬಸ್ ನಿಲ್ದಾಣಗಳಲ್ಲಿ ನೂರಾರು ಜನರು ಬಂದು ಇಳಿದಿದ್ದಾರೆ. ತಾಲೂಕಿನ ವಿವಿಧ ಗ್ರಾಮಗಳಿಗೆ ಮತದಾನಕ್ಕಾಗಿ ಜನರು ತೆರಳಿದ್ದು, ಇಳಕಲ್ ಬಸ್ ನಿಲ್ದಾಣದಿಂದ ಪಕ್ಕದ ರಾಯಚೂರು ಜಿಲ್ಲೆಗೆ ಹೋಗುವ ಜನರು ಸಹ ಇದರಲ್ಲಿ ಇದ್ದಾರೆ. ಊರುಗಳಿಗೆ ವಾಪಸ್​ ಆದವರಿಗೆ ಗುಳೇದಗುಡ್ಡ ಕ್ಯಾಂಟೀನ್​ನಲ್ಲಿ ಉಪಾಹಾರದ ವ್ಯವಸ್ಥೆ ಮಾಡಿ ಬಳಿಕ ಗ್ರಾಮಗಳಿಗೆ ಜನರನ್ನು ಕರೆದುಕೊಂಡು ಹೋಗುವ ವ್ಯವಸ್ಥೆ ಸಹ ಮಾಡಲಾಗಿತ್ತು. ಈ ಬಗ್ಗೆ ಗುಳೆ ಹೋದ ಜನರಲ್ಲಿ ವಿಚಾರಿಸಿದಾಗ ಬಂದು ಹೋಗವ ವಾಹನದ ಚಾರ್ಜ್, ಊಟ, ತಿಂಡಿಗಾಗಿ 2,000 ರೂಪಾಯಿ ಕೊಡುತ್ತೇವೆ ಎಂದಿದ್ದಾರೆ. ಹೀಗಾಗಿ, ನಾವು ಮತದಾನ ಮಾಡಲು ಬಂದಿದ್ದೇವೆ ಎಂದು ತಿಳಿಸಿದ್ದಾರೆ.

ಹೋಟೆಲ್​ನಲ್ಲಿ ಮತದಾರರಿಗೆ ಉಪಾಹಾರ ವ್ಯವಸ್ಥೆ

ಗ್ರಾಮ ಪಂಚಾಯತಿ ಚುನಾವಣಾ ಅಭ್ಯರ್ಥಿಗಳಿಗೆ ಊರು ಬಿಟ್ಟವರೇ ಟಾ​ರ್ಗೆಟ್ ..!

Published On - 1:57 pm, Sun, 27 December 20

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!