AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಸಾಗಿಸುವ ಗುತ್ತಿಗೆ ಪಡೆದಿರುವವರಿಂದಲೇ ಹಾಲಿಗೆ ನೀರು ಮಿಕ್ಸ್! ಮಂಡ್ಯದಲ್ಲಿ ಬೆಳಕಿಗೆ ಬಂತು ಭಾರೀ ಗೋಲ್​ಮಾಲ್

ನೀರು ಮಿಶ್ರಿತ ಹಾಲು ಬರುವಂತೆ ಟ್ಯಾಂಕರ್ ವಿನ್ಯಾಸಗೊಳಿಸಿ ಟ್ಯಾಂಕರ್ ಒಳಭಾಗದಲ್ಲಿ ನೀರು ತುಂಬಲು ಪ್ರತ್ಯೇಕ ವಿಭಾಗ ರೂಪಿಸಿದ್ದರು. ಅನುಮಾನಗೊಂಡು ಒಕ್ಕೂಟದ ಅಧ್ಯಕ್ಷ ರಾಮಚಂದ್ರು ನೇತೃತ್ವದಲ್ಲಿ ತಪಾಸಣೆ ನಡೆಸಿದಾಗ ಜಾಲ ಬಯಲಾಗಿದ್ದು, ವಂಚನೆ ನಡೆಸಲು ಬಳಸಿದ ವಿಧಾನಕ್ಕೆ ಆಡಳಿತ ಮಂಡಳಿ ದಂಗಾಗಿದೆ.

ಹಾಲು ಸಾಗಿಸುವ ಗುತ್ತಿಗೆ ಪಡೆದಿರುವವರಿಂದಲೇ ಹಾಲಿಗೆ ನೀರು ಮಿಕ್ಸ್! ಮಂಡ್ಯದಲ್ಲಿ ಬೆಳಕಿಗೆ ಬಂತು ಭಾರೀ ಗೋಲ್​ಮಾಲ್
ಹಾಲಿಗೆ ನೀರು ಬೆರೆಸಲು ಉಪಯೋಗಿಸುತ್ತಿದ್ದ ವಾಹನ
guruganesh bhat
|

Updated on: May 31, 2021 | 3:56 PM

Share

ಮಂಡ್ಯ: ಹಾಲಿಗೆ ನೀರು ಮಿಶ್ರಣ ಮಾಡಿ ವಂಚಿಸುತ್ತಿದ್ದ ಜಾಲ ಪತ್ತೆಯಾಗಿದ್ದು ಜಿಲ್ಲಾದ್ಯಂತ ಸಂಚಲನ ಸೃಷ್ಟಿಸಿದೆ. ಹಾಲು ಸಾಗಿಸುವ ಗುತ್ತಿಗೆ ಪಡೆದಿರುವವರಿಂದಲೇ ನಿತ್ಯ ಸಾವಿರಾರು ಲೀಟರ್ ಹಾಲಿಗೆ ನೀರು ಮಿಶ್ರಣ ಮಾಡಿ ಸಾಗಿಸುತ್ತಿದ್ದ ಜಾಲವೊಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಸಿಕ್ಕಿಬಿದ್ದಿದೆ. ಶಿಥಿಲೀಕರಣ ಕೇಂದ್ರಗಳಿಂದ ಒಕ್ಕೂಟಕ್ಕೆ ಸಾಗಿಸುವ ಹಾಲಿಗೆ ನೀರು ಮಿಶ್ರಣ ಮಾಡಿ ವಂಚಿಸಲಾಗುತ್ತಿದ್ದು, ಹಾಲಿನ ಪರೀಕ್ಷೆ ಮುಗಿದ ಬಳಿಕ ನೀರು ಮಿಶ್ರಣವಾಗುತ್ತಿತ್ತು ಎಂದು ಹೇಳಲಾಗಿದೆ.

ನೀರು ಮಿಶ್ರಿತ ಹಾಲು ಬರುವಂತೆ ಟ್ಯಾಂಕರ್ ವಿನ್ಯಾಸಗೊಳಿಸಿ ಟ್ಯಾಂಕರ್ ಒಳಭಾಗದಲ್ಲಿ ನೀರು ತುಂಬಲು ಪ್ರತ್ಯೇಕ ವಿಭಾಗ ರೂಪಿಸಿದ್ದರು. ಅನುಮಾನಗೊಂಡು ಒಕ್ಕೂಟದ ಅಧ್ಯಕ್ಷ ರಾಮಚಂದ್ರು ನೇತೃತ್ವದಲ್ಲಿ ತಪಾಸಣೆ ನಡೆಸಿದಾಗ ಜಾಲ ಬಯಲಾಗಿದ್ದು, ವಂಚನೆ ನಡೆಸಲು ಬಳಸಿದ ವಿಧಾನಕ್ಕೆ ಆಡಳಿತ ಮಂಡಳಿ ದಂಗಾಗಿದೆ. ಸದ್ಯ 6 ಟ್ಯಾಂಕರ್​ಗಳನ್ನು ವಶಕ್ಕೆ ಪಡೆದ ಮದ್ದೂರು ಪೊಲೀಸರಿಂದ ತನಿಖೆ ಆರಂಭಿಸಿದ್ದಾರೆ.

ನಮ್ಮ ಹಾಲು ಒಕ್ಕೂಟಕ್ಕೆ ಜಿಲ್ಲೆಯ ಹಳ್ಳಿಗಳಿಂದ ಸಂಗ್ರಹಿಸಿ ತರಲಾಗುತ್ತಿದ್ದ ಹಾಲಿನ ಟ್ಯಾಂಕರ್ ಗಳ ಪೈಕಿ ಕೆಲವು ಮಾರ್ಗಗಳಿಂದ ಬರುವ ಟ್ಯಾಂಕರ್ ಗಳಲ್ಲಿನ ಹಾಲಿನ ಗುಣಮಟ್ಟ ಕಡಿಮೆಯಾಗುತ್ತಿತ್ತು. ಲಾಕ್ ಡೌನ್ ಸಮಯದಲ್ಲಿ ಅದು ಹೆಚ್ಚಾಗತೊಡಗಿತ್ತು. ಈ ಬಗ್ಗೆ ಒಂದು ತಿಂಗಳಿನಿಂದ ಪರಿಶೀಲನೆ ನಡೆಸಿದಾಗ ಹಗರಣ ಬೆಳಕಿಗೆ ಬಂದಿದೆ ಎಂದು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ರಾಮಚಂದ್ರ ಅವರು ಟಿವಿ9ಗೆ ತಿಳಿಸಿದ್ದಾರೆ.

ಗೆಜ್ಜಲಗೆರೆ ಡೈರಿಯಲ್ಲಿ ಹಾಲಿಗೆ ನೀರು ಸೇರಿಸಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಸಚಿವ ನಾರಾಯಣಗೌಡ ಡೈರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಒಕ್ಕೂಟದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಎಲ್ಲರ ಸಮ್ಮುಖದಲ್ಲಿ ಹಾಲು ಸಾಗಿಸುವ ವಾಹನದಲ್ಲಿ ನೀರು ಮಿಕ್ಸ್ ಮಾಡುತ್ತಿದ್ದ ಬಗೆಯನ್ನು ಸಚಿವ ನಾರಾಯಣಗೌಡ ವೀಕ್ಷಿಸಿದರು.

ಇಷ್ಟೊಂದು ದೊಡ್ಡ ಪ್ರಮಾಣದ ಹಗರಣ ನಡೆದಿರೋದು ಅಚ್ಚರಿ ತಂದಿದೆ. ಇದರ ಹಿಂದೆ ಇರುವವರನ್ನು ತನಿಖೆಯ ಮೂಲಕ ಬಯಲಿಗೆಳೆಯಬೇಕಿದೆ ಎಂದ ಸಚಿವ ನಾರಾಯಣಗೌಡ ಪ್ರಕರಣ ಬಯಲಿಗೆ ತಂದ ಆಡಳಿತಮಂಡಳಿಗೆ ಅಭಿನಂದನೆ ಸಲ್ಲಿಸಿದರು. ಜತೆಗೆ ಘಟನೆಯಿಂದ ಯಾರಿಗಾದರೂ ಬೆದರಿಕೆ ಇದ್ದರೆ ಡೈರಿಯಲ್ಲಿ ಭದ್ರತೆ ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಇದನ್ನೂ ಓದಿ:ಡಿಜಿಟಲ್ ಡಿವೈಡ್ ಇರುವ ದೇಶದಲ್ಲಿ ಲಸಿಕೆ ಪಡೆಯಲು ಕೊವಿನ್ ಪೋರ್ಟಲ್​ನಲ್ಲಿ ಕಡ್ಢಾಯ ನೋಂದಣಿ ಹೇಗೆ ಸಾಧ್ಯ? ಸುಪ್ರೀಂಕೋರ್ಟ್

ಕೊವಿಡ್​ ಮತ್ತೆ ಆವರಿಸಿದೆ ಚೀನಾದಲ್ಲಿ; ಲಸಿಕೆ ಪಡೆಯಲು ಜನ ಪರದಾಟ; ಹೊಸ ಕೇಸ್​ ಪತ್ತೆಯಾಗುತ್ತಿದ್ದಂತೆ ವಿಮಾನ ಹಾರಾಟ ರದ್ದು

(Milk and water mixture golmaal by contractor found in Mandya district maddur)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?